AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್​ ಖರೀದಿ,​ ಕಾಯ್ದಿರಿಸಲು​​ ಬೆಂಗಳೂರು ರೈಲು ನಿಲ್ದಾಣದಲ್ಲಿದೆ QR ​ಕೋಡ್​​, UTS ಆ್ಯಪ್

ಮೊದಲೆಲ್ಲ ರೈಲು ಟಿಕೆಟ್ ಖರೀದಿಸಬೇಕಿದ್ದರೇ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲಬೇಕಿತ್ತು. ಚಿಲ್ಲರೆಗಾಗಿ ಪರದಾಡಬೇಕಿತ್ತು. ಟಿಕೆಟ್ ಬುಕ್ ಮಾಡಬೇಕು ಅಂದರೆ ನಿಲ್ದಾಣಕ್ಕೆ ಹೋಗಿ ಮಾಡಬೇಕಿತ್ತು. ‌ಆದರೆ ಈ ಎರಡು ‌ಸಮಸ್ಯೆಗೆ ರೈಲ್ವೆ ಇಲಾಖೆ ಮಾಸ್ಟರ್ ಪ್ಲಾನ್ ಮಾಡಿದೆ. ಇಲ್ಲಿದೆ ಓದಿ.

ಟಿಕೆಟ್​ ಖರೀದಿ,​ ಕಾಯ್ದಿರಿಸಲು​​ ಬೆಂಗಳೂರು ರೈಲು ನಿಲ್ದಾಣದಲ್ಲಿದೆ QR ​ಕೋಡ್​​, UTS ಆ್ಯಪ್
ಕ್ಯೂಆರ್​ ಕೋಡ್​ ಮೂಲಕ ಹಣ ಪಾವತಿಸಿ ಟಿಕೆಟ್​ ಖರೀದಿ
Kiran Surya
| Edited By: |

Updated on:Jun 07, 2024 | 8:06 AM

Share

ಬೆಂಗಳೂರು, ಜೂನ್​ 07: ಈ ಹಿಂದೆ ಪ್ರಯಾಣಿಕರು ರೈಲು ನಿಲ್ದಾಣದಲ್ಲಿ (Railway Station) ಸರತಿ ಸಾಲಲ್ಲಿ ನಿಂತು ಟಿಕೆಟ್ ಖರೀದಿ ಮಾಡಬೇಕಿತ್ತು. ಆದರೆ ಇದೀಗ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ (Karntiveer Sangolli Rayanna Railway Station) ಹೊಸದಾಗಿ ಕ್ಯೂಆರ್ ಕೋಡ್ ಮೂಲಕ ಹಣ ಪಾವತಿಸಿ ಟಿಕೆಟ್ ಖರೀದಿ ಮಾಡಲು ವ್ಯವಸ್ಥೆ ಮಾಡಲಾಗಿದೆ. ಇದರಿಂದ ಪ್ರಯಾಣಿಕರಿಗೆ ಚಿಲ್ಲರೆ ಸಮಸ್ಯೆ, ಸರತಿ ಸಾಲಿನಲ್ಲಿ ನಿಲ್ಲುವುದು ತಪ್ಪಿದೆ. ರೈಲ್ವೆ ಇಲಾಖೆ ದೇಶದ ಎಲ್ಲ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರಿಗಾಗಿ ಕ್ಯೂಆರ್​ ಕೋಡ್ ಮೂಲಕ ಹಣ ಪಾವತಿಸಿ ಟಿಕೆಟ್ ಖರೀದಿ ಮಾಡಲು ಅವಕಾಶ ನೀಡಿದೆ. ಕ್ಯೂಆರ್ ಕೋಡ್ ಮೂಲಕ ಹಣ ಪಾವತಿಸಿ ಟಿಕೆಟ್ ಖರೀದಿ ವಿಧಾನವನ್ನು ಮೊದಲಿಗೆ ಬೆಂಗಳೂರಿನ (Bengaluru) ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ (KSR) ಆರಂಭಿಸಲಾಗಿದೆ.

ಸದ್ಯ 30 ರೈಲು ನಿಲ್ದಾಣಗಳಲ್ಲಿ ಕ್ಯೂಆರ್ ಕೋಡ್​ಗಳನ್ನು ಅಳವಡಿಸಲಾಗಿದೆ. ಸ್ಮಾರ್ಟ್ ಪೋನ್ ಬಳಸುವ ಪ್ರಯಾಣಿಕರು ಟಿಕೆಟ್​ ಕೌಂಟರ್​ಗಳಿಗೆ ತೆರಳದೆ, ಕ್ಯೂಆರ್​ ಕೋಡ್​ ಮೂಲಕ ಟಿಕೆಟ್​ ಖರೀದಿಸಬಹುದು. ಸದ್ಯ ಬೆಂಗಳೂರು ರೈಲು ನಿಲ್ದಾಣದಲ್ಲಿ ಪ್ರತಿದಿನ 750 ಪ್ರಯಾಣಿಕರು ಕ್ಯೂಆರ್ ಕೋಡ್ ಮೂಲಕ ಟಿಕೆಟ್ ಖರೀದಿ ಮಾಡುತ್ತಿದ್ದಾರೆ.

ಇದನ್ನೂ ಓದಿ: ಶೀಘ್ರವೇ ಹಳಿಗಿಳಿಯಲಿದೆ ಚಾಲಕ ರಹಿತ ಮೆಟ್ರೋ ರೈಲು: ಸಿಗ್ನಲಿಂಗ್ ಟೆಸ್ಟ್ ಜೂನ್ 7ರಿಂದ ಶುರು

ಟಿಕೆಟ್​ ಬುಕ್​ ಮಾಡಲು ರೈಲ್ವೆ ಇಲಾಖೆ ಹೊಸ ಆ್ಯಪ್​ ಪರಿಚಯಿಸಿದೆ. ಇಲಾಖೆ ಯುಟಿಎಸ್ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ ಮಾಡಲಾಗಿದೆ. ಈ ಆ್ಯಪ್​ ಮೂಲಕ ಎಲ್ಲಿಂದ ಎಲ್ಲಿಗೆ ಬೇಕಾದರೂ ಯಾರು ಬೇಕಾದರೂ ಟಿಕೆಟ್ ಬುಕ್ ಮಾಡಿ ಪ್ರಯಾಣ ಮಾಡಬಹುದು. ಮಾರ್ಚ್ ತಿಂಗಳಿನಲ್ಲಿ 16 ಸಾವಿರ ಪ್ರಯಾಣಿಕರು ಡೌನ್‌ಲೋಡ್ ಮಾಡಿಕೊಂಡಿದ್ದರೇ, ಏಪ್ರಿಲ್​ನಲ್ಲಿ 19 ಸಾವಿರ ಮತ್ತು ಮೇ ತಿಂಗಳಿನಲ್ಲಿ 24 ಸಾವಿರ ಪ್ರಯಾಣಿಕರು ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಇದರಿಂದ ಪ್ರಯಾಣಿಕರಿಗೆ ತುಂಬಾ ಸಹಾಯ ಆಗುತ್ತಿದೆ ಎಂದು ಪ್ರಯಾಣಿಕ ಸುನಿಲ್ ಹೇಳಿದರು.

ಒಟ್ಟಿನಲ್ಲಿ ಇಷ್ಟು ದಿನ ರೈಲ್ವೆ ಪ್ರಯಾಣಿಕರು ಟಿಕೆಟ್​ಗಾಗಿ ಸರತಿ ಸಾಲಿನಲ್ಲಿ ನಿಂತು, ಚಿಲ್ಲರೆಗಾಗಿ ಕಿರಿಕ್ ಮಾಡಿಕೊಳ್ಳುತ್ತಿದ್ದರು. ಇದನ್ನು ತಪ್ಪಿಸಲು ಕ್ಯೂಆರ್ ಕೋಡ್ ಮತ್ತು ಮೊಬೈಲ್ ಅಪ್ಲಿಕೇಶನ್ ಬಿಡುಗಡೆ ಮಾಡಿದ್ದು, ಇದು ಪ್ರಯಾಣಿಕರಿಗೆ ಸಾಕಷ್ಟು ಸಹಕಾರಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:03 am, Fri, 7 June 24

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ