ಬೆಂಗಳೂರು: ರಾಕೆಟ್​ ಸಿಡಿತದಿಂದ ಬಾಲಕನಿಗೆ ಗಾಯ, ಪ್ರಶ್ನಿಸಿದ್ದಕ್ಕೆ ತಾಯಿ ಮೇಲೆ ಹಲ್ಲೆ; ದೂರು ದಾಖಲು

ಬಾಲಕನನ್ನು (10 ವರ್ಷ) ಗುರಿಯಾಗಿಸಿ ರಾಕೆಟ್‌ ಹಾರಿಸಿ ಗಾಯಗೊಳಿಸಿದ ಆರೋಪದ ಮೇಲೆ ಮಲ್ಲಿಕಾರ್ಜುನ ಎಂಬುವರ ವಿರುದ್ಧ ಬೈಯಪ್ಪನಹಳ್ಳಿ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಾಗಿದೆ. ಮಲ್ಲಿಕಾರ್ಜುನ ಕೂಡ ಬಾಲಕನ ಕುಟುಂಬಸ್ಥರ ವಿರುದ್ಧ ದೂರು ದಾಖಲಿಸಿದ್ದಾರೆ.

ಬೆಂಗಳೂರು: ರಾಕೆಟ್​ ಸಿಡಿತದಿಂದ ಬಾಲಕನಿಗೆ ಗಾಯ, ಪ್ರಶ್ನಿಸಿದ್ದಕ್ಕೆ ತಾಯಿ ಮೇಲೆ ಹಲ್ಲೆ; ದೂರು ದಾಖಲು
ಸಾಂದರ್ಭಿಕ ಚಿತ್ರ
Follow us
|

Updated on:Nov 20, 2023 | 6:55 AM

ಬೆಂಗಳೂರು ನ.20: ಬಾಲಕನನ್ನು (10 ವರ್ಷ) ಗುರಿಯಾಗಿಸಿ ರಾಕೆಟ್‌ ಹಾರಿಸಿ (Firecrackers) ಗಾಯಗೊಳಿಸಿದ ಆರೋಪದ ಮೇಲೆ ಮಲ್ಲಿಕಾರ್ಜುನ (24 ವರ್ಷ) ಎಂಬುವವರ ವಿರುದ್ಧ ದೂರು ದಾಖಲಾಗಿದೆ. ಮಂಗಳವಾರ ಘಟನೆ ನಡೆದಿದ್ದು, ಎರಡು ದಿನಗಳ ನಂತರ ಬಾಲಕನ ಚಿಕ್ಕಮ್ಮ ಬೈಯಪ್ಪನಹಳ್ಳಿ ಪೊಲೀಸ್ (Police)​​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಗಾಯಾಳುಗಳು ಮತ್ತು ಆರೋಪಿ ಮಲ್ಲಿಕಾರ್ಜುನ ಹೊಸನಗರ ನಿವಾಸಿಗಳಾಗಿದ್ದಾರೆ. ಬಾಲಕ ಹೇಳಿಕೆ ಪ್ರಕಾರ ” ಮಲ್ಲಿಕಾರ್ಜುನ ಮತ್ತು ಆತನ ನೆರೆಹೊರೆಯವರು ಉದ್ದೇಶಪೂರ್ವಕವಾಗಿ ನನ್ನನ್ನು ಗುರಿಯಾಗಿಸಿಕೊಂಡು ರಾಕೆಟ್​​ ಹಾರಿಸಿ ಗಾಯಗೊಳಿಸಿದ್ದಾರೆ” ಎಂದು ಬಾಲಕ ಪೋಷಕರಿಗೆ ತಿಳಿಸಿದ್ದಾನೆ.

ಇದರಿಂದ ಎರಡೂ ಕುಟುಂಬಗಳ ನಡುವೆ ಮಾತಿನ ಚಕಮಕಿ, ಮಾತಿನ ಚಕಮಕಿ ನಡೆಯಿತು. ಬಾಲಕನ ತಾಯಿ ಪ್ರಶ್ನಿಸಲು ಹೋದಾಗ, ಆರೋಪಿ ಮಲ್ಲಿಕಾರ್ಜುನ ಆಕೆಯ ಮುಖಕ್ಕೆ ಹೊಡೆದಿದ್ದಾನೆ. ಅಲ್ಲದೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪ ಕೇಳಿಬಂದಿದೆ.

ಮಲ್ಲಿಕಾರ್ಜುನ ಕೂಡ ಬಾಲಕನ ತಾಯಿ ಮತ್ತು ಕುಟುಂಬದ ವಿರುದ್ಧ ದೂರು ದಾಖಲಿಸಿದ್ದಾರೆ. ನಾನು ಯಾವುದೇ ಪಟಾಕಿ ಸಿಡಿಸಿಲ್ಲ, ಮಕ್ಕಳು ಪಟಾಕಿ ಸಿಡಿಸುವುದನ್ನು ನೋಡುತ್ತಿದ್ದೆ ಅಷ್ಟೇ ಎಂದು ಮಲ್ಲಿಕಾರ್ಜುನ ದೂರಿನಲ್ಲಿ ತಿಳಿಸಿದ್ದಾರೆ. ತನ್ನ ಜೊತೆಗೆ ತನ್ನ 18 ವರ್ಷದ ಸಹೋದರಿಯನ್ನೂ ಥಳಿಸಿದ್ದಾರೆ ಎಂದು ಮಲ್ಲಿಕಾರ್ಜುನ ಹೇಳಿದ್ದಾರೆ.

ದೂರು ಮತ್ತು ಪ್ರತಿದೂರು ಗುರುವಾರ ಮಧ್ಯಾಹ್ನ ದಾಖಲಾಗಿದೆ. ಎರಡೂ ಕಡೆಯವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಬಾಲಕ ಅಪಾಯದಿಂದ ಪಾರಾಗಿದ್ದು, ರಾಕೆಟ್ ಪಟಾಕಿಯನ್ನು ಹೊತ್ತಿಸಿದವನು ಮಲ್ಲಿಕಾರ್ಜುನ ಎಂದು ಬಾಲಕ ಹೇಳಿಕೊಳ್ಳುತ್ತಲೇ ಇದ್ದಾನೆ. ಪ್ರಕರಣದ ತನಿಖೆ ನಡೆಯುತ್ತಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:55 am, Mon, 20 November 23

ತಾಜಾ ಸುದ್ದಿ
ನಾಲ್ಕನೇ ಟಿ20 ಪಂದ್ಯಕ್ಕಾಗಿ ರಾಯ್​ಪುರ ತಲುಪಿದ ಟೀಮ್ ಇಂಡಿಯಾ ಆಟಗಾರರು
ನಾಲ್ಕನೇ ಟಿ20 ಪಂದ್ಯಕ್ಕಾಗಿ ರಾಯ್​ಪುರ ತಲುಪಿದ ಟೀಮ್ ಇಂಡಿಯಾ ಆಟಗಾರರು
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜಗಳ ನೆನಪಿಸಿಕೊಂಡ ಗೆಳತಿ ಸಂಜನಾ ಗಲ್ರಾನಿ
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜಗಳ ನೆನಪಿಸಿಕೊಂಡ ಗೆಳತಿ ಸಂಜನಾ ಗಲ್ರಾನಿ
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​