AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪ ಶಂಕರ್​​ಗೆ ಕಾಲ್​ಗರ್ಲ್ಸ್, ವೇಶ್ಯೆಯರ ಸಹವಾಸ ಇತ್ತು; ಶಂಕರ್ ಹೊರ ಜಗತ್ತಿಗೆ ಮುಖವಾಡ ಹಾಕಿ ಬದುಕುತ್ತಿದ್ದ: ಪುತ್ರನ ವರಸೆ

ತಂದೆ ವಿರುದ್ಧ ಗಂಭೀರ ಆರೋಪ ಮಾಡಿದ್ದ ಮಧುಸಾಗರ್, ದೂರಿನ ಪ್ರತಿಗಳನ್ನು ಜೆರಾಕ್ಸ್ ಮಾಡಿ ಹಂಚಿದ್ದನಂತೆ. ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಂದೆಯ ಬಗ್ಗೆ ಮಗ ಆರೋಪಗಳ ಸುರಿ ಮಳೆಯಲ್ಲೇ ಮಾಡಿದ್ದ.

ಅಪ್ಪ ಶಂಕರ್​​ಗೆ ಕಾಲ್​ಗರ್ಲ್ಸ್, ವೇಶ್ಯೆಯರ ಸಹವಾಸ ಇತ್ತು; ಶಂಕರ್ ಹೊರ ಜಗತ್ತಿಗೆ ಮುಖವಾಡ ಹಾಕಿ ಬದುಕುತ್ತಿದ್ದ: ಪುತ್ರನ ವರಸೆ
ಆತ್ಮಹತ್ಯಗೆ ಶರಣಾಗಿರುವ ಶಂಕರ್ ಕುಟುಂಬ
TV9 Web
| Edited By: |

Updated on:Sep 20, 2021 | 9:57 AM

Share

ಬೆಂಗಳೂರು: ನಗರದ ಬಂದೇ ಕುಟುಂಬದ ಐವರ ಸಾವು ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಕುತೂಹಲಕಾರಿ ಸಂಗತಿ ಹೊರ ಬಿದ್ದಿದೆ. ನಿನ್ನೆ ಸಿಕ್ಕ ಮೃತರ ಡೆತ್ನೋಟ್ನಲ್ಲಿ ತಂದೆ ವಿರುದ್ಧವೇ ಆರೋಪಿಸಿ ಆತ್ಮಹತ್ಯೆಗೆ ಅವರೇ ಕಾರಣ ಎಂದು ಮಕ್ಕಳು ತಮ್ಮ ಡೆತ್ನೋಟ್ನಲ್ಲಿ ಬರೆದಿಟ್ಟಿದ್ದರು. ಈಗ ಮತ್ತೊಂದು ಕಡೆ ಮೃತ ಮಧು ಆತ್ಮಹತ್ಯೆಗೂ ಕೆಲ ದಿನಗಳ ಹಿಂದೆ ತಂದೆ ಶಂಕರ್ ವಿರುದ್ಧ ದೂರು ನೀಡಿದ್ದ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ಶಂಕರ್ ಪುತ್ರ ಮಧುಸಾಗರ್ ತಂದೆ ವಿರುದ್ಧ ಆರೋಪ ಮಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದನಂತೆ.

ತಂದೆ ವಿರುದ್ಧ ಗಂಭೀರ ಆರೋಪ ಮಾಡಿದ್ದ ಮಧುಸಾಗರ್, ದೂರಿನ ಪ್ರತಿಗಳನ್ನು ಜೆರಾಕ್ಸ್ ಮಾಡಿ ಹಂಚಿದ್ದನಂತೆ. ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಂದೆಯ ಬಗ್ಗೆ ಮಗ ಆರೋಪಗಳ ಸುರಿ ಮಳೆಯಲ್ಲೇ ಮಾಡಿದ್ದ. ಮಹಿಳಾಪೀಡಕ, ಸೈಕೋಪಾಥ್ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದನಂತೆ. ಶಂಕರ್ ಸಮಾಜದಲ್ಲಿ ‘ಪ್ರತಿಷ್ಠೆ’ಗಾಗಿ ಏನು ಬೇಕಾದರೂ ಮಾಡಬಲ್ಲರು. ನನ್ನ ತಾಯಿಗೆ ಹಲವು ವರ್ಷಗಳಿಂದ ಕಿರುಕುಳ ಕೊಟ್ಟಿದ್ದಾನೆ. ಶಂಕರ್‌ನದ್ದು ದುರ್ವರ್ತನೆಯಿಂದ ಕೂಡಿದ ಜೀವನವಾಗಿತ್ತು. ಶಂಕರ್ ಹೊರ ಜಗತ್ತಿಗೆ ‘ಮುಖವಾಡ’ ಹಾಕಿ ಬದುಕುತ್ತಿದ್ದ. ಅಪ್ಪ ಶಂಕರ್ ತುಂಬಾ ಸ್ವಾರ್ಥಿ ಅಂತಾ ಮಧುಸಾಗರ್ ದೂರಿನಲ್ಲಿ ಉಲ್ಲೇಖಿಸಿದ್ದ.

ಅಪ್ಪ ಶಂಕರ್ಗೆ ಅನೈತಿಕ ಸಂಬಂಧ ಇತ್ತು ಅಂತಾ ಮಗ ಮಧುಸಾಗರ್ ಆರೋಪ ಮಾಡಿದ್ದ. ಶಂಕರ್ಗೆ ಕಾಲ್ಗರ್ಲ್ಸ್, ವೇಶ್ಯೆಯರ ಸಹವಾಸ ಇತ್ತು. ‘ರಾಜಾಜಿನಗರದ ಕಚೇರಿಯಲ್ಲೇ ಅನೈತಿಕ ಚಟುವಟಿಕೆ’ ನಡೆಸುತ್ತಿದ್ದರು ಎಂದು ದೂರಿನ ಪ್ರತಿಯಲ್ಲಿ 3-4 ಮಹಿಳೆಯರ ಹೆಸರು ಕೂಡ ಉಲ್ಲೇಖ ಮಾಡಿದ್ದ. ಹಾಗೂ ಈನ ಆರೋಪಗಳಿಗೆ ವಾಟ್ಸಾಪ್ ಸ್ಕ್ರೀನ್ ಶಾಟ್ ಸಾಕ್ಷಿ ಇದೆಯೆಂದು ದೂರಿನಲ್ಲಿ ಮಧು ಉಲ್ಲೇಖಿಸಿದ್ದಾನೆ. ಐವರು ಮಹಿಳೆಯರ ಜೊತೆ ಅಪ್ಪನಿಗೆ ಅಕ್ರಮ ಸಂಬಂಧ ಇದೆ. ಅಪ್ಪ ಶಂಕರ್ ಕಾಮುಕ ಅನ್ನೋದು ಅಮ್ಮನಿಗೆ ಗೊತ್ತಿತ್ತು. ನನ್ನ ಅಮ್ಮನನ್ನ ಕೆಲಸದವರಂತೆ ಅಪ್ಪ ನೋಡಿಕೊಂಡಿದ್ದಾನೆ. ಅಮ್ಮನ ವಿರುದ್ಧ ಸೇಡು ತೀರಿಸಿಕೊಳ್ತಿದ್ದ ಅಪ್ಪ ಎಂದು ದೂರಿನಲ್ಲಿ ಮೃತ ಮಧು ಉಲ್ಲೇಖಿಸಿ ಈ ಹಿಂದೆಯೇ ತಂದೆಯ ವಿರುದ್ಧ ದೂರು ನೀಡಿದ್ದ.

ಇದನ್ನೂ ಓದಿ: ಒಂದೇ ಕುಟುಂಬದ ಐವರ ಸಾವು ಪ್ರಕರಣ; ಅಪ್ಪನ ವಿರುದ್ಧ ಆರೋಪಿಸಿ ಡೆತ್​ನೋಟ್ ಬರೆದ ಶಂಕರ್ ಮಕ್ಕಳು, ಏನಿದೆ ಅದರಲ್ಲಿ?

Published On - 9:54 am, Mon, 20 September 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?