AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ಸರ್ಕಾರಿ ನಿವಾಸ ಖಾಲಿ ಮಾಡದ ಸಿಪಿ ಯೋಗೇಶ್ವರ್; ಅದೇ ಮನೆ ಬೇಕು ಅಂತಾ ಐದಾರು ಮಂದಿ ಕ್ಯೂನಲ್ಲಿದ್ದಾರೆ!

ಸರ್ಕಾರಿ ನಿವಾಸಕ್ಕಾಗಿ ಸಚಿವರ ನಡುವೆ ಜಿದ್ದಾಜಿದ್ದಿ ಶುರುವಾಗಿದೆ. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಇದ್ದ ನಿವಾಸವೇ ಬೇಕು ಎಂದು ಐದು ಮಂದಿ ಸಚಿವರು ಹಠ ಮಾಡುತ್ತಿದ್ದಾರೆ. ಸೆವೆನ್ ಮಿನಿಸ್ಟರ್ಸ್ ಕ್ವಾರ್ಟರ್ಸ್‌ಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ.

ಇನ್ನೂ ಸರ್ಕಾರಿ ನಿವಾಸ ಖಾಲಿ ಮಾಡದ ಸಿಪಿ ಯೋಗೇಶ್ವರ್; ಅದೇ ಮನೆ ಬೇಕು ಅಂತಾ ಐದಾರು ಮಂದಿ ಕ್ಯೂನಲ್ಲಿದ್ದಾರೆ!
ಬಸವರಾಜ ಹೊರಟ್ಟಿ ಮತ್ತು ಸಿ.ಪಿ.ಯೋಗೇಶ್ವರ್
TV9 Web
| Edited By: ಸಾಧು ಶ್ರೀನಾಥ್​|

Updated on:Sep 01, 2021 | 12:13 PM

Share

ಬೆಂಗಳೂರು: ಒಂದೇ ಸರ್ಕಾರಿ ನಿವಾಸಕ್ಕಾಗಿ ಐವರು ಸಚಿವರು ಪಟ್ಟು ಹಿಡಿದಿದ್ದಾರೆ. ಈ ಹಿಂದೆ ಸಿ.ಪಿ.ಯೋಗೇಶ್ವರ್ ಇದ್ದ ಸರ್ಕಾರಿ ನಿವಾಸಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ಗೃಹ ಸಚಿವ ಆರಗ ಜ್ಞಾನೇಂದ್ರ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಗಣಿ ಸಚಿವ ಹಾಲಪ್ಪ ಆಚಾರ್ ಸೇರಿ ಐವರು ಸಚಿವರು ಪಟ್ಟು ಹಿಡಿದಿದ್ದಾರೆ. ಇವರ ಮಧ್ಯೆ ಸಭಾಪತಿ ಹೊರಟ್ಟಿ ಕೂಡ ಅದೇ ಮನೆಗೆ ಪಟ್ಟು ಹಿಡಿದಿದ್ದಾರೆ. ಆದರೆ ಸಿ.ಪಿ.ಯೋಗೇಶ್ವರ್ ಇನ್ನೂ ಮನೆಯನ್ನ ಖಾಲಿ ಮಾಡಿಲ್ಲ.

ಸರ್ಕಾರಿ ನಿವಾಸಕ್ಕಾಗಿ ಸಚಿವರ ನಡುವೆ ಜಿದ್ದಾಜಿದ್ದಿ ಶುರುವಾಗಿದೆ. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಇದ್ದ ನಿವಾಸವೇ ಬೇಕು ಎಂದು ಐದು ಮಂದಿ ಸಚಿವರು ಹಠ ಮಾಡುತ್ತಿದ್ದಾರೆ. ಸೆವೆನ್ ಮಿನಿಸ್ಟರ್ಸ್ ಕ್ವಾರ್ಟರ್ಸ್‌ಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಸದ್ಯ ಸರ್ಕಾರಿ ನಿವಾಸ ಇಲ್ಲದೇ ಅನಾನುಕೂಲ ಎದುರಿಸುತ್ತಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಬಿಸಿ ನಾಗೇಶ್, ಹಾಲಪ್ಪ ಆಚಾರ್ರ ಮಧ್ಯೆ ಸಭಾಪತಿ ಬಸವರಾಜ ಹೊರಟ್ಟಿ ಕೂಡ ಯೋಗೇಶ್ವರ್ ಇದ್ದ ನಿವಾಸವೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಆದ್ರೆ ಇತ್ತ ಯೋಗೇಶ್ವರ್ ಇನ್ನೂ ನಿವಾಸ ಖಾಲಿ ಮಾಡಿಲ್ಲ. ನಿವಾಸ ಖಾಲಿ ಮಾಡಲು ಸಮಯಾವಕಾಶ ಕೇಳಿದ್ದಾರೆ. ಸೆವೆನ್ ಮಿನಿಸ್ಟರ್ಸ್ ಕ್ವಾರ್ಟರ್ಸ್‌ ಖಾಲಿ ಇದ್ದರೂ ಕೂಡ ಕೆಲ ಸಚಿವರು ಅಲ್ಲಿಗೆ ಹೋಗಲು ನಿರಾಕರಿಸಿದ್ದಾರೆ.

ಟ್ರಾಫಿಕ್ ತೊಂದರೆ ಆಗಬಾರದು ಅಂತಾ ಸಿಎಂ ಬೊಮ್ಮಾಯಿ ರೇಸ್ ಕೋರ್ಸ್ ನಿವಾಸಕ್ಕೆ ಶಿಫ್ಟ್​​

ಈ ಮಧ್ಯೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜಧಾನಿ ಬೆಂಗಳೂರಿನಲ್ಲಿ ನಾಲ್ಕೈದು ಕಡೆ ವಾಸ ಇರುವುದರಿಂದ ವಿಧಾನಸೌಧದತ್ತ ಅವರ ಓಡಾಟಕ್ಕೆ ಟ್ರಾಫಿಕ್ ಸಮಸ್ಯೆ ಉದ್ಭವ ಆಗುತ್ತೆ. ಈ ಹಿನ್ನೆಲೆಯಲ್ಲಿ ಟ್ರಾಫಿಕ್ ತೊಂದರೆ ಆಗಬಾರದು ಅಂತಾ ಸಿಎಂ ಬೊಮ್ಮಾಯಿ ರೇಸ್ ಕೋರ್ಸ್ ನಿವಾಸಕ್ಕೆ ಶಿಫ್ಟ್​​ ಆಗಲಿದ್ದಾರೆ ಎಂದು ಸಚಿವ ಅಶ್ವತ್ಥ ನಾರಾಯಣ್ ಹೇಳಿದ್ದಾರೆ.

ಇದನ್ನೂ ಓದಿ: ಮಾಜಿ ಸಿಎಂ ಜಯಲಲಿತಾ ವಿಶ್ವವಿದ್ಯಾಲಯದ ಹೆಸರು ಬದಲಾವಣೆ ವಿವಾದ; ಎಐಎಡಿಎಂಕೆ ನಾಯಕರಿಂದ ಪ್ರತಿಭಟನೆ

Published On - 11:46 am, Wed, 1 September 21

Follow Us
Web contact
Web contact

TV9 Kannada

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?