AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣದಲ್ಲಿ ಶಾಮಿಲಾಗಿದ್ದ ನರ್ಸ್​​ ಬಂಧನ

ಬೆಂಗಳೂರು ಸೇರಿ ಮೂರು ಜಿಲ್ಲೆಗಳಲ್ಲಿ ನಡೆದಿದ್ದ ಹೆಣ್ಣು ಭ್ರೂಣ ಹತ್ಯೆ ಮತ್ತು ಭ್ರೂಣಲಿಂಗ ಪತ್ತೆ ಪ್ರಕರಣ ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದೆ. ಈ ಪ್ರಕರಣವನ್ನು ಬೆಂಗಳೂರು ಪೊಲೀಸರು ಬೇದಿಸಿದ್ದಾರೆ. ಈ ಪ್ರಕರಣದಲ್ಲಿ ಶಾಮಿಲಾಗಿದ್ದ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣದಲ್ಲಿ ಶಾಮಿಲಾಗಿದ್ದ ನರ್ಸ್​​ ಬಂಧನ
ಬಂಧಿತ ಉಷಾರಾಣಿ (ಎಡಚಿತ್ರ)ಭ್ರೂಣ (ಸಾಂದರ್ಭಿಕ ಚಿತ್ರ)
Jagadisha B
| Edited By: |

Updated on:Dec 04, 2023 | 10:27 AM

Share

ಬೆಂಗಳೂರು ಡಿ.04: ಬೆಂಗಳೂರು (Bengaluru) ಸೇರಿ ಮೂರು ಜಿಲ್ಲೆಗಳಲ್ಲಿ ನಡೆದಿದ್ದ ಭ್ರೂಣಲಿಂಗ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆ (Foetus Gender Detection, Murder Case) ಪ್ರಕರಣ ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದೆ. ಈ ಪ್ರಕರಣವನ್ನು ಬೆಂಗಳೂರು ಪೊಲೀಸರು (Police) ಬೇದಿಸಿದ್ದಾರೆ. ಇದೀಗ ಪ್ರಕರಣ ಸಂಬಂಧ ಬೈಯ್ಯಪ್ಪಹಳ್ಳಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಮೈಸೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ನರ್ಸ್ ಉಷಾರಾಣಿ ಬಂಧಿತ ಆರೋಪಿ. ಈ ಮೂಲಕ ಪ್ರಕರಣ ಸಂಬಂಧ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಬಂಧಿತ ಉಷಾರಾಣಿ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಡಾ.ಚಂದನ್ ಬಲ್ಲಾಳ್​ನ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದಳು. ಪ್ರಕರಣ ಬೆಳಕಿಗೆ ಬಂದ ಬಳಿಕ ನರ್ಸ್​ ಉಷಾರಾಣಿ ಕೆಲಸ ಬಿಟ್ಟಿದ್ದಳು. ಬಳಿಕ ಮೈಸೂರಿನ ಮತ್ತೊಂದು ಖಾಸಗಿ ಆಸ್ಪತ್ರೆಗೆ ಕೆಲಸಕ್ಕೆ ಸೇರಿದ್ದಳು.

ನರ್ಸ್​ ಉಷಾರಾಣಿ ಪ್ರಕರಣದ ಮತ್ತೊಬ್ಬ ಆರೋಪಿ ಬ್ರೋಕರ್ ಪುಟ್ಟರಾಜು ಸಂಬಂಧಿ ಆಗಿದ್ದಾಳೆ. ಬ್ರೋಕರ್ ಪುಟ್ಟರಾಜು ಅಣತಿ ಮೇರೆಗೆ ಉಷಾರಾಣಿ ಗರ್ಭಪಾತ ಮಾಡುತ್ತಿದ್ದಳು. ಗರ್ಭಪಾತಕ್ಕೆ ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿದ್ದಳು. ಬೈಯ್ಯಪ್ಪಹಳ್ಳಿ ಪೊಲೀಸರು ಬ್ರೋಕರ್​ ಪುಟ್ಟರಾಜು ಅನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಈ ಎಲ್ಲ ವಿಚಾರಗಳು ಬಯಲಾಗಿವೆ. ಸದ್ಯ ಬ್ರೋಕರ್​​ ಪುಟ್ಟರಾಜು ಜಾಮೀನು ಪಡೆದಿದ್ದು, ಸಂಬಂಧಿ ಉಷಾರಾಣಿಯನ್ನು ಬಂಧಿಸಲಾಗಿದೆ.

ಆರೋಗ್ಯ ಇಲಾಖೆ ನಿಯಮಾವಳಿ ಪ್ರಕಾರ ಅಬಾಷನ್

ಇನ್ನು ಉಷಾರಾಣಿ ಕೆಲಸ ಮಾಡುತ್ತಿದ್ದ ಖಾಸಗಿ ಆಸ್ಪತ್ರೆ ಲಿಂಗ ಪತ್ತೆ ಮಾಡದೇ ಆರೋಗ್ಯ ಇಲಾಖೆ ನಿಯಮಾವಳಿ ಪ್ರಕಾರ ಅಬಾಷನ್​ ಮಾಡುತಿತ್ತು. ಈ ವಿಚಾರ ತಿಳಿಯುತ್ತಿದ್ದಂತೆ ಆಸ್ಪತ್ರೆ ಮಾಲೀಕರನ್ನು ಬೈಯಪ್ಪನಹಳ್ಳಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ಭ್ರೂಣ ಹತ್ಯೆ ಕಿಂಗ್ ಪಿನ್ ಆರೋಪಿ ವೈದ್ಯ ಕೊಡಗಿನಲ್ಲಿ ಸಾವು: ಸೂಸೈಡ್ ಮಾಡಿಕೊಂಡ್ರಾ ಡಾಕ್ಟರ್?

ಗರ್ಭಪಾತ ಕಾಯ್ದೆ

ಗರ್ಭಪಾತ ಕಾಯ್ದೆಯ ಪ್ರಕಾರ ಲಿಂಗ ಪತ್ತೆ ಮಾಡದೇ, ಪತಿ-ಪತ್ನಿ ಒಪ್ಪಿಗೆ ಬಳಿಕ ಮತ್ತು ಗರ್ಭಿಣಿಗೆ ತೀವ್ರ ಆರೋಗ್ಯ ಸಮಸ್ಯೆ ಇದ್ದಲ್ಲಿ ಮಾತ್ರ ಸ್ಕ್ಯಾನಿಂಗ್ ಹಾಗೂ ಮೆಡಿಕಲ್ ರಿಪೊರ್ಟ್ ಸಹಿತ ಅಬಾಷನ್ ಮಾಡಬೇಕು. ಇವೆಲ್ಲವೂ ಗರ್ಭಧರಿಸಿದ 24 ವಾರದ ಒಳಗಾಗಿ ಆಗಬೇಕು. ಬಳಿಕ ಸಂಬಂಧ ಪಟ್ಟ ಇಲಾಖೆಗೆ ಈ ಎಲ್ಲ ಮಾಹಿತಿ ನೀಡಬೇಕು. ಜೊತೆಗೆ ನಡೆದ ಎಲ್ಲ ಅಬಾಷನ್​ಗಳ ಎರಡು ವರ್ಷದ ದಾಖಲೆಗಳನ್ನು ಆಸ್ಪತ್ರೆಯಲ್ಲಿ ಇಟ್ಟುಕೊಂಡಿರಬೇಕು.

ಉಷಾರಾಣಿ ಕೆಲಸ ಮಾಡುತ್ತಿದ್ದ ಖಾಸಗಿ ಆಸ್ಪತ್ರೆ ಈ ನಿಯಮಗಳನ್ನು ಹೊಂದಿದೆ. ಇದನ್ನು ತಿಳಿದ ಉಷಾರಾಣಿ ಆಸ್ಪತ್ರೆಯ ಮಾಲೀಕ ಮತ್ತು ವೈದ್ಯರ ಗಮನಕ್ಕೂ ಬಾರದ ರೀತಿ, ನಕಲಿ ದಾಖಲೆ ಸೃಷ್ಟಿಸಿ ಅಬಾಷನ್​​ ಮಾಡುತ್ತಿದ್ದಳು. ಬಳಿಕ ವೈದ್ಯರಿಗೆ ಸುಳ್ಳು ಮಾಹಿತಿ ನೀಡುತ್ತಿದ್ದಳು.

ಈ ಹಿನ್ನೆಲೆಯಲ್ಲಿ ಬೈಯಪ್ಪನಹಳ್ಳಿ ಪೊಲೀಸರು ಉಷಾರಾಣಿಯನ್ನು ಬಂಧಿಸಿದ್ದಾರೆ ಉಷಾರಾಣಿಗೆ ಈ ಜಾಲದ ನಂಟು ಸಿಕ್ಕಿದ್ದು ಹೇಗೆ..? ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಉಷಾರಾಣಿ ನಕಲಿ ದಾಖಲೆ ಸೃಷ್ಟಿಸಿದ್ದು ಹೇಗೆ..? ಎಂಬ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:51 am, Mon, 4 December 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ