AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್​ ಖರೀದಿ,​ ಕಾಯ್ದಿರಿಸಲು​​ ಬೆಂಗಳೂರು ರೈಲು ನಿಲ್ದಾಣದಲ್ಲಿದೆ QR ​ಕೋಡ್​​, UTS ಆ್ಯಪ್

ಮೊದಲೆಲ್ಲ ರೈಲು ಟಿಕೆಟ್ ಖರೀದಿಸಬೇಕಿದ್ದರೇ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲಬೇಕಿತ್ತು. ಚಿಲ್ಲರೆಗಾಗಿ ಪರದಾಡಬೇಕಿತ್ತು. ಟಿಕೆಟ್ ಬುಕ್ ಮಾಡಬೇಕು ಅಂದರೆ ನಿಲ್ದಾಣಕ್ಕೆ ಹೋಗಿ ಮಾಡಬೇಕಿತ್ತು. ‌ಆದರೆ ಈ ಎರಡು ‌ಸಮಸ್ಯೆಗೆ ರೈಲ್ವೆ ಇಲಾಖೆ ಮಾಸ್ಟರ್ ಪ್ಲಾನ್ ಮಾಡಿದೆ. ಇಲ್ಲಿದೆ ಓದಿ.

ಟಿಕೆಟ್​ ಖರೀದಿ,​ ಕಾಯ್ದಿರಿಸಲು​​ ಬೆಂಗಳೂರು ರೈಲು ನಿಲ್ದಾಣದಲ್ಲಿದೆ QR ​ಕೋಡ್​​, UTS ಆ್ಯಪ್
ಕ್ಯೂಆರ್​ ಕೋಡ್​ ಮೂಲಕ ಹಣ ಪಾವತಿಸಿ ಟಿಕೆಟ್​ ಖರೀದಿ
ಕಿರಣ್​ ಸೂರ್ಯ
| Edited By: ವಿವೇಕ ಬಿರಾದಾರ|

Updated on:Jun 07, 2024 | 8:06 AM

Share

ಬೆಂಗಳೂರು, ಜೂನ್​ 07: ಈ ಹಿಂದೆ ಪ್ರಯಾಣಿಕರು ರೈಲು ನಿಲ್ದಾಣದಲ್ಲಿ (Railway Station) ಸರತಿ ಸಾಲಲ್ಲಿ ನಿಂತು ಟಿಕೆಟ್ ಖರೀದಿ ಮಾಡಬೇಕಿತ್ತು. ಆದರೆ ಇದೀಗ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ (Karntiveer Sangolli Rayanna Railway Station) ಹೊಸದಾಗಿ ಕ್ಯೂಆರ್ ಕೋಡ್ ಮೂಲಕ ಹಣ ಪಾವತಿಸಿ ಟಿಕೆಟ್ ಖರೀದಿ ಮಾಡಲು ವ್ಯವಸ್ಥೆ ಮಾಡಲಾಗಿದೆ. ಇದರಿಂದ ಪ್ರಯಾಣಿಕರಿಗೆ ಚಿಲ್ಲರೆ ಸಮಸ್ಯೆ, ಸರತಿ ಸಾಲಿನಲ್ಲಿ ನಿಲ್ಲುವುದು ತಪ್ಪಿದೆ. ರೈಲ್ವೆ ಇಲಾಖೆ ದೇಶದ ಎಲ್ಲ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರಿಗಾಗಿ ಕ್ಯೂಆರ್​ ಕೋಡ್ ಮೂಲಕ ಹಣ ಪಾವತಿಸಿ ಟಿಕೆಟ್ ಖರೀದಿ ಮಾಡಲು ಅವಕಾಶ ನೀಡಿದೆ. ಕ್ಯೂಆರ್ ಕೋಡ್ ಮೂಲಕ ಹಣ ಪಾವತಿಸಿ ಟಿಕೆಟ್ ಖರೀದಿ ವಿಧಾನವನ್ನು ಮೊದಲಿಗೆ ಬೆಂಗಳೂರಿನ (Bengaluru) ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ (KSR) ಆರಂಭಿಸಲಾಗಿದೆ.

ಸದ್ಯ 30 ರೈಲು ನಿಲ್ದಾಣಗಳಲ್ಲಿ ಕ್ಯೂಆರ್ ಕೋಡ್​ಗಳನ್ನು ಅಳವಡಿಸಲಾಗಿದೆ. ಸ್ಮಾರ್ಟ್ ಪೋನ್ ಬಳಸುವ ಪ್ರಯಾಣಿಕರು ಟಿಕೆಟ್​ ಕೌಂಟರ್​ಗಳಿಗೆ ತೆರಳದೆ, ಕ್ಯೂಆರ್​ ಕೋಡ್​ ಮೂಲಕ ಟಿಕೆಟ್​ ಖರೀದಿಸಬಹುದು. ಸದ್ಯ ಬೆಂಗಳೂರು ರೈಲು ನಿಲ್ದಾಣದಲ್ಲಿ ಪ್ರತಿದಿನ 750 ಪ್ರಯಾಣಿಕರು ಕ್ಯೂಆರ್ ಕೋಡ್ ಮೂಲಕ ಟಿಕೆಟ್ ಖರೀದಿ ಮಾಡುತ್ತಿದ್ದಾರೆ.

ಇದನ್ನೂ ಓದಿ: ಶೀಘ್ರವೇ ಹಳಿಗಿಳಿಯಲಿದೆ ಚಾಲಕ ರಹಿತ ಮೆಟ್ರೋ ರೈಲು: ಸಿಗ್ನಲಿಂಗ್ ಟೆಸ್ಟ್ ಜೂನ್ 7ರಿಂದ ಶುರು

ಟಿಕೆಟ್​ ಬುಕ್​ ಮಾಡಲು ರೈಲ್ವೆ ಇಲಾಖೆ ಹೊಸ ಆ್ಯಪ್​ ಪರಿಚಯಿಸಿದೆ. ಇಲಾಖೆ ಯುಟಿಎಸ್ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ ಮಾಡಲಾಗಿದೆ. ಈ ಆ್ಯಪ್​ ಮೂಲಕ ಎಲ್ಲಿಂದ ಎಲ್ಲಿಗೆ ಬೇಕಾದರೂ ಯಾರು ಬೇಕಾದರೂ ಟಿಕೆಟ್ ಬುಕ್ ಮಾಡಿ ಪ್ರಯಾಣ ಮಾಡಬಹುದು. ಮಾರ್ಚ್ ತಿಂಗಳಿನಲ್ಲಿ 16 ಸಾವಿರ ಪ್ರಯಾಣಿಕರು ಡೌನ್‌ಲೋಡ್ ಮಾಡಿಕೊಂಡಿದ್ದರೇ, ಏಪ್ರಿಲ್​ನಲ್ಲಿ 19 ಸಾವಿರ ಮತ್ತು ಮೇ ತಿಂಗಳಿನಲ್ಲಿ 24 ಸಾವಿರ ಪ್ರಯಾಣಿಕರು ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಇದರಿಂದ ಪ್ರಯಾಣಿಕರಿಗೆ ತುಂಬಾ ಸಹಾಯ ಆಗುತ್ತಿದೆ ಎಂದು ಪ್ರಯಾಣಿಕ ಸುನಿಲ್ ಹೇಳಿದರು.

ಒಟ್ಟಿನಲ್ಲಿ ಇಷ್ಟು ದಿನ ರೈಲ್ವೆ ಪ್ರಯಾಣಿಕರು ಟಿಕೆಟ್​ಗಾಗಿ ಸರತಿ ಸಾಲಿನಲ್ಲಿ ನಿಂತು, ಚಿಲ್ಲರೆಗಾಗಿ ಕಿರಿಕ್ ಮಾಡಿಕೊಳ್ಳುತ್ತಿದ್ದರು. ಇದನ್ನು ತಪ್ಪಿಸಲು ಕ್ಯೂಆರ್ ಕೋಡ್ ಮತ್ತು ಮೊಬೈಲ್ ಅಪ್ಲಿಕೇಶನ್ ಬಿಡುಗಡೆ ಮಾಡಿದ್ದು, ಇದು ಪ್ರಯಾಣಿಕರಿಗೆ ಸಾಕಷ್ಟು ಸಹಕಾರಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:03 am, Fri, 7 June 24

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ