Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ರಾಕೆಟ್​ ಸಿಡಿತದಿಂದ ಬಾಲಕನಿಗೆ ಗಾಯ, ಪ್ರಶ್ನಿಸಿದ್ದಕ್ಕೆ ತಾಯಿ ಮೇಲೆ ಹಲ್ಲೆ; ದೂರು ದಾಖಲು

ಬಾಲಕನನ್ನು (10 ವರ್ಷ) ಗುರಿಯಾಗಿಸಿ ರಾಕೆಟ್‌ ಹಾರಿಸಿ ಗಾಯಗೊಳಿಸಿದ ಆರೋಪದ ಮೇಲೆ ಮಲ್ಲಿಕಾರ್ಜುನ ಎಂಬುವರ ವಿರುದ್ಧ ಬೈಯಪ್ಪನಹಳ್ಳಿ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಾಗಿದೆ. ಮಲ್ಲಿಕಾರ್ಜುನ ಕೂಡ ಬಾಲಕನ ಕುಟುಂಬಸ್ಥರ ವಿರುದ್ಧ ದೂರು ದಾಖಲಿಸಿದ್ದಾರೆ.

ಬೆಂಗಳೂರು: ರಾಕೆಟ್​ ಸಿಡಿತದಿಂದ ಬಾಲಕನಿಗೆ ಗಾಯ, ಪ್ರಶ್ನಿಸಿದ್ದಕ್ಕೆ ತಾಯಿ ಮೇಲೆ ಹಲ್ಲೆ; ದೂರು ದಾಖಲು
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:Nov 20, 2023 | 6:55 AM

ಬೆಂಗಳೂರು ನ.20: ಬಾಲಕನನ್ನು (10 ವರ್ಷ) ಗುರಿಯಾಗಿಸಿ ರಾಕೆಟ್‌ ಹಾರಿಸಿ (Firecrackers) ಗಾಯಗೊಳಿಸಿದ ಆರೋಪದ ಮೇಲೆ ಮಲ್ಲಿಕಾರ್ಜುನ (24 ವರ್ಷ) ಎಂಬುವವರ ವಿರುದ್ಧ ದೂರು ದಾಖಲಾಗಿದೆ. ಮಂಗಳವಾರ ಘಟನೆ ನಡೆದಿದ್ದು, ಎರಡು ದಿನಗಳ ನಂತರ ಬಾಲಕನ ಚಿಕ್ಕಮ್ಮ ಬೈಯಪ್ಪನಹಳ್ಳಿ ಪೊಲೀಸ್ (Police)​​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಗಾಯಾಳುಗಳು ಮತ್ತು ಆರೋಪಿ ಮಲ್ಲಿಕಾರ್ಜುನ ಹೊಸನಗರ ನಿವಾಸಿಗಳಾಗಿದ್ದಾರೆ. ಬಾಲಕ ಹೇಳಿಕೆ ಪ್ರಕಾರ ” ಮಲ್ಲಿಕಾರ್ಜುನ ಮತ್ತು ಆತನ ನೆರೆಹೊರೆಯವರು ಉದ್ದೇಶಪೂರ್ವಕವಾಗಿ ನನ್ನನ್ನು ಗುರಿಯಾಗಿಸಿಕೊಂಡು ರಾಕೆಟ್​​ ಹಾರಿಸಿ ಗಾಯಗೊಳಿಸಿದ್ದಾರೆ” ಎಂದು ಬಾಲಕ ಪೋಷಕರಿಗೆ ತಿಳಿಸಿದ್ದಾನೆ.

ಇದರಿಂದ ಎರಡೂ ಕುಟುಂಬಗಳ ನಡುವೆ ಮಾತಿನ ಚಕಮಕಿ, ಮಾತಿನ ಚಕಮಕಿ ನಡೆಯಿತು. ಬಾಲಕನ ತಾಯಿ ಪ್ರಶ್ನಿಸಲು ಹೋದಾಗ, ಆರೋಪಿ ಮಲ್ಲಿಕಾರ್ಜುನ ಆಕೆಯ ಮುಖಕ್ಕೆ ಹೊಡೆದಿದ್ದಾನೆ. ಅಲ್ಲದೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪ ಕೇಳಿಬಂದಿದೆ.

ಮಲ್ಲಿಕಾರ್ಜುನ ಕೂಡ ಬಾಲಕನ ತಾಯಿ ಮತ್ತು ಕುಟುಂಬದ ವಿರುದ್ಧ ದೂರು ದಾಖಲಿಸಿದ್ದಾರೆ. ನಾನು ಯಾವುದೇ ಪಟಾಕಿ ಸಿಡಿಸಿಲ್ಲ, ಮಕ್ಕಳು ಪಟಾಕಿ ಸಿಡಿಸುವುದನ್ನು ನೋಡುತ್ತಿದ್ದೆ ಅಷ್ಟೇ ಎಂದು ಮಲ್ಲಿಕಾರ್ಜುನ ದೂರಿನಲ್ಲಿ ತಿಳಿಸಿದ್ದಾರೆ. ತನ್ನ ಜೊತೆಗೆ ತನ್ನ 18 ವರ್ಷದ ಸಹೋದರಿಯನ್ನೂ ಥಳಿಸಿದ್ದಾರೆ ಎಂದು ಮಲ್ಲಿಕಾರ್ಜುನ ಹೇಳಿದ್ದಾರೆ.

ದೂರು ಮತ್ತು ಪ್ರತಿದೂರು ಗುರುವಾರ ಮಧ್ಯಾಹ್ನ ದಾಖಲಾಗಿದೆ. ಎರಡೂ ಕಡೆಯವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಬಾಲಕ ಅಪಾಯದಿಂದ ಪಾರಾಗಿದ್ದು, ರಾಕೆಟ್ ಪಟಾಕಿಯನ್ನು ಹೊತ್ತಿಸಿದವನು ಮಲ್ಲಿಕಾರ್ಜುನ ಎಂದು ಬಾಲಕ ಹೇಳಿಕೊಳ್ಳುತ್ತಲೇ ಇದ್ದಾನೆ. ಪ್ರಕರಣದ ತನಿಖೆ ನಡೆಯುತ್ತಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:55 am, Mon, 20 November 23

ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ