AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಮ್ಯಾಚ್ ಫಿಕ್ಸಿಂಗ್ ಪ್ರಕರಣ; ಸದ್ದಿಲ್ಲದೆ ಆರೋಪಿಗಳಿಗಾಗಿ ಬಲೆ ಬೀಸಿದ ಸಿಸಿಬಿ

ಸಿಸಿಬಿ ಅಧಿಕಾರಿಗಳು ಫುಟ್ ಬಾಲ್ ಗ್ರೌಂಡ್​ನಲ್ಲಿ ಬೀಡು ಬಿಟ್ಟಿದ್ದು ಪ್ರತಿ ಮ್ಯಾಚ್, ಪ್ರತಿ ಆಟಗಾರರ ಮೇಲೆ ಕಣ್ಣಿಟ್ಟಿದ್ದಾರೆ. ಪ್ರತಿ ಹಂತದಲ್ಲೂ ಆಗುವ ಬದಲಾವಣೆಗಳ ಬಗ್ಗೆ ನಿಗಾ ವಹಿಸಿದ್ದಾರೆ. ದೂರಿಗೆ ಸಂಬಂಧಿಸಿದಂತೆ ಇಂಚಿಂಚೂ ಪರಿಶೀಲನೆ ನಡೆಸಿದ್ದಾರೆ. ಆರೋಪಕ್ಕೆ ಸಾಕ್ಷಿ ಸಿಕ್ಕರೆ ಆಟಗಾರರಿಗೆ ಕಂಟಕ ಕಟ್ಟಿಟ್ಟ ಬುತ್ತಿ.

ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಮ್ಯಾಚ್ ಫಿಕ್ಸಿಂಗ್ ಪ್ರಕರಣ; ಸದ್ದಿಲ್ಲದೆ ಆರೋಪಿಗಳಿಗಾಗಿ ಬಲೆ ಬೀಸಿದ ಸಿಸಿಬಿ
ಸಿಸಿಬಿ
Jagadisha B
| Edited By: |

Updated on: Oct 26, 2023 | 9:11 AM

Share

ಬೆಂಗಳೂರು, ಅ.26: ಭಾರತೀಯ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಮ್ಯಾಚ್ ಫಿಕ್ಸಿಂಗ್ (Football Match Fixing) ನಡೆದಿದೆ ಎಂಬ ಬಗ್ಗೆ ದೂರು ದಾಖಲಾಗುತ್ತಿದ್ದಂತೆ ಸಿಸಿಬಿ ಅಧಿಕಾರಿಗಳು (CCB Afficials) ಸದ್ದಿಲ್ಲದೇ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಎಸಿಪಿ ನೇತೃತ್ವದ ವಿಶೇಷ ತಂಡ ಸೀಕ್ರೆಟ್ ಟಾಸ್ಕ್ ಆರಂಭಿಸಿದೆ. ಖುದ್ದು ಸಿಸಿಬಿ ಡಿಸಿಪಿ ಅಬ್ದುಲ್ ಅಹದ್ ಅವರೇ ಟಾಸ್ಕ್ ನ ಪರಿಶೀಲನೆ ನಡೆಸುತ್ತಿದ್ದಾರೆ.

ಹೌದು ಭಾರತೀಯ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಖುದ್ದು ಕರ್ನಾಟಕ ಪುಟ್ಬಾಲ್ ಅಸೋಸಿಯೇಷನ್​ನ ಅಧ್ಯಕ್ಷ, ಅಖಿಲ ಭಾರತ ಫುಟ್‌ಬಾಲ್‌ ಫೆಡರೇಷನ್‌ನ ಉಪಾಧ್ಯಕ್ಷರೂ ಆಗಿರುವ ಶಾಸಕ ಎನ್.ಎ. ಹ್ಯಾರಿಸ್ (N A Haris) ಅವರು ದೂರು ನೀಡಿದ್ದರು. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಸಿಸಿಬಿ ಅಧಿಕಾರಿಗಳು ಎಫ್​ಐಆರ್ ದಾಖಲಿಸದೇ ಬಂದ ದೂರಿನಾಧಾರದಡಿ ತನಿಖೆ ನಡೆಸುತ್ತಿದ್ದಾರೆ. ಸೂಪರ್ ಡಿವಿಷನ್ ಲೀಗ್ ಫುಟ್ ಬಾಲ್ ಟೂರ್ನಿಯಲ್ಲಿ ಫಿಕ್ಸಿಂಗ್ ನಡೆಯುತ್ತಿದೆ. ಕೆಲ ಆಟಗಾರರು ಸಹ ಬುಕ್ ಆಗಿದ್ದಾರೆಂಬ ಬಗ್ಗೆ ಶಾಸಕ ಹ್ಯಾರಿಸ್ ಅನುಮಾನ ವ್ಯಕ್ತಪಡಿಸಿದ್ದರು. ಈ ಹಿನ್ನಲೆ ಸಿಕ್ರೆಟ್ ತನಿಖೆ ನಡೆಯುತ್ತಿದೆ. ಪ್ರಕರಣ ಸೂಕ್ಷ್ಮತೆಯನ್ನು ಗಮನಿಸಿ ನಾಜೂಕಿನಿಂದ ಹ್ಯಾಂಡಲ್ ಮಾಡಲಾಗುತ್ತಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ನಡೆಯುತ್ತಿರುವ ಫುಟ್ಬಾಲ್ ಟೂರ್ನಿಯಲ್ಲಿ ನಡೆಯುತ್ತಿದ್ಯಾ ಫಿಕ್ಸಿಂಗ್​?​ ಶಾಸಕ ಹ್ಯಾರಿಸ್​ ದೂರಿನ ಮೇರೆಗೆ ತನಿಖೆ ಚುರುಕು

ಫುಟ್ ಬಾಲ್ ಗ್ರೌಂಡ್​ನಲ್ಲಿ ಬೀಡು ಬಿಟ್ಟ ಸಿಸಿಬಿ ತಂಡ

ಸಿಸಿಬಿ ಅಧಿಕಾರಿಗಳು ಫುಟ್ ಬಾಲ್ ಗ್ರೌಂಡ್​ನಲ್ಲಿ ಬೀಡು ಬಿಟ್ಟಿದ್ದು ಪ್ರತಿ ಮ್ಯಾಚ್, ಪ್ರತಿ ಆಟಗಾರರ ಮೇಲೆ ಕಣ್ಣಿಟ್ಟಿದ್ದಾರೆ. ಪ್ರತಿ ಹಂತದಲ್ಲೂ ಆಗುವ ಬದಲಾವಣೆಗಳ ಬಗ್ಗೆ ನಿಗಾ ವಹಿಸಿದ್ದಾರೆ. ದೂರಿಗೆ ಸಂಬಂಧಿಸಿದಂತೆ ಇಂಚಿಂಚೂ ಪರಿಶೀಲನೆ ನಡೆಸಿದ್ದಾರೆ. ಆರೋಪಕ್ಕೆ ಸಾಕ್ಷಿ ಸಿಕ್ಕರೆ ಆಟಗಾರರಿಗೆ ಕಂಟಕ ಕಟ್ಟಿಟ್ಟ ಬುತ್ತಿ.

ಈಗಾಗಲೇ ಸಿಸಿಬಿಯಿಂದ ಆರು ಮ್ಯಾಚ್​ಗಳ ವಿಡಿಯೋ ಪರಿಶೀಲನೆ ನಡೆದಿದೆ. ಖುದ್ದು ಡಿಸಿಪಿ ಅವರು ಕೂಡ ಪರಿಶೀಲನೆ ನಡೆಸುತ್ತಿದ್ದಾರೆ. ಆಟಗಾರರ ನಡವಳಿಕೆಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಈಗಾಗಲೇ ಕೆಲವು ಆಟಗಾರರ ವಿಚಾರಣೆ ಕೂಡ ನಡೆದಿದೆ. ಈವರೆಗೂ ಆರೋಪಕ್ಕೆ ಸಂಬಂಧಿಸಿದಂತೆ ಸಾಕ್ಷಿ ಪತ್ತೆಯಾಗಿಲ್ಲ. ಆದರೇ ಆರೋಪದ ಹಿನ್ನಲೆ ಬಲವಾದ ಅಂಶಗಳು ಇರುವ ಸಾಧ್ಯತೆ ಇದೆ. ಈ ಹಿನ್ನಲೆ ಸಿಸಿಬಿ ಹಲವು ಆಯಾಮದಲ್ಲಿ ತನಿಖೆ ನಡೆಸುತ್ತಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಿರಲಿಲ್ಲ ಎಂದ ಬಿಜೆಪಿ
ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಿರಲಿಲ್ಲ ಎಂದ ಬಿಜೆಪಿ
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ
ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ: ವಿಡಿಯೋ ನೋಡಿ
ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ: ವಿಡಿಯೋ ನೋಡಿ
ಅಜಿತ್​​​ ಪವರ್​​​ ಸಾವು ಪ್ರಕರಣದ ಹೊಸ ಅಪ್ಡೇಟ್
ಅಜಿತ್​​​ ಪವರ್​​​ ಸಾವು ಪ್ರಕರಣದ ಹೊಸ ಅಪ್ಡೇಟ್
ಕೈ ಶಾಸಕರಿಂದ ವಿದೇಶ ಪ್ರವಾಸ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ ಆಪ್ತ
ಕೈ ಶಾಸಕರಿಂದ ವಿದೇಶ ಪ್ರವಾಸ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ ಆಪ್ತ