AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಮ್ಯಾಚ್ ಫಿಕ್ಸಿಂಗ್ ಪ್ರಕರಣ; ಸದ್ದಿಲ್ಲದೆ ಆರೋಪಿಗಳಿಗಾಗಿ ಬಲೆ ಬೀಸಿದ ಸಿಸಿಬಿ

ಸಿಸಿಬಿ ಅಧಿಕಾರಿಗಳು ಫುಟ್ ಬಾಲ್ ಗ್ರೌಂಡ್​ನಲ್ಲಿ ಬೀಡು ಬಿಟ್ಟಿದ್ದು ಪ್ರತಿ ಮ್ಯಾಚ್, ಪ್ರತಿ ಆಟಗಾರರ ಮೇಲೆ ಕಣ್ಣಿಟ್ಟಿದ್ದಾರೆ. ಪ್ರತಿ ಹಂತದಲ್ಲೂ ಆಗುವ ಬದಲಾವಣೆಗಳ ಬಗ್ಗೆ ನಿಗಾ ವಹಿಸಿದ್ದಾರೆ. ದೂರಿಗೆ ಸಂಬಂಧಿಸಿದಂತೆ ಇಂಚಿಂಚೂ ಪರಿಶೀಲನೆ ನಡೆಸಿದ್ದಾರೆ. ಆರೋಪಕ್ಕೆ ಸಾಕ್ಷಿ ಸಿಕ್ಕರೆ ಆಟಗಾರರಿಗೆ ಕಂಟಕ ಕಟ್ಟಿಟ್ಟ ಬುತ್ತಿ.

ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಮ್ಯಾಚ್ ಫಿಕ್ಸಿಂಗ್ ಪ್ರಕರಣ; ಸದ್ದಿಲ್ಲದೆ ಆರೋಪಿಗಳಿಗಾಗಿ ಬಲೆ ಬೀಸಿದ ಸಿಸಿಬಿ
ಸಿಸಿಬಿ
Follow us
Jagadisha B
| Updated By: ಆಯೇಷಾ ಬಾನು

Updated on: Oct 26, 2023 | 9:11 AM

ಬೆಂಗಳೂರು, ಅ.26: ಭಾರತೀಯ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಮ್ಯಾಚ್ ಫಿಕ್ಸಿಂಗ್ (Football Match Fixing) ನಡೆದಿದೆ ಎಂಬ ಬಗ್ಗೆ ದೂರು ದಾಖಲಾಗುತ್ತಿದ್ದಂತೆ ಸಿಸಿಬಿ ಅಧಿಕಾರಿಗಳು (CCB Afficials) ಸದ್ದಿಲ್ಲದೇ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಎಸಿಪಿ ನೇತೃತ್ವದ ವಿಶೇಷ ತಂಡ ಸೀಕ್ರೆಟ್ ಟಾಸ್ಕ್ ಆರಂಭಿಸಿದೆ. ಖುದ್ದು ಸಿಸಿಬಿ ಡಿಸಿಪಿ ಅಬ್ದುಲ್ ಅಹದ್ ಅವರೇ ಟಾಸ್ಕ್ ನ ಪರಿಶೀಲನೆ ನಡೆಸುತ್ತಿದ್ದಾರೆ.

ಹೌದು ಭಾರತೀಯ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಖುದ್ದು ಕರ್ನಾಟಕ ಪುಟ್ಬಾಲ್ ಅಸೋಸಿಯೇಷನ್​ನ ಅಧ್ಯಕ್ಷ, ಅಖಿಲ ಭಾರತ ಫುಟ್‌ಬಾಲ್‌ ಫೆಡರೇಷನ್‌ನ ಉಪಾಧ್ಯಕ್ಷರೂ ಆಗಿರುವ ಶಾಸಕ ಎನ್.ಎ. ಹ್ಯಾರಿಸ್ (N A Haris) ಅವರು ದೂರು ನೀಡಿದ್ದರು. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಸಿಸಿಬಿ ಅಧಿಕಾರಿಗಳು ಎಫ್​ಐಆರ್ ದಾಖಲಿಸದೇ ಬಂದ ದೂರಿನಾಧಾರದಡಿ ತನಿಖೆ ನಡೆಸುತ್ತಿದ್ದಾರೆ. ಸೂಪರ್ ಡಿವಿಷನ್ ಲೀಗ್ ಫುಟ್ ಬಾಲ್ ಟೂರ್ನಿಯಲ್ಲಿ ಫಿಕ್ಸಿಂಗ್ ನಡೆಯುತ್ತಿದೆ. ಕೆಲ ಆಟಗಾರರು ಸಹ ಬುಕ್ ಆಗಿದ್ದಾರೆಂಬ ಬಗ್ಗೆ ಶಾಸಕ ಹ್ಯಾರಿಸ್ ಅನುಮಾನ ವ್ಯಕ್ತಪಡಿಸಿದ್ದರು. ಈ ಹಿನ್ನಲೆ ಸಿಕ್ರೆಟ್ ತನಿಖೆ ನಡೆಯುತ್ತಿದೆ. ಪ್ರಕರಣ ಸೂಕ್ಷ್ಮತೆಯನ್ನು ಗಮನಿಸಿ ನಾಜೂಕಿನಿಂದ ಹ್ಯಾಂಡಲ್ ಮಾಡಲಾಗುತ್ತಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ನಡೆಯುತ್ತಿರುವ ಫುಟ್ಬಾಲ್ ಟೂರ್ನಿಯಲ್ಲಿ ನಡೆಯುತ್ತಿದ್ಯಾ ಫಿಕ್ಸಿಂಗ್​?​ ಶಾಸಕ ಹ್ಯಾರಿಸ್​ ದೂರಿನ ಮೇರೆಗೆ ತನಿಖೆ ಚುರುಕು

ಫುಟ್ ಬಾಲ್ ಗ್ರೌಂಡ್​ನಲ್ಲಿ ಬೀಡು ಬಿಟ್ಟ ಸಿಸಿಬಿ ತಂಡ

ಸಿಸಿಬಿ ಅಧಿಕಾರಿಗಳು ಫುಟ್ ಬಾಲ್ ಗ್ರೌಂಡ್​ನಲ್ಲಿ ಬೀಡು ಬಿಟ್ಟಿದ್ದು ಪ್ರತಿ ಮ್ಯಾಚ್, ಪ್ರತಿ ಆಟಗಾರರ ಮೇಲೆ ಕಣ್ಣಿಟ್ಟಿದ್ದಾರೆ. ಪ್ರತಿ ಹಂತದಲ್ಲೂ ಆಗುವ ಬದಲಾವಣೆಗಳ ಬಗ್ಗೆ ನಿಗಾ ವಹಿಸಿದ್ದಾರೆ. ದೂರಿಗೆ ಸಂಬಂಧಿಸಿದಂತೆ ಇಂಚಿಂಚೂ ಪರಿಶೀಲನೆ ನಡೆಸಿದ್ದಾರೆ. ಆರೋಪಕ್ಕೆ ಸಾಕ್ಷಿ ಸಿಕ್ಕರೆ ಆಟಗಾರರಿಗೆ ಕಂಟಕ ಕಟ್ಟಿಟ್ಟ ಬುತ್ತಿ.

ಈಗಾಗಲೇ ಸಿಸಿಬಿಯಿಂದ ಆರು ಮ್ಯಾಚ್​ಗಳ ವಿಡಿಯೋ ಪರಿಶೀಲನೆ ನಡೆದಿದೆ. ಖುದ್ದು ಡಿಸಿಪಿ ಅವರು ಕೂಡ ಪರಿಶೀಲನೆ ನಡೆಸುತ್ತಿದ್ದಾರೆ. ಆಟಗಾರರ ನಡವಳಿಕೆಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಈಗಾಗಲೇ ಕೆಲವು ಆಟಗಾರರ ವಿಚಾರಣೆ ಕೂಡ ನಡೆದಿದೆ. ಈವರೆಗೂ ಆರೋಪಕ್ಕೆ ಸಂಬಂಧಿಸಿದಂತೆ ಸಾಕ್ಷಿ ಪತ್ತೆಯಾಗಿಲ್ಲ. ಆದರೇ ಆರೋಪದ ಹಿನ್ನಲೆ ಬಲವಾದ ಅಂಶಗಳು ಇರುವ ಸಾಧ್ಯತೆ ಇದೆ. ಈ ಹಿನ್ನಲೆ ಸಿಸಿಬಿ ಹಲವು ಆಯಾಮದಲ್ಲಿ ತನಿಖೆ ನಡೆಸುತ್ತಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹನುಮಾನ್ ಭಕ್ತರೊಬ್ಬರ ಅಂತ್ಯಕ್ರಿಯೆಗೆ ಬಂದ ಕೋತಿ
ಹನುಮಾನ್ ಭಕ್ತರೊಬ್ಬರ ಅಂತ್ಯಕ್ರಿಯೆಗೆ ಬಂದ ಕೋತಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ