AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್‌ 12 ರಿಂದ ಕೆಂಪೇಗೌಡ ಏರ್‌ಪೋರ್ಟ್‌ನ ಟರ್ಮಿನಲ್​ 2ರಿಂದ ವಿದೇಶಿ ವಿಮಾನಗಳ ಹಾರಾಟ ಆರಂಭ

ಇಂದಿನಿಂದ ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋಟ್​ನ ಗಾರ್ಡನ್ ಟರ್ಮಿನಲ್​ ಎರಡರಿಂದ ಹಾರಾಟ ಮಾಡಬೇಕಿದ್ದ ವಿದೇಶಿ ವಿಮಾನಗಳ ಹಾರಾಟವನ್ನು ಸೆಪ್ಟೆಂಬರ್ 12ರ ಬೆಳಿಗ್ಗೆ 10.45 ನಂತರ ಪ್ರಾರಂಭಿಸಲಾಗುವುದು ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್​ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಸೆಪ್ಟೆಂಬರ್‌ 12 ರಿಂದ ಕೆಂಪೇಗೌಡ ಏರ್‌ಪೋರ್ಟ್‌ನ ಟರ್ಮಿನಲ್​ 2ರಿಂದ ವಿದೇಶಿ ವಿಮಾನಗಳ ಹಾರಾಟ ಆರಂಭ
ಟರ್ಮಿನಲ್​ 2
ಗಂಗಾಧರ​ ಬ. ಸಾಬೋಜಿ
|

Updated on:Aug 31, 2023 | 10:54 PM

Share

ಬೆಂಗಳೂರು, ಆಗಸ್ಟ್​ 31: ತಾಂತ್ರಿಕ ದೋಷ ಹಾಗೂ ಕೆಲ ಸಮಸ್ಯೆಗಳಿಂದ ಇಂದಿನಿಂದ ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋಟ್​ನ (Kempegowda Airport) ಗಾರ್ಡನ್ ಟರ್ಮಿನಲ್​ ಎರಡರಿಂದ ಹಾರಾಟ ಮಾಡಬೇಕಿದ್ದ ವಿದೇಶಿ ವಿಮಾನಗಳ ಹಾರಾಟವನ್ನು ಸೆಪ್ಟೆಂಬರ್ 12, ಬೆಳಿಗ್ಗೆ 10.45 ನಂತರ ಪ್ರಾರಂಭಿಸಲಾಗುವುದು ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್​ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ನಿಯಂತ್ರಕರ ಅಂಗೀಕಾರ, ಕಾರ್ಯಾಚರಣೆಯ ದಕ್ಷತೆ ಹಾಗೂ  ಪ್ರಯಾಣಿಕರ ಅನುಕೂಲತೆ ಸೇರಿದಂತೆ ವಿವಿಧ ಅಂಶಗಳನ್ನು ಎಚ್ಚರಿಕೆಯಿಂದ ಪರೀಕ್ಷಿಸಿ ಮತ್ತು ಪರಿಗಣಿಸಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದೆ.

ವಿಮಾನ ಯಾನ ಸಂಸ್ಥೆಗಳ ಸಹಭಾಗಿತ್ವದೊಂದಿಗೆ ನಮ್ಮ ಪ್ರಯಾಣಿಕರಿಗೆ ಈ ಬದಲಾವಣೆಯನ್ನು ಸುಗಮವಾಗಿಸಲು ನಾವು ಬದ್ಧರಾಗಿದ್ದೇವೆ. ಹೊಸ ಸೌಲಭ್ಯಕ್ಕೆ ಅಂತಾರಾಷ್ಟ್ರೀಯ ಕಾರ್ಯಾಚರಣೆಯ ಅಡಚಣೆರಹಿತ ಸ್ಥಳಾಂತರಕ್ಕೆ  ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ನಿಮ್ಮ ತಾಳ್ಮೆ ಮತ್ತು ಅಚಲ ಬೆಂಬಲ ಪ್ರಶಂಸನೀಯ ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್​ ವಕ್ತಾರರು ಹೇಳಿದ್ದಾರೆ.

ಇದನ್ನೂ ಓದಿ: ತಾಂತ್ರಿಕ ದೋಷ: ಕೆಂಪೇಗೌಡ ಏರ್‌ಪೋರ್ಟ್‌ನ ಟರ್ಮಿನಲ್​ 2ರಿಂದ ವಿದೇಶಿ ವಿಮಾನಗಳ ಹಾರಾಟ ಮುಂದೂಡಿಕೆ

ಇಂದಿನಿಂದ ಟರ್ಮಿನಲ್​ 2ನಿಂದ ವಿದೇಶಿ ಹಾರಾಟಕ್ಕೆ ಕೆಐಎಬಿ ತಂಡ ಮುಹೂರ್ತ ಫಿಕ್ಸ್ ಮಾಡಿತ್ತು. ಆದರೆ ಕೊನೆ ಕ್ಷಣದಲ್ಲಿ ಮುಂದೂಡಿಕೆ ಮಾಡುವುದಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿತ್ತು. ಸದ್ಯ ಸೆಪ್ಟೆಂಬರ್ 12 ರಿಂದ ಟರ್ಮಿನಲ್​ 2 ಕಾರ್ಯಚರಣೆ ಆರಂಭಗೊಳ್ಳಿದೆ ಎಂದು  ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್​ ತಿಳಿಸಿದ್ದು, ಪ್ರಯಾಣಿಕರು ಖುಷ್​ ಆಗಿದ್ದಾರೆ.

ಇದನ್ನೂ ಓದಿ: ಬ್ಯಾಂಕಾಕ್‌ನಿಂದ ಬಂದವನ ಬ್ಯಾಗಲ್ಲಿತ್ತು ಹೆಬ್ಬಾವು, ಮೊಸಳೆ! ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 234 ಪ್ರಾಣಿಗಳ ಜಪ್ತಿ

ಕೆಲ ದಿನಗಳ‌ ಕಾಲ ಅಂದರೆ, ಸೆಪ್ಟೆಂಬರ್ 12 ರ ವರೆಗೆ ಟರ್ಮಿನಲ್ 1 ರಿಂದಲೇ ವಿದೇಶಿ ವಿಮಾನಗಳು ಹಾರಾಟ ನಡೆಸಲಿವೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಆ. 31ರಿಂದ ಟರ್ಮಿನಲ್​ 1ರಿಂದ ದೇಶಿಯ ಮತ್ತು ಟರ್ಮಿನಲ್​ 2ರಿಂದ ವಿದೇಶಿ ವಿಮಾನಗಳ ಹಾರಾಟ ನಡೆಸಬೇಕಿತ್ತು. ಆದರೆ ತಾಂತ್ರಿಕ ದೋಷ ಹಾಗೂ ಕೆಲ ಸಮಸ್ಯೆಗಳಿಂದ ಹಾರಾಟ ಮುಂದೂಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:45 pm, Thu, 31 August 23

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು