Bangalore: ಮೆಜೆಸ್ಟಿಕ್​ನ ಸಿಟಿ ಸೆಂಟರ್​ ಶಾಪ್ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ದಾಳಿ, 5 ಲಕ್ಷ ರೂ. ವಶಕ್ಕೆ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಚುನಾವಣಾಧಿಕಾರಿಗಳು ಫುಲ್ ಆಕ್ಟಿವ್ ಆಗಿದ್ದು, ಅಲ್ಲಲ್ಲಿ ದಾಳಿ ನಡೆಸಿ ದಾಖಲೆ ಇಲ್ಲದ ಹಣ, ವಸ್ತುಗಳನ್ನು ವಶಕ್ಕೆ ಪಡೆದಯುತ್ತಿದ್ದಾರೆ. ಇದೀಗ ಬೆಂಗಳೂರಿನ ಮೆಜೆಸ್ಟಿಕ್​ನಲ್ಲಿ ದಾಳಿ ನಡೆಸಿದ ಫ್ಲೈಯಿಂಗ್ ಸ್ಕ್ವಾಡ್, ನಗದು ಜಪ್ತಿ ಮಾಡಿದೆ.

Bangalore: ಮೆಜೆಸ್ಟಿಕ್​ನ ಸಿಟಿ ಸೆಂಟರ್​ ಶಾಪ್ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ದಾಳಿ, 5 ಲಕ್ಷ ರೂ. ವಶಕ್ಕೆ
ಬೆಂಗಳೂರಿನ ಮೆಜೆಸ್ಟಿಕ್​ನಲ್ಲಿರುವ ಸಿಟಿ ಸೆಂಟರ್​ ಶಾಪ್ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ದಾಳಿ, 5 ಲಕ್ಷ ರೂ. ವಶಕ್ಕೆ (ಸಾಂದರ್ಭಿಕ ಚಿತ್ರ)
Rakesh Nayak Manchi

Updated on: May 06, 2023 | 4:47 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಹಿನ್ನೆಲೆ ಚುನಾವಣಾಧಿಕಾರಿಗಳು ಫುಲ್ ಆಕ್ಟಿವ್ ಆಗಿದ್ದು, ಅಲ್ಲಲ್ಲಿ ದಾಳಿ ನಡೆಸಿ ದಾಖಲೆ ಇಲ್ಲದ ಹಣ, ವಸ್ತುಗಳನ್ನು ವಶಕ್ಕೆ ಪಡೆದಯುತ್ತಿದ್ದಾರೆ. ಇದೀಗ ಬೆಂಗಳೂರಿನ ಮೆಜೆಸ್ಟಿಕ್​ನಲ್ಲಿ ದಾಳಿ ನಡೆಸಿದ ಫ್ಲೈಯಿಂಗ್ ಸ್ಕ್ವಾಡ್, ನಗದು ಜಪ್ತಿ ಮಾಡಿದೆ. ಸಿಟಿ ಸೆಂಟರ್​ಗೆ (City Center) ದಾಳಿ ನಡೆಸಿ ಶಾಪ್​ವೊಂದರಲ್ಲಿ ಹಣ ಪತ್ತೆಯಾಗಿದೆ. ವಿಚಾರಣೆ ವೇಳೆ ದಾಖಲೆ ಇಲ್ಲದೇ ಇರುವುದು ತಿಳಿದುಬಂದ ಹಿನ್ನೆಲೆ 5.22 ಲಕ್ಷ ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜ್ಯದ ಹಲವೆಡೆ ಮತದಾರರಿಗೆ ಹಂಚಲು ಕೊಂಡೊಯ್ಯಲಾಗುತ್ತಿರುವ ಲಕ್ಷ ಲಕ್ಷ ರೂ. ನಗದು, ಚಿನ್ನಾಭರಣ, ಕುಕ್ಕರ್ ಸೇರಿದಂತೆ ಗೃಹ ಬಳಕೆಯ ಸಾಮಗ್ರಿಗಳನ್ನು ಅಧಿಕಾರಿಗಳು ವಶಪಡಿಸಿಕೊಳ್ಳುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:46 pm, Sat, 6 May 23

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us