
ಬೆಂಗಳೂರು, ಜುಲೈ 06: ನಗರದಲ್ಲಿ ನಡೆಯುತ್ತಿರುವ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವಿರುದ್ಧ ಸಿಡಿದೆದ್ದಿರುವ ಬೀದಿ ಬದಿ ವ್ಯಾಪಾರಿಗಳ ಜಂಟಿ ಹೋರಾಟ ಸಮಿತಿ ರಾಜ್ಯ ಸರ್ಕಾರಕ್ಕೆ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವರಿಗೆ ಸಾಲು ಸಾಲು ಪ್ರಶ್ನೆಗಳನ್ನು ಕೇಳಿದೆ. ಪಾದಚಾರಿ ಮಾರ್ಗದ ಬಗ್ಗೆ ಹೇಗೆ ಕೋರ್ಟ್ ಆದೇಶ ಮಾಡಿದಿಯೋ, ಅದೇ ರೀತಿ ಬೀದಿ ಬದಿ ವ್ಯಾಪಾರಿಗಳ ಬಗ್ಗೆಯೂ ನ್ಯಾಯಾಲಯದ ಆರ್ಡರ್ ಆಗಿದೆ. ನಾವು ಈ ಬಗ್ಗೆ ಹೋರಾಟ ಮಾಡುತ್ತೇವೆ ಎಂಬ ಎಚ್ಚರಿಕೆ ನೀಡಿದೆ.
ಅನ್ಯೋನ್ಯವಾಗಿದ್ದ ನಮ್ಮ ಮತ್ತು ಪಾದಚಾರಿಗಳ ನಡುವೆ ಈಗ ಸರ್ಕಾರವೇ ಒಡಕು ಮೂಡಿಸಿದೆ. ನ್ಯಾಯಾಲಯ ಹೇಳಿದೆ ಅಂತ ತೆರವು ಮಾಡ್ತಿದ್ದೀರಿ. ಆದರೆ ಅದೇ ನ್ಯಾಯಾಲಯ ಬೀದಿ ಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕು, ವೆಂಡಿಂಗ್ ಝೋನ್ ಗುರುತಿಸಬೇಕು ಎಂದು ಹೇಳಿದೆ. ಇದನೆಲ್ಲ ಗಾಳಿಗೆ ತೂರಿ ಕಾನೂನು ಬಾಹಿರವಾಗಿ ಎತ್ತಂಗಡಿ ಮಾಡುತ್ತಿದ್ದಾರೆ. ನೋಟಿಸ್ ಕೂಡ ನೀಡದೆ ಕೊಟ್ಟಿದ್ದೇವೆ ಎನ್ನುತ್ತಿದ್ದಾರೆ ಎಂದು ಆರೋಪಿಸಿರುವ ಸಮಿತಿ, ಬೆಂಗಳೂರು ನಗಾರಭಿವೃದ್ದಿ ಸಚಿವ ಕೃಷ್ಣ ಭೈರೇಗೌಡರಿಗೆ ಸಪ್ತ ಪ್ರಶ್ನೆಗಳನ್ನು ಕೇಳಿದೆ.
ಇದನ್ನೂ ಓದಿ: ಫುಟ್ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್; ಮುಖ್ಯ ರಸ್ತೆಗಳಲ್ಲಿ ವ್ಯಾಪಾರ ಬೇಡ
ಇನ್ನು ಸರ್ಕಾರದ ಕ್ರಮ ವಿರೋಧಿಸಿ ಜುಲೈ 8ರಂದು ಬೆಳ್ಳಗ್ಗೆ 6 ಗಂಟೆಯಿಂದಲೇ ಬೀದಿ ಬದಿ ವ್ಯಾಪಾರ ಬಂದ್ ಆಗಲಿದ್ದು, ಅಂದು ಹಣ್ಣು ಮತ್ತು ತರಕಾರಿಗಳು ಸಿಗೋದು ಡೌಟ್ ಎನ್ನಲಾಗಿದೆ. ರಸ್ತೆ ಬದಿಯ ಫಾಸ್ಟ್ಫುಡ್ ಅಂಗಡಿಗಳೂ ಕ್ಲೋಸ್ ಆಗಬಹುದು ಎನ್ನಲಾಗಿದ್ದು, ಬೀದಿ ಬದಿ ವ್ಯಾಪಾರ ಬಂದ್ ಮಾಡಲು ವ್ಯಾಪಾರಿಗಳಿಂದಲೂ ಸಮ್ಮತಿ ಸಿಕ್ಕಿದೆ ಎನ್ನಲಾಗಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 2:16 pm, Mon, 6 July 26