AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಾದ್ಯಂತ ಪಟಾಕಿಗಳ ಮಾರಾಟ ಆರಂಭ, ಈ ಬಾರಿ ‘ಹಸಿರು’ ಪಟಾಕಿಗೆ ವ್ಯಾಪಾರಿಗಳು ಒತ್ತು

ದೀಪಾವಳಿ ಆಚರಣೆಗೆ ಈಗಿನಿಂದಲ್ಲೇ ತಯಾರಿ ನಡೆಯುತ್ತಿದೆ. ದಸರಾ ಮುಗಿಯುತ್ತಿದ್ದಂತೆ ಎಲ್ಲ ಕಡೆ ದೀಪಾವಳಿ ಹಬ್ಬಕ್ಕೆ ತಯಾರಿ ನಡೆಯುತ್ತಿದೆ. ಅದರಲ್ಲೂ ಈ ಬಾರಿ ಪಟಾಕಿ ಮಾರಾಟದ ಬಗ್ಗೆ ಕೆಲವೊಂದು ನಿಯಮಗಳನ್ನು ಸರ್ಕಾರ ಈಗಿನಿಂದಲ್ಲೇ ಜಾರಿಗೊಳಿಸಿದೆ. ಈ ಬಾರಿ ಸರ್ಕಾರದ ಜತೆಗೆ ಪಟಾಕಿ ಮಾರಾಟ ವರ್ತಕರು ಕೂಡ ಕೈಜೋಡಿಸಿದ್ದಾರೆ. ಯಾವೆಲ್ಲ ಕ್ರಮಗಳನ್ನು ಹಾಗೂ ನಿಯಮಗಳನ್ನು ತರಲಾಗಿದೆ ಎಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ

ಬೆಂಗಳೂರಿನಾದ್ಯಂತ ಪಟಾಕಿಗಳ ಮಾರಾಟ ಆರಂಭ, ಈ ಬಾರಿ 'ಹಸಿರು' ಪಟಾಕಿಗೆ ವ್ಯಾಪಾರಿಗಳು ಒತ್ತು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Oct 03, 2025 | 4:59 PM

Share

ಈ ಬಾರಿ ದೀಪಾವಳಿ ತುಂಬಾ ವಿಭಿನ್ನವಾಗಿ ಆಚರಣೆ ಮಾಡಲಿ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಮಾಲಿನ್ಯರಹಿತವಾಗಿ ದೀಪಾವಳಿ ಆಚರಣೆಯನ್ನು (green’ fireworks) ಮಾಡಬೇಕು ಎಂಬುದು ಸರ್ಕಾರ ಪ್ರತಿವರ್ಷ ಒಂದು ಮಾನದಂಡವನ್ನು ಹಾಕಿಕೊಳ್ಳುತ್ತಿತ್ತು. ಈ ಬಾರಿ ಅದನ್ನು ಕಟ್ಟುನಿಟ್ಟಾಗಿ ತರಲು ಮುಂದಾಗಿದೆ. ಬೆಂಗಳೂರು ಮತ್ತು ಅದರ ಹೊರವಲಯಗಳಲ್ಲಿ ಬೆಳಕಿನ ಹಬ್ಬಕ್ಕೆ ಈಗಲೇ ತಯಾರಿ ನಡೆಯುತ್ತಿದೆ. ಈಗಾಗಲೇ ಪಟಾಕಿ ಮಾರಾಟಕ್ಕೆ ಕ್ಷಣಗಣನೆ ಶುರುವಾಗಿದೆ. ಅದರಲ್ಲೂ ಹೊಸೂರಿನಂತಹ ಗಡಿ ಪ್ರದೇಶಗಳಲ್ಲಿ ಇದರ ಬೇಡಿಕೆ ಈಗಿನಿಂದಲ್ಲೇ ಶುರುವಾಗಿದೆ. ಈ ವರ್ಷ ವ್ಯಾಪಾರ ಇನ್ನು ಆಶಾದಾಯಕವಾಗಿವೆ, ವಿಶೇಷವಾಗಿ ನಗರದ ಹೊರವಲಯ ಮತ್ತು ಹೊಸೂರಿನಂತಹ ಗಡಿ ಪಟ್ಟಣಗಳ ಸುತ್ತಮುತ್ತ ಪಟಾಕಿ ಮಾರಾಟ ಇಂದಿನ ಶುರುವಾಗಿದೆ. ಈ ಕುರಿತು ವಿಶಾಲ ಕರ್ನಾಟಕ ಪಟಾಕಿ ವರ್ತಕರ ಕ್ಷೇಮ ಅಭಿವೃದ್ಧಿ ಸಂಘದ ರಾಜ್ಯ ಅಧ್ಯಕ್ಷ ಕೇಶವ ಕೆಲವೊಂದು ವಿಚಾರಗಳನ್ನು ಹಿಂದೂಸ್ಥಾನ್​​​ ಟೈಮ್​ಸ್​​​​ ಜತೆಗೆ ಹಂಚಿಕೊಂಡಿದ್ದಾರೆ. “ಸರ್ಕಾರ ನಮಗಾಗಿ ಮಳಿಗೆಗಳನ್ನು ಒದಗಿಸಿದೆ ಮತ್ತು ಜನರಲ್ಲಿ ಪಟಾಕಿಗಳೊಂದಿಗೆ ಹಬ್ಬವನ್ನು ಆಚರಿಸುವ ಉತ್ಸಾಹ ಇನ್ನೂ ಜೀವಂತವಾಗಿದೆ” ಎಂದು ಹೇಳಿದ್ದಾರೆ.

ಪಟಾಕಿ ಮಾರಾಟಕ್ಕಾಗಿ ವ್ಯಾಪಾರಿಗಳಿಗೆ ಮಳಿಗೆಗಳ ಹಂಚಿಕೆ:

ಹಬ್ಬದ ಋತುವಿನಲ್ಲಿ ಸುರಕ್ಷಿತ ಮತ್ತು ನಿಯಂತ್ರಿತ ಮಾರಾಟವನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಕರ್ನಾಟಕದಾದ್ಯಂತ ಗೊತ್ತುಪಡಿಸಿದ ಅಧಿಕೃತ ಕೇಂದ್ರಗಳಲ್ಲಿ ಪಟಾಕಿ ಅಂಗಡಿಗಳನ್ನು ಹಂಚಿಕೆ ಮಾಡುತ್ತದೆ. ಬೆಂಗಳೂರಿನ ಪ್ರತಿ ವಾರ್ಡ್‌ನಲ್ಲಿರುವ ಬಿಬಿಎಂಪಿ ಆಟದ ಮೈದಾನಗಳಲ್ಲಿ ಪಟಾಕಿ ಅಂಗಡಿಗಳನ್ನು ಸ್ಥಾಪಿಸಲಾಗುವುದು. ಅವುಗಳ ಸೂಕ್ತತೆಯನ್ನು ಪರಿಶೀಲಿಸಲು ನಾಗರಿಕ ಅಧಿಕಾರಿಗಳು ಸುರಕ್ಷತಾ ತಪಾಸಣೆ ನಡೆಸುತ್ತಾರೆ. ನಂತರ ಪೊಲೀಸ್ ಆಯುಕ್ತರು ಹಂಚಿಕೆ ಪ್ರಕ್ರಿಯೆಯನ್ನು ನೋಡಿಕೊಳ್ಳುತ್ತಾರೆ. ಇದರ ಜತೆಗೆ ಪಾರದರ್ಶಕತೆಯನ್ನು ಹೆಚ್ಚಿಸಲು ಪರವಾನಗಿಗೆ ಪಡೆದ ವ್ಯಾಪಾರಿಗಳಿಗೆ ಮಳಿಗೆಗಳನ್ನು ನಿಯೋಜಿಸುತ್ತಾರೆ.

ಇದನ್ನೂ ಓದಿ: ಬೆಂಗಳೂರು ಕುಡಿಯುವ ನೀರಿನ ಘಟಕಗಳಿಗೆ ಡಿಜಿಟಲ್ ಸ್ಪರ್ಶ: ಇನ್ಮುಂದೆ ಕಾಯಿನ್ ಬೇಡ ಫೋನ್​ ಪೇ, ಗೂಗಲ್ ಪೇ ಮಾಡಿ ನೀರು ತನ್ನಿ!

ಹಸಿರು ಪಟಾಕಿಗಳು ಮಾತ್ರ

ಈ ದೀಪಾವಳಿಯಲ್ಲಿ ಮಾರಾಟವಾಗುವ ಎಲ್ಲಾ ಪಟಾಕಿಗಳು ಹಸಿರು ಪಟಾಕಿಗಳಾಗಿವೆ. ಪಟಾಕಿ ಉತ್ಪಾದನೆಯ ಕೇಂದ್ರವಾದ ಶಿವಕಾಶಿಯಿಂದ ತಯಾರಿಸಲ್ಪಟ್ಟ ಮತ್ತು ಸಾಗಿಸಲಾದ ಎಲ್ಲವೂ ಹಸಿರು ಮಾನದಂಡಗಳನ್ನು ಅನುಸರಿಸುತ್ತದೆ ಎಂದು ಕೇಶವ ಅವರು ಹೇಳಿದ್ದಾರೆ. ಈ ಹಸಿರು ಪಟಾಕಿಗಳಿಗೆ QR ಕೋಡ್, ಹಸಿರು ನಿಶಾನ (ಹಸಿರು ಗುರುತು) ಮತ್ತು NIRI ಲೋಗೋದೊಂದಿಗೆ ಬರುತ್ತವೆ. ಇದರ ಜತೆಗೆ ಶಬ್ದ ಮಟ್ಟವನ್ನು ಕೂಡ ಇದು ಕಡಿಮೆ ಮಾಡುತ್ತದೆ ಎಂದು ಹೇಳಿದೆ. ಎರಡು ವರ್ಷಗಳ ಹಿಂದೆ, ಸರ್ಕಾರ ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸಬೇಕು ಎಂಬ ನಿಯಮ ಜಾರಿಗೊಳಿಸಿತ್ತು, ಇದೀಗ ಕರ್ನಾಟಕದಾದ್ಯಂತ ಎಲ್ಲಾ ತಯಾರಕರು ಈ ಬದಲಾವಣೆಗೆ ಮುಂದಾಗಿದ್ದಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಔಪಚಾರಿಕ ಮಾರುಕಟ್ಟೆಯಲ್ಲಿ ನೀವು ಯಾವುದೇ ಹಸಿರು ಅಲ್ಲದ ಪಟಾಕಿಗಳನ್ನು ಕಾಣುವುದಿಲ್ಲ.

ಇದರಿಂದ ಪರಿಸರ ಕಾಳಜಿ ಕೂಡ ಮಾಡಬಹುದು, ದೀಪಾವಳಿಯನ್ನು ಸಾಂಪ್ರದಾಯಿಕ ರೀತಿಯಲ್ಲಿ ಆಚರಿಸಿಕೊಳ್ಳಬಹುದು. ಇನ್ನು ಸಾರ್ವಜನಿಕರಲ್ಲಿ ವಿಶಾಲ ಕರ್ನಾಟಕ ಪಟಾಕಿ ವರ್ತಕರ ಕ್ಷೇಮ ಅಭಿವೃದ್ಧಿ ಸಂಘದ ರಾಜ್ಯ ಅಧ್ಯಕ್ಷ ಕೇಶವ ಅವರು ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಇರುವವರಿಗೆ, ನಮ್ಮ ಸಂಸ್ಕೃತಿಯನ್ನು ಸಂರಕ್ಷಿಸಬೇಕು ಎಂದು ನಾನು ಹೇಳಲು ಬಯಸುತ್ತೇನೆ. ವ್ಯಾಪಾರಿಗಳಾಗಿ, ಪರಿಸರವನ್ನು ಬೆಂಬಲಿಸಲು ನಾವು ತಲಾ ಐದು ಸಸಿಗಳನ್ನು ನೆಡುವುದಾಗಿ ಪ್ರತಿಜ್ಞೆ ಮಾಡುತ್ತೇವೆ, ಆದರೆ ನಮ್ಮ ಸಂಪ್ರದಾಯಗಳು ಸಹ ಜೀವಂತವಾಗಿರಲು ಪಟಾಕಿ ಸಿಡಿಸಬೇಕು ಎಂದು ಹೇಳಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?