AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಟಿ ಅಧಿಕಾರಿಗಳ ಸೋಗಿನಲ್ಲಿ ದರೋಡೆ ಮಾಡಿದ್ದ ಐವರ ಬಂಧನ; ಮತ್ತೊಂದೆಡೆ ವಿಷ ಸೇವಿಸಿ ಕುಟುಂಬದಿಂದ ಆತ್ಮಹತ್ಯೆಗೆ ಯತ್ನ, ಒಬ್ಬರ ಸಾವು

ಜನವರಿ 23ರಂದು ಮೊಹಮ್ಮದ್ ಶೋಯಬ್ ರಬಾನಿ ಮತ್ತು ದುರ್ಗೇಶ್ ಎಂಬುವವರು ನಕಲಿ ಐಡಿ ತೋರಿಸಿ ತಾವು ಐಟಿ ಅಧಿಕಾರಿಗಳು ಎಂದು ರಿಯಲ್ ಎಸ್ಟೇಟ್ ಉದ್ಯಮಿ ಮನೆಗೆ ನುಗ್ಗಿದ್ದರು. ಬಳಿಕ 45 ನಿಮಿಷ ಮನೆಯ ತಲಾಶ್ ಮಾಡಿ ಮನೆಯಲ್ಲಿದ್ದ 3.5 ಲಕ್ಷ ನಗದು, ಹಾಗೂ ಒಂದು ಪಿಸ್ತೂಲ್ ತೆಗೆದುಕೊಂಡು ಪರಾರಿಯಾಗಿದ್ದರು.

ಐಟಿ ಅಧಿಕಾರಿಗಳ ಸೋಗಿನಲ್ಲಿ ದರೋಡೆ ಮಾಡಿದ್ದ ಐವರ ಬಂಧನ; ಮತ್ತೊಂದೆಡೆ ವಿಷ ಸೇವಿಸಿ ಕುಟುಂಬದಿಂದ ಆತ್ಮಹತ್ಯೆಗೆ ಯತ್ನ, ಒಬ್ಬರ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 28, 2022 | 2:23 PM

Share

ಬೆಂಗಳೂರು: ಐಟಿ ಅಧಿಕಾರಿಗಳ ಸೋಗಿನಲ್ಲಿ ದರೋಡೆ ಮಾಡಿದ್ದ ಖತರ್ನಾಕ್ ಗ್ಯಾಂಗ್ನ ಪೊಲೀಸರು ಸೆರೆ ಹಿಡಿದಿದ್ದಾರೆ. ಬೆಂಗಳೂರಿನ ಸಂಜಯನಗರ ಠಾಣೆ ಪೊಲೀಸರು ಐವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಸ್ಥಳೀಯ ಪತ್ರಿಕೆ ಸಂಪಾದಕ ಮಂಜುನಾಥ್, ರಿಯಲ್ ಎಸ್ಟೆಟ್ ಬ್ರೋಕರ್ ಗಳಾದ ಪ್ರಶಾಂತ್, ಕುಮಾರ್, ದುರ್ಗೇಶ್, ಮಹಮದ್ ಶೋಯಬ್ ರಬ್ಬಾನಿ ಬಂಧಿತ ಆರೋಪಿಗಳು. ಜನವರಿ 23ರಂದು ನಕಲಿ ಐಡಿ ತೋರಿಸಿ ಇಬ್ಬರು ಆರೋಪಿಗಳು ರಿಯಲ್ ಎಸ್ಟೇಟ್ ಉದ್ಯಮಿ ಮನೆಗೆ ನುಗ್ಗಿದ್ದರು. ಮನೆ ಪ್ರವೇಶಿಸಿ ಶೋಧ ನಡೆಸಿದ್ದ ಆರೋಪಿ ಮೊಹಮ್ಮದ್ ಶೋಯಬ್ ರಬಾನಿ ಮತ್ತು ದುರ್ಗೇಶ್ 3.5 ಲಕ್ಷ ನಗದು, ಒಂದು ಪಿಸ್ತೂಲ್ ಜತೆ ಪರಾರಿಯಾಗಿದ್ದರು. ಈ ವೇಳೆ ಅನುಮಾನದಿಂದ ಪೊಲೀಸ್ ಠಾಣೆಗೆ ಉದ್ಯಮಿ ದೂರು ನೀಡಿದ್ದು ಸದ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಜನವರಿ 23ರಂದು ಮೊಹಮ್ಮದ್ ಶೋಯಬ್ ರಬಾನಿ ಮತ್ತು ದುರ್ಗೇಶ್ ಎಂಬುವವರು ನಕಲಿ ಐಡಿ ತೋರಿಸಿ ತಾವು ಐಟಿ ಅಧಿಕಾರಿಗಳು ಎಂದು ರಿಯಲ್ ಎಸ್ಟೇಟ್ ಉದ್ಯಮಿ ಮನೆಗೆ ನುಗ್ಗಿದ್ದರು. ಬಳಿಕ 45 ನಿಮಿಷ ಮನೆಯ ತಲಾಶ್ ಮಾಡಿ ಮನೆಯಲ್ಲಿದ್ದ 3.5 ಲಕ್ಷ ನಗದು, ಹಾಗೂ ಒಂದು ಪಿಸ್ತೂಲ್ ತೆಗೆದುಕೊಂಡು ಪರಾರಿಯಾಗಿದ್ದರು. ಬಳಿಕ ರಿಯಲ್ ಎಸ್ಟೇಟ್ ಉದ್ಯಮಿ ನೀಡಿದ ದೂರು ಸಂಬಂಧ ತನಿಖೆ ಕೈಗೊಂಡ ಸಂಜಯ್ ನಗರ ಪೊಲೀಸರು ಐವರನ್ನು ಬಂಧಿಸಿದ್ದಾರೆ.

ರಿಯಲ್ ಎಸ್ಟೇಟ್ ಬ್ರೋಕರ್ಗಳ ಜೊತೆ ಸ್ಥಳೀಯ ಪತ್ರಿಕೆ ಉಪಸಂಪಾದಕ ಸೇರಿ ಈ ನಕಲಿ ದಾಳಿ ನಡೆಸಿದ್ದಾಗಿ ತಿಳಿದು ಬಂದಿದೆ. ದೂರುದಾರರ ತಂದೆ, ರಿಯಲ್ ಎಸ್ಟೇಟ್ ಬ್ರೋಕರ್ಗಳ ಜೊತೆ ವ್ಯವಹಾರ ನಡೆಸಿದ್ದರು. ಈ ವೇಳೆ ರಿಯಲ್ ಎಸ್ಟೇಟ್ ಉದ್ಯಮಿ ಹಣಕಾಸಿನ ವ್ಯವಹಾರದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ಬಳಿಕ ಆದಾಯ ತೆರಿಗೆ ಅಧಿಕಾರಿಗಳೆಂದು ನಕಲಿ ದಾಳಿ ಮಾಡಿದ್ದಾರೆ. ಸ್ಥಳೀಯ ಪತ್ರಿಕೆ ಸಂಪಾದಕ ಮಂಜುನಾಥ್, ರಿಯಲ್ ಎಸ್ಟೆಟ್ ಬ್ರೋಕರ್ ಗಳಾದ ಪ್ರಶಾಂತ್, ಕುಮಾರ್, ದುರ್ಗೇಶ್, ಮಹಮದ್ ಶೋಯಬ್ ರಬ್ಬಾನಿ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ ಇನ್ನು ಮತ್ತೊಂದೆಡೆ ಬೆಂಗಳೂರಿನ ಬಾಗಲಗುಂಟೆಯಲ್ಲಿ ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಘಟನೆಯಲ್ಲಿ ಪತ್ನಿ ಗೀತಾ(37) ಮನೆಯಲ್ಲೇ ಮೃತಪಟ್ಟಿದ್ದಾರೆ. ಪತಿ ಭಾನುಪ್ರಕಾಶ್(40), ಪುತ್ರಿ ಲೇಖನಾ(14) ಸ್ಥಿತಿ ಗಂಭೀರವಾಗಿದೆ. ಆತ್ಮಹತ್ಯೆಗೆ ಯತ್ನಿಸಿದವರನ್ನು ಸಪ್ತಗಿರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಾಲಿಗೆ ರಾಸಾಯನಿಕ ಬೆರೆಸಿಕೊಂಡು ಸೇವಿಸಿ ಕುಟುಂಬ ಆತ್ಮಹತ್ಯೆಗೆ ಯತ್ನಿಸಿದೆ.

ಓನರ್ ಕಂ ಡ್ರೈವರ್ ಆಗಿ ಕಾರು ಚಾಲನೆ ಮಾಡುತ್ತಿದ್ದ ಭಾನುಪ್ರಕಾಶ್, ತನ್ನ ಬೈಕಿನಲ್ಲಿ ದಿನನಿತ್ಯ ಹಾಲು, ಪೇಪರ್ ಕೂಡ ಹಾಕುತ್ತಿದ್ರು. ಸಂಬಂಧಿಗಳ ಬಳಿ 10ಕ್ಕೂ ಹೆಚ್ಚು ಕಡೆ ಸಾಲ ಮಾಡಿದ್ದ ಭಾನುಪ್ರಕಾಶ್ ಲಾಕ್ ಡೌನ್ ಮಧ್ಯೆ ಅರ್ಥಿಕ ಸಂಕಷ್ಟಕ್ಕೀಡಾಗಿದ್ದರು. ಬಾಗಲಗುಂಟೆಯಲ್ಲಿ ಚಿಕ್ಕದಾದ ಸ್ವಂತ ಮನೆ ಇತ್ತು. ಸದ್ಯ ಈ ಸಂಬಂಧ ಉತ್ತರ ವಿಭಾಗದ ಡಿಸಿಪಿ ವಿನಾಯಕ್ ಪಾಟೀಲ್ ಮಾಹಿತಿ ನೀಡಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣೆಗೆ ಮಾಹಿತಿ ಬಂದಿದೆ. ಬೆಳಗಿನ ಜಾವ ಒಂದೇ ಮನೆಯ ಮೂರು ಜನ ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅದರಲ್ಲಿ ಓರ್ವ ಮಹಿಳೆ ಸಾವನಪ್ಪಿದ್ದಾರೆ. ಉಳಿದ ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಗಲಗುಂಟೆ ಪೊಲೀಸರಿಂದ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ರು.

ಇದನ್ನೂ ಓದಿ: Big Breaking: ಸೋನು ಸೂದ್​ಗೆ ಸಂಕಷ್ಟ?; ನಟನಿಗೆ ಸೇರಿದ ಆರು ಜಾಗಗಳಲ್ಲಿ ಐಟಿ ಅಧಿಕಾರಿಗಳ ಸರ್ವೇ

Published On - 2:20 pm, Fri, 28 January 22

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್