AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಸ್ತಿಗೆ ಹೆಸರಾದ ಖಾಕಿ ಪಡೆಯಲ್ಲಿ ಹೊಸ ಅಲೆ; ಕೆಎಸ್​ಆರ್​ಪಿಯಲ್ಲಿ ಪದಕಕ್ಕೆ ಶಿಫಾರಸು ಮಾಡಲು ಫಿಟ್‌ನೆಸ್ ಕಡ್ಡಾಯ

ಕಳೆದ ವರ್ಷದಲ್ಲಿ 3 ಸಾವಿರ ಫಿಟ್‌ನೆಸ್ ಇಲ್ಲದ ಸಿಬ್ಬಂದಿಯ ಹೆಸರು ಪಟ್ಟಿ ಮಾಡಲಾಗಿತ್ತು. ಇದೀಗ ಈ ಪಟ್ಟಿಯಲ್ಲಿರುವ 2,300 ಸಿಬ್ಬಂದಿಗಳು 10 ಕೆಜಿ ತೂಕವನ್ನು ಇಳಿಸಿದ್ದಾರೆ. ನಿತ್ಯ ವರ್ಕೌಟ್‌ನಿಂದ ಹೊಟ್ಟೆ ಕರಗಿಸಿದ್ದಾರೆ. ಸದ್ಯ ಇನ್ನೂ 680 ಸಿಬ್ಬಂದಿ ಅಧಿಕ ತೂಕ ಹೊಂದಿದ್ದಾರೆ ಎಂದು ಎಡಿಪಿ ಅಲೋಕ್‌ ಕುಮಾರ್ ತಿಳಿಸಿದ್ದಾರೆ.

ಶಿಸ್ತಿಗೆ ಹೆಸರಾದ ಖಾಕಿ ಪಡೆಯಲ್ಲಿ ಹೊಸ ಅಲೆ; ಕೆಎಸ್​ಆರ್​ಪಿಯಲ್ಲಿ ಪದಕಕ್ಕೆ ಶಿಫಾರಸು ಮಾಡಲು ಫಿಟ್‌ನೆಸ್ ಕಡ್ಡಾಯ
ಕೆಎಸ್‌ಆರ್‌ಪಿಯಲ್ಲಿ ಫಿಟ್ನೆಸ್ ಕಡ್ಡಾಯ
TV9 Web
| Edited By: |

Updated on:Oct 23, 2021 | 10:25 AM

Share

ಬೆಂಗಳೂರು: ರಾಷ್ಟ್ರಪತಿ ಹಾಗೂ ಮುಖ್ಯಮಂತ್ರಿ ಪದಕ ಶಿಫಾರಸ್ಸಿಗೆ ಇನ್ನು ಮುಂದೆ ಫಿಟ್‌ನೆಸ್ ಕಡ್ಡಾಯವಾಗಿದೆ. ಆ ಮೂಲಕ ಶಿಸ್ತಿಗೆ ಹೆಸರಾದ ಖಾಕಿ ಪಡೆಯಲ್ಲಿ ಹೊಸ ಅಲೆ ಸೃಷ್ಟಿಯಾಗಿದೆ. ಕೆಎಸ್​ಆರ್​ಪಿಯಲ್ಲಿ (KSRP) ಉತ್ತಮ ಕೆಲಸ, ಕಾರ್ಯಕ್ಷಮತೆಯ ಜೊತೆಗೆ ಫಿಟ್‌ನೆಸ್ ಕೂಡ ಕಡ್ಡಾಯವಾಗಿದೆ. ಫಿಟ್‌ನೆಸ್ ಪೊಲೀಸರ ಆರೋಗ್ಯದಲ್ಲಿ ಸುಧಾರಣೆಯಾಗುತ್ತದೆ. ಹೀಗಾಗಿ ಕೆಎಸ್‌ಆರ್‌ಪಿಯಲ್ಲಿ ಫಿಟ್‌ನೆಸ್ ಕಡ್ಡಾಯ ಎಂದು ಎಡಿಪಿ ಅಲೋಕ್‌ ಕುಮಾರ್ ಈ ನಿಯಮ ಜಾರಿಗೆ ಬೆಂಬಲ ನೀಡಿದ್ದಾರೆ.

ಕೆಎಸ್‌ಆರ್‌ಪಿಯಲ್ಲಿ 11 ಸಾವಿರಕ್ಕೂ ಹೆಚ್ಚು ಸಿಬ್ಬಂದಿಯಿದ್ದಾರೆ. ಈ ಪೈಕಿ ಕಳೆದ ವರ್ಷದಲ್ಲಿ 3 ಸಾವಿರ ಫಿಟ್‌ನೆಸ್ ಇಲ್ಲದ ಸಿಬ್ಬಂದಿಯ ಹೆಸರು ಪಟ್ಟಿ ಮಾಡಲಾಗಿತ್ತು. ಇದೀಗ ಈ ಪಟ್ಟಿಯಲ್ಲಿರುವ 2,300 ಸಿಬ್ಬಂದಿಗಳು 10 ಕೆಜಿ ತೂಕವನ್ನು ಇಳಿಸಿದ್ದಾರೆ. ನಿತ್ಯ ವರ್ಕೌಟ್‌ನಿಂದ ಹೊಟ್ಟೆ ಕರಗಿಸಿದ್ದಾರೆ. ಸದ್ಯ ಇನ್ನೂ 680 ಸಿಬ್ಬಂದಿ ಅಧಿಕ ತೂಕ ಹೊಂದಿದ್ದಾರೆ ಎಂದು ಎಡಿಪಿ ಅಲೋಕ್‌ ಕುಮಾರ್ ತಿಳಿಸಿದ್ದಾರೆ.

ತೂಕ ಇಳಿಕೆಯಿಂದ ಸಿಬ್ಬಂದಿಗಳ ಆರೋಗ್ಯದಲ್ಲಿ ಚೇತರಿಕೆಯಾಗುತ್ತದೆ. ಅನಾರೋಗ್ಯದಿಂದ ಮೃತಪಡುವ ಪೊಲೀಸರ ಸಂಖ್ಯೆ ಕಡಿಮೆಯಾಗುತ್ತದೆ. ಕೆಎಸ್​ಆರ್​ಪಿ ಸಿಬ್ಬಂದಿ ಸಾಥ್ ನೀಡಿದ ಹಿನ್ನೆಲೆ ದಾಖಲೆಯ ಸಾಧನೆ ಮಾಡಲು ಸಾಧ್ಯವಾಗಿದೆ. ರಾಷ್ಟ್ರದಲ್ಲೇ ಇದೇ ಮೊದಲ ಬಾರಿಗೆ ದಾಖಲೆಯ ಸಾಧನೆಯಾಗಿದೆ ಎಂದು ಎಡಿಜಿಪಿ ಅಲೋಕ್‌ ಕುಮಾರ್ ಫಿಟ್‌ನೆಸ್ ಮಂತ್ರಕ್ಕೆ ಸಾಥ್ ನೀಡಿದ್ದಾರೆ.

ಇದನ್ನೂ ಓದಿ: 6ವರ್ಷಕ್ಕಿಂತಲೂ ಹೆಚ್ಚಿನ ಶಿಕ್ಷಾರ್ಹ ಅಪರಾಧಗಳಿಗೆ ವಿಧಿವಿಜ್ಞಾನ ತನಿಖೆ ಕಡ್ಡಾಯಗೊಳಿಸಲು ಚಿಂತನೆ: ಅಮಿತ್​ ಶಾ

ಪದವಿ ತರಗತಿಗಳಲ್ಲಿ ಕನ್ನಡ ವಿಷಯ ಅಧ್ಯಯನ ಕಡ್ಡಾಯ ಆದೇಶ; ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆ

Published On - 9:00 am, Sat, 23 October 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?