AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ ಅವಘಡ; ಕಂಪ್ಯೂಟರ್, ಕೆಲ ದಾಖಲೆಗಳು ಸುಟ್ಟು ಭಸ್ಮ

ಬಿಬಿಎಂಪಿ (BBMP) ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅವಘಡದಲ್ಲಿ ಕಂಪ್ಯೂಟರ್, ಕೆಲ ದಾಖಲೆಗಳು ಸುಟ್ಟು ಭಸ್ಮವಾಗಿದೆ. ಸ್ಥಳಕ್ಕಾಗಮಿಸಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಶಾರ್ಟ್​ ಸರ್ಕ್ಯೂಟ್​ನಿಂದ ಈ ಘಟನೆ ನಡೆದಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ ಅವಘಡ; ಕಂಪ್ಯೂಟರ್, ಕೆಲ ದಾಖಲೆಗಳು ಸುಟ್ಟು ಭಸ್ಮ
ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ ಅವಘಡ
Shivaprasad B
| Edited By: ಕಿರಣ್ ಹನುಮಂತ್​ ಮಾದಾರ್|

Updated on:Aug 02, 2024 | 5:50 PM

Share

ಬೆಂಗಳೂರು, ಆ.02: ಬ್ಯಾಟರಾಯನಪುರ ಬಳಿಯ ಬಿಬಿಎಂಪಿ (BBMP) ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅವಘಡದಲ್ಲಿ ಕಂಪ್ಯೂಟರ್, ಕೆಲ ದಾಖಲೆಗಳು ಸುಟ್ಟು ಭಸ್ಮವಾಗಿದೆ. ಸ್ಥಳಕ್ಕಾಗಮಿಸಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಶಾರ್ಟ್​ ಸರ್ಕ್ಯೂಟ್​ನಿಂದ ಈ ಘಟನೆ ನಡೆದಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಇಂದು (ಶುಕ್ರವಾರ) ಬೆಳಗ್ಗೆ 9 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇನ್ನು ಕಳೆದ ವರ್ಷ 2023 ಆಗಸ್ಟ್​ 11 ರಂದು ಬಿಬಿಎಂಪಿ ಮುಖ್ಯ ಕಚೇರಿಯ ಬಿಬಿಎಂಪಿ ಗುಣ ನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿ, ಬರೋಬ್ಬರಿ 9 ಮಂದಿ ಗಾಯಗೊಂಡಿದ್ದರು.   ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡ ಹಿನ್ನೆಲೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ 9 ಮಂದಿಯನ್ನು ಪೊಲೀಸ್ ವಾಹನದಲ್ಲಿಯೇ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಇದೀಗ ಮತ್ತೊಂದು ಬೆಂಕಿ ಅನಾಹುತ ನಡೆದಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಗೋದಾಮಿನಲ್ಲಿ ಬೆಂಕಿ ಅವಘಡ: 30 ರಿಂದ 40 ವಾಹನಗಳು ಬೆಂಕಿಗಾಹುತಿ

ಅಂದು ಘಟನೆ ನಡೆದ ಕಟ್ಟಡದಲ್ಲಿಯೇ ಬಿಬಿಎಂಪಿಯ ಮಹತ್ವದ ದಾಖಲೆಗಳಿದ್ದ ರೆಕಾರ್ಡ್ಸ್ ರೂಮ್ ಇತ್ತು. ಅದೃಷ್ಟವಶಾತ್ ಆ ರೂಮ್‌ಗೆ ಯಾವುದೇ ಹಾನಿ ಆಗಿರಲಿಲ್ಲ. ಈ ಕುರಿತು ಅಧಿಕಾರಿಯೊಬ್ಬರು ಮಾತನಾಡಿ, ‘ಬೆಂಜೀನ್ ಎನ್ನುವ ಕೆಮಿಕಲ್ ಸ್ಫೋಟವಾಗಿರುವುದು ಬೆಂಕಿ ಅವಘಡಕ್ಕೆ ಕಾರಣವಾಗಿದೆ. ಈ ಕೆಮಿನಲ್​ನ್ನು ಬಿಟುಮಿನ್ ಟೆಸ್ಟ್‌ಗೆ ಬಳಸಲಾಗುತ್ತದೆ ಎಂದು  ಹೇಳಿದ್ದರು. ಈ ಘಟನೆ ನಡೆದರೂ ಎಚ್ಚೆತ್ತುಕೊಳ್ಳದ ಬಿಬಿಎಂಪಿ ಕಛೇರಿಯಲ್ಲಿ ಇದೀಗ ಮತ್ತೊಂದು ಅವಘಡ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:26 pm, Fri, 2 August 24

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ