AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್‌ 12 ರಿಂದ ಕೆಂಪೇಗೌಡ ಏರ್‌ಪೋರ್ಟ್‌ನ ಟರ್ಮಿನಲ್​ 2ರಿಂದ ವಿದೇಶಿ ವಿಮಾನಗಳ ಹಾರಾಟ ಆರಂಭ

ಇಂದಿನಿಂದ ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋಟ್​ನ ಗಾರ್ಡನ್ ಟರ್ಮಿನಲ್​ ಎರಡರಿಂದ ಹಾರಾಟ ಮಾಡಬೇಕಿದ್ದ ವಿದೇಶಿ ವಿಮಾನಗಳ ಹಾರಾಟವನ್ನು ಸೆಪ್ಟೆಂಬರ್ 12ರ ಬೆಳಿಗ್ಗೆ 10.45 ನಂತರ ಪ್ರಾರಂಭಿಸಲಾಗುವುದು ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್​ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಸೆಪ್ಟೆಂಬರ್‌ 12 ರಿಂದ ಕೆಂಪೇಗೌಡ ಏರ್‌ಪೋರ್ಟ್‌ನ ಟರ್ಮಿನಲ್​ 2ರಿಂದ ವಿದೇಶಿ ವಿಮಾನಗಳ ಹಾರಾಟ ಆರಂಭ
ಟರ್ಮಿನಲ್​ 2
ಗಂಗಾಧರ​ ಬ. ಸಾಬೋಜಿ
|

Updated on:Aug 31, 2023 | 10:54 PM

Share

ಬೆಂಗಳೂರು, ಆಗಸ್ಟ್​ 31: ತಾಂತ್ರಿಕ ದೋಷ ಹಾಗೂ ಕೆಲ ಸಮಸ್ಯೆಗಳಿಂದ ಇಂದಿನಿಂದ ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋಟ್​ನ (Kempegowda Airport) ಗಾರ್ಡನ್ ಟರ್ಮಿನಲ್​ ಎರಡರಿಂದ ಹಾರಾಟ ಮಾಡಬೇಕಿದ್ದ ವಿದೇಶಿ ವಿಮಾನಗಳ ಹಾರಾಟವನ್ನು ಸೆಪ್ಟೆಂಬರ್ 12, ಬೆಳಿಗ್ಗೆ 10.45 ನಂತರ ಪ್ರಾರಂಭಿಸಲಾಗುವುದು ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್​ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ನಿಯಂತ್ರಕರ ಅಂಗೀಕಾರ, ಕಾರ್ಯಾಚರಣೆಯ ದಕ್ಷತೆ ಹಾಗೂ  ಪ್ರಯಾಣಿಕರ ಅನುಕೂಲತೆ ಸೇರಿದಂತೆ ವಿವಿಧ ಅಂಶಗಳನ್ನು ಎಚ್ಚರಿಕೆಯಿಂದ ಪರೀಕ್ಷಿಸಿ ಮತ್ತು ಪರಿಗಣಿಸಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದೆ.

ವಿಮಾನ ಯಾನ ಸಂಸ್ಥೆಗಳ ಸಹಭಾಗಿತ್ವದೊಂದಿಗೆ ನಮ್ಮ ಪ್ರಯಾಣಿಕರಿಗೆ ಈ ಬದಲಾವಣೆಯನ್ನು ಸುಗಮವಾಗಿಸಲು ನಾವು ಬದ್ಧರಾಗಿದ್ದೇವೆ. ಹೊಸ ಸೌಲಭ್ಯಕ್ಕೆ ಅಂತಾರಾಷ್ಟ್ರೀಯ ಕಾರ್ಯಾಚರಣೆಯ ಅಡಚಣೆರಹಿತ ಸ್ಥಳಾಂತರಕ್ಕೆ  ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ನಿಮ್ಮ ತಾಳ್ಮೆ ಮತ್ತು ಅಚಲ ಬೆಂಬಲ ಪ್ರಶಂಸನೀಯ ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್​ ವಕ್ತಾರರು ಹೇಳಿದ್ದಾರೆ.

ಇದನ್ನೂ ಓದಿ: ತಾಂತ್ರಿಕ ದೋಷ: ಕೆಂಪೇಗೌಡ ಏರ್‌ಪೋರ್ಟ್‌ನ ಟರ್ಮಿನಲ್​ 2ರಿಂದ ವಿದೇಶಿ ವಿಮಾನಗಳ ಹಾರಾಟ ಮುಂದೂಡಿಕೆ

ಇಂದಿನಿಂದ ಟರ್ಮಿನಲ್​ 2ನಿಂದ ವಿದೇಶಿ ಹಾರಾಟಕ್ಕೆ ಕೆಐಎಬಿ ತಂಡ ಮುಹೂರ್ತ ಫಿಕ್ಸ್ ಮಾಡಿತ್ತು. ಆದರೆ ಕೊನೆ ಕ್ಷಣದಲ್ಲಿ ಮುಂದೂಡಿಕೆ ಮಾಡುವುದಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿತ್ತು. ಸದ್ಯ ಸೆಪ್ಟೆಂಬರ್ 12 ರಿಂದ ಟರ್ಮಿನಲ್​ 2 ಕಾರ್ಯಚರಣೆ ಆರಂಭಗೊಳ್ಳಿದೆ ಎಂದು  ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್​ ತಿಳಿಸಿದ್ದು, ಪ್ರಯಾಣಿಕರು ಖುಷ್​ ಆಗಿದ್ದಾರೆ.

ಇದನ್ನೂ ಓದಿ: ಬ್ಯಾಂಕಾಕ್‌ನಿಂದ ಬಂದವನ ಬ್ಯಾಗಲ್ಲಿತ್ತು ಹೆಬ್ಬಾವು, ಮೊಸಳೆ! ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 234 ಪ್ರಾಣಿಗಳ ಜಪ್ತಿ

ಕೆಲ ದಿನಗಳ‌ ಕಾಲ ಅಂದರೆ, ಸೆಪ್ಟೆಂಬರ್ 12 ರ ವರೆಗೆ ಟರ್ಮಿನಲ್ 1 ರಿಂದಲೇ ವಿದೇಶಿ ವಿಮಾನಗಳು ಹಾರಾಟ ನಡೆಸಲಿವೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಆ. 31ರಿಂದ ಟರ್ಮಿನಲ್​ 1ರಿಂದ ದೇಶಿಯ ಮತ್ತು ಟರ್ಮಿನಲ್​ 2ರಿಂದ ವಿದೇಶಿ ವಿಮಾನಗಳ ಹಾರಾಟ ನಡೆಸಬೇಕಿತ್ತು. ಆದರೆ ತಾಂತ್ರಿಕ ದೋಷ ಹಾಗೂ ಕೆಲ ಸಮಸ್ಯೆಗಳಿಂದ ಹಾರಾಟ ಮುಂದೂಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:45 pm, Thu, 31 August 23

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್