AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚ ಪಡೆಯುವಾಗ ಸಿಕ್ಕಿಬಿದ್ದ ಫುಡ್ ಇನ್ಸ್ಪೆಕ್ಟರ್ ತಪ್ಪಿಸಿಕೊಳ್ಳಲು ಯತ್ನ; 15 ಕಿ.ಮೀ ಚೇಸ್​ ಮಾಡಿ ಹಿಡಿದ ಲೋಕಾಯುಕ್ತ ಅಧಿಕಾರಿಗಳು

ಭ್ರಷ್ಟ ಅಧಿಕಾರಿಯನ್ನು ಹಿಡಿಯಲು ಬಲೆ ಬೀಸಿದ ಲೋಕಾಯುಕ್ತ ಅಧಿಕಾರಿಗಳು ಸಿನಿಮಾ ಶೈಲಿಯಲ್ಲಿ ಕಾರ್ಯಚರಣೆ ಮಾಡಿ, ಕೊನೆಗೂ ಆರೋಪಿಯನ್ನು ಬಂಧಿಸಿದ್ದಾರೆ.

ಲಂಚ ಪಡೆಯುವಾಗ ಸಿಕ್ಕಿಬಿದ್ದ ಫುಡ್ ಇನ್ಸ್ಪೆಕ್ಟರ್ ತಪ್ಪಿಸಿಕೊಳ್ಳಲು ಯತ್ನ; 15 ಕಿ.ಮೀ ಚೇಸ್​ ಮಾಡಿ ಹಿಡಿದ ಲೋಕಾಯುಕ್ತ ಅಧಿಕಾರಿಗಳು
ಲೋಕಾಯುಕ್ತ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Jul 15, 2023 | 8:58 AM

Share

ಬೆಂಗಳೂರು, ಜು.15: ನಗರದ ತಹಶೀಲ್ದಾರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಹಾರ ನಿರೀಕ್ಷಕ(Food Inspector) ಮಹಾಂತೇಗೌಡ ಬಿ ಕಡಬಾಳು ಎನ್ನುವವರು, ರಂಗದಾಮಯ್ಯ ಎಂಬುವರ ಬಳಿ ಟ್ರೇಡ್ ಲೈಸೆನ್ಸ್ ಚೆಕ್ ಮಾಡಲು 1 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಮುಂಗಡ ಹಣ 43ಸಾವಿರ ನಗದನ್ನ ತೆಗೆದುಕೊಳ್ಳುವಾಗ ಲೋಕಾಯುಕ್ತ(Lokayukta) ಬಲೆಗೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. ಇನ್ನು ತನ್ನ ಮೇಲೆ ಲೋಕಾಯುಕ್ತರು ದಾಳಿ ಮಾಡಿದ್ದಾರೆಂದ ಕೂಡಲೇ ತಮ್ಮ ಕಾರಿನಲ್ಲಿ ಪರಾರಿಯಾಗಲು ಪ್ರಯತ್ನಿಸಿದ್ದಾರೆ.

15 ಕಿ.ಮೀ ಚೇಸ್​ ಮಾಡಿ ಹಿಡಿದ ಲೋಕಾಯುಕ್ತ ಅಧಿಕಾರಿಗಳು

ಲೋಕಾಯುಕ್ತ ದಾಳಿ ಮಾಡುತ್ತಿದ್ದಂತೆ ಆರೋಪಿ ಫುಡ್ ಇನ್ಸ್ಪೆಕ್ಟರ್​ ಕಾರು ಹತ್ತಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಸುಮಾರು 15 ಕಿ.ಮೀ ವರೆಗೆ ಹಿಂಬಾಲಿಸಿ ನೆಲಮಂಗಲದ ಸೊಂಡೆಕೊಪ್ಪ ರಸ್ತೆ ಬಳಿ ಲೋಕಾಯುಕ್ತ ಅಧಿಕಾರಿಗಳು ಸುತ್ತುವರೆದಿದ್ದಾರೆ. ಅದಾಗ್ಯೂ. ಅಧಿಕಾರಿಗಳ ಮೇಲೆ ವಾಹನವನ್ನು ಚಲಾಯಿಸಲು ಪ್ರಯತ್ನಿಸಿದ್ದರು. ಕೊನೆಗೆ ಮತ್ತೊಂದು ಕಾರನ್ನು ಬಳಸಿ ಅವರನ್ನು ಹಿಡಿದ ಘಟನೆ ನಡೆದಿದೆ.

ಇದನ್ನೂ ಓದಿ:ಅಜಿತ್ ರೈ ಲೋಕಾಯುಕ್ತ ಕಸ್ಟಡಿ ಅವಧಿ ಮುಕ್ತಾಯ: ಹೆಚ್ಚಿನ ತನಿಖೆಗಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ವಿಶೇಷ ಕೋರ್ಟ್‌

ಅಧಿಕಾರಿಯ ವಿರುದ್ದ ಪೊಲೀಸ್​ ಠಾಣೆಗೆ ದೂರು

ಇನ್ನು ಲಂಚ ತೆಗೆದುಕೊಳ್ಳುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದರು, ಜೊತೆಗೆ ತಪ್ಪಿಸಿಕೊಳ್ಳಲು ಯತ್ನಿಸಿದ ಹಿನ್ನಲೆ, ಹಲ್ಲೆ ಮತ್ತು ಪೊಲೀಸರು ತಮ್ಮ ಕರ್ತವ್ಯವನ್ನು ನಿರ್ವಹಿಸದಂತೆ ತಡೆದ ಆರೋಪದ ಮೇಲೆ ಅಧಿಕಾರಿಯ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣವನ್ನೂ ದಾಖಲಿಸಲಾಗಿದೆ.

ಕಿಡಿಗೇಡಿಗಳ ದುಷ್ಕೃತ್ಯ; ಮನೆ ಮುಂದೆ ನಿಲ್ಲಿಸಿದ ಕಾರ್ ಮತ್ತು ಆಟೋಗಳ ಗ್ಲಾಸ್ ಒಡೆದ ಪುಂಡರು

ಕಲಬುರಗಿ: ಜಿಲ್ಲೆಯಲ್ಲಿ ಕಿಡಿಗೇಡಿಗಳ ದುಷ್ಕೃತ್ಯ ಹೆಚ್ಚಾಗಿದೆ. ಮನೆ ಮುಂದೆ ನಿಲ್ಲಿಸಿದ ಕಾರ್ ಮತ್ತು ಆಟೋಗಳ ಗ್ಲಾಸ್​ನ್ನ ಒಡೆದು ಪುಂಡಾಡ ಮೆರೆದ ಘಟನೆ ಕಲಬುರಗಿ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ. 2 ಕಾರು, ನಾಲ್ಕು ಆಟೋಗಳ ಗ್ಲಾಸ್​ಗೆ ಕಿಡಿಗೇಡಿಗಳು ಕೆಲ್ಲೆಸದು ಹೋಗಿದ್ದಾರೆ. ಸ್ಥಳಕ್ಕೆ ಪೊಲೀಸರ ಆಗಮಿಸಿದ್ದು, ಸ್ಥಳೀಯರಿಂದ ಮಾಹಿತಿ ಸಂಗ್ರಹ ಮಾಡಿದ್ದಾರೆ. ಈ ಕುರಿತು ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:53 am, Sat, 15 July 23

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​