AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಡಿತರದಾರರಿಗೆ ಬಿಗ್ ಶಾಕ್: ಮುಂದಿನ ತಿಂಗಳಿನಿಂದ ಪಡಿತರದಾರರಿಗೆ 4 ಕೆಜಿ ಅಕ್ಕಿ ಕಡಿತ

ಕಳೆದ 2 ವರ್ಷಗಳಿಂದ 10 ಕೆಜಿ ಉಚಿತ ಅಕ್ಕಿ ನೀಡಲಾಗುತ್ತಿತ್ತು. ಮುಂದಿನ ತಿಂಗಳಿಂದ 6 ಕೆ.ಜಿ ಅಕ್ಕಿ ವಿತರಣೆ ಮಾಡಲಾಗುತ್ತದೆ.

ಪಡಿತರದಾರರಿಗೆ ಬಿಗ್ ಶಾಕ್: ಮುಂದಿನ ತಿಂಗಳಿನಿಂದ ಪಡಿತರದಾರರಿಗೆ 4 ಕೆಜಿ ಅಕ್ಕಿ ಕಡಿತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 04, 2023 | 1:42 PM

Share

ಬೆಂಗಳೂರು: ಮುಂದಿನ ತಿಂಗಳಿನಿಂದ ಪಡಿತರದಾರರಿಗೆ 4 ಕೆಜಿ ಅಕ್ಕಿ ಕಡಿತ ಮಾಡಲಾಗುತ್ತದೆ. ಪಡಿತರದಾರರಿಗೆ 10 ಕೆಜಿ ಬದಲು 6 ಕೆಜಿ ಮಾತ್ರ ಅಕ್ಕಿ ವಿತರಣೆ ಮಾಡಲಾಗುತ್ತದೆ ಎಂದು ಆಹಾರ, ನಾಗರಿಕ ಸರಬರಾಜು & ಗ್ರಾಹಕರ ವ್ಯವಹಾರ ಇಲಾಖೆಯ ಜಂಟಿ ನಿರ್ದೇಶಕ ವಿಜಯ್ ಕುಮಾರ್ ತಿಳಿಸಿದ್ದಾರೆ.

ಕಳೆದ 2 ವರ್ಷಗಳಿಂದ 10 ಕೆಜಿ ಉಚಿತ ಅಕ್ಕಿ ನೀಡಲಾಗುತ್ತಿತ್ತು. ಮುಂದಿನ ತಿಂಗಳಿಂದ 6 ಕೆ.ಜಿ ಅಕ್ಕಿ ವಿತರಣೆ ಮಾಡಲಾಗುತ್ತದೆ. ರಾಜ್ಯದಲ್ಲಿ ಕೇಂದ್ರದ 1.2 ಕೋಟಿ BPL ಕಾರ್ಡ್​ದಾರರಿದ್ದಾರೆ. ಈಗ ಕೇಂದ್ರವೇ ನೇರವಾಗಿ 5 ಕೆಜಿ ಅಕ್ಕಿ ಉಚಿತವಾಗಿ ನೀಡುತ್ತಿದೆ. ರಾಜ್ಯ ಸರ್ಕಾರ 1 ಕೆಜಿ ಅಕ್ಕಿ ಖರೀದಿಸಿ ಉಚಿತವಾಗಿ ನೀಡಲಿದೆ. ಈ ಹಿಂದೆ ರಾಜ್ಯ ಸರ್ಕಾರ ಕೇಂದ್ರದಿಂದ ಅಕ್ಕಿ ಖರೀದಿಸುತ್ತಿತ್ತು. ಪ್ರತಿ ಕೆಜಿಗೆ 3 ರೂ. ಕೊಟ್ಟು ಖರೀದಿಸಿ ಉಚಿತವಾಗಿ ನೀಡುತ್ತಿತ್ತು ಎಂದರು.

ಇದನ್ನೂ ಓದಿ: Covid New Symptoms: ಮತ್ತೆ ಬಂತು ಕೊರೊನಾ: ತೀವ್ರತೆಯೂ ಬೇರೆ, ಲಕ್ಷಣಗಳೂ ಬದಲು

ಕೊವಿಡ್‌ ಹಿನ್ನೆಲೆ 2020-21ರ ಮೇ ತಿಂಗಳಿಂದ 2022ರ ಡಿ.31ರವರೆಗೆ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಯೋನೆಯಡಿ ಪ್ರತಿ ಫಲಾನುಭವಿಗಳಿಗೆ ತಲಾ 5 ಕೆಜಿ ಅಕ್ಕಿಯನ್ನು ವಿತರಿಸುತ್ತಿತ್ತು. ಇದರೊಂದಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅನ್ವಯ ರಾಜ್ಯ ಸರ್ಕಾರವೂ ಪ್ರತಿ ಫಲಾನುಭವಿಗೆ ತಲಾ 5 ಕೆಜಿ ಅಕ್ಕಿ ಹಂಚಿಕೆ ಮಾಡುತ್ತಿತ್ತು. ಈಗ ಹತ್ತು ಕೆಜಿ ಅಕ್ಕಿ ವಿತರಣೆ ಬಂದ್ ಮಾಡಿ ಕೇವಲ 6 ಕೆಜಿ ಅಕ್ಕಿ ನೀಡಲಾಗುತ್ತೆ. ಕೇಂದ್ರ ಸರ್ಕಾರವೇ 5 ಕೆಜಿ ಉಚಿತವಾಗಿ ಅಕ್ಕಿ ವಿತರಣೆ ಮಾಡಲಿದ್ದು ರಾಜ್ಯ ಸರ್ಕಾರ ಒಂದು ಕೆಜಿ ಅಕ್ಕಿ, ಖರೀದಿ ಮಾಡಿ ಉಚಿವಾಗಿ ವಿತರಣೆ ಮಾಡಲಿದೆ ಎಂದು ಇಲಾಖೆಯ ಜಂಟಿ ನಿರ್ದೇಶಕ ವಿಜಯ್ ಕುಮಾರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಪ್ರಸ್ತುತ 10,91,508 ಅಂತ್ಯೋದಯ ಕಾರ್ಡುಗಳಿದ್ದು 44,83,745 ಮಂದಿ ಫಲಾನುಭವಿಗಳಿದ್ದಾರೆ. ಹಾಗೆಯೇ 1,15,93,227 ಬಿಪಿಎಲ್‌ ಕಾರ್ಡುಗಳಿದ್ದು 3,87,79,975 ಮಂದಿ ಫಲಾನುಭವಿಗಳಿದ್ದಾರೆ. ಹೀಗೆ ಒಟ್ಟು 4,32,63,720 ಮಂದಿ ಫಲಾನುಭವಿಗಳು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅನ್ವಯ ಪ್ರತಿ ತಿಂಗಳು ತಲಾ 6 ಕೆಜಿ ಅಕ್ಕಿಯನ್ನು ಪಡೆಯಲಿದ್ದಾರೆ. ಕೇಂದ್ರ ಸರ್ಕಾರವೇ ರಾಜ್ಯದ 4.32 ಕೋಟಿಗೂ ಅಧಿಕ ಜನರಿಗೆ ಪ್ರತಿ ಯೂನಿಟ್‌ಗೆ ತಲಾ 5 ಕೆಜಿ ಅಕ್ಕಿ ಉಚಿತವಾಗಿ ಹಂಚಿಕೆ ಮಾಡಲಿದ್ದು ಇದರಿಂದ ರಾಜ್ಯಕ್ಕೆ ಪ್ರತಿ ತಿಂಗಳು ಸುಮಾರು 12.90 ಕೋಟಿ ರೂ.ನಂತೆ ವರ್ಷಕ್ಕೆ 150ರಿಂದ 200 ಕೋಟಿ ರೂ ಉಳಿತಾಯವಾಗಲಿದೆ ಎಂದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ