AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋಡೊ ಯಾತ್ರೆಯಲ್ಲಿ ಕೆಜಿಎಫ್ 2 ಚಿತ್ರಗೀತೆ ದುರ್ಬಳಕೆ: ರಾಹುಲ್ ಗಾಂಧಿ ವಿರುದ್ಧ ಫೋರ್ಜರಿ ಪ್ರಕರಣ ದಾಖಲು

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ ಜೋಡೊ ಯಾತ್ರೆಯಲ್ಲಿ ಕೆಜಿಎಫ್ 2 ಚಿತ್ರಗೀತೆಯನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ.

ಜೋಡೊ ಯಾತ್ರೆಯಲ್ಲಿ ಕೆಜಿಎಫ್ 2 ಚಿತ್ರಗೀತೆ ದುರ್ಬಳಕೆ: ರಾಹುಲ್ ಗಾಂಧಿ ವಿರುದ್ಧ ಫೋರ್ಜರಿ ಪ್ರಕರಣ ದಾಖಲು
ಭಾರತ ಜೋಡೊ ಯಾತ್ರೆಯಲ್ಲಿ ಕೆಜಿಎಫ್ 2 ಚಿತ್ರಗೀತೆಯನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪ
TV9 Web
| Updated By: ವಿವೇಕ ಬಿರಾದಾರ|

Updated on:Nov 04, 2022 | 7:32 PM

Share

ಬೆಂಗಳೂರು: ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ ನಡೆದ ಭಾರತ ಜೋಡೊ ಯಾತ್ರೆಯಲ್ಲಿ (Bharat Jodo yatra) ಕೆಜಿಎಫ್ 2 (KGF 2) ಚಿತ್ರಗೀತೆಯನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ರಾಹುಲ್ ಗಾಂಧಿ ವಿರುದ್ಧ ಫೋರ್ಜರಿ ಪ್ರಕರಣ ದಾಖಲಾಗಿದ್ದು, ಜೈರಾಮ್ ರಮೇಶ್, ಸುಪ್ರಿಯಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಭಾರತ ಜೋಡೊ ಯಾತ್ರೆಯಲ್ಲಿ ಕೆಜಿಎಫ್ 2 ಹಿಂದಿ ಚಿತ್ರಗೀತೆ ಸುಲ್ತಾನ್ ಹಾಡನ್ನು ಬಳಸಿಕೊಳ್ಳಲು ಎಮ್​​. ಆರ್​. ಟಿ ಮ್ಯೂಸಿಕ್ ನಿಂದ ಹಕ್ಕುಸ್ವಾಮ್ಯ ಪಡೆಯದೆ ಬಳಸಿದ್ದಾರೆ. ಹೀಗಾಗಿ ಕಾಪಿರೈಟ್ ಉಲ್ಲಂಘಿಸಿದ ಆರೋಪದಡಿ ಫೋರ್ಜರಿ, ಹಾಡು ದುರ್ಬಳಕೆ, ಐಟಿ ಕಾಯ್ದೆಯಡಿ ಮೊಕದ್ದಮೆ ದಾಖಲಿಸಲಾಗಿದೆ. ಎಮ್​​. ಆರ್​. ಟಿ ಮ್ಯೂಸಿಕ್ ಕೆಜಿಎಫ್ 2 ಹಿಂದಿ ಚಿತ್ರಗೀತೆಗಳ ಹಕ್ಕುಸ್ವಾಮ್ಯ ಹೊಂದಿದೆ. ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೆಲಂಗಾಣದ ಬುಡಕಟ್ಟು ಕಲಾವಿದರ ಜೊತೆ ಸೇರಿ ಡ್ಯಾನ್ಸ್​ ಮಾಡಿದ ರಾಹುಲ್ ಗಾಂಧಿ

ಹೈದರಾಬಾದ್: ಕಳೆದ ವಾರ ಬುಡಕಟ್ಟು ಸಮುದಾಯದೊಂದಿಗೆ ಕೊಮ್ಮು ನೃತ್ಯ ಪ್ರದರ್ಶಿಸಿ ಎಲ್ಲರನ್ನೂ ಅಚ್ಚರಿಗೊಳಿಸಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ  ಬುಧವಾರ ಆಂಧ್ರಪ್ರದೇಶ, ತೆಲಂಗಾಣ ಮತ್ತು ದಕ್ಷಿಣ ಒಡಿಶಾದ ಸಮುದಾಯಗಳ ಸಾಂಪ್ರದಾಯಿಕ ಜಾನಪದ ನೃತ್ಯವಾದ ದಿಮ್ಸಾ ಪ್ರದರ್ಶಿಸಿದ್ದಾರೆ. ಆಂಧ್ರದ ಇತರ ಜಾನಪದ ಕಲಾವಿದರೊಂದಿಗೆರಾಹುಲ್ ಗಾಂಧಿ ಡೋಲು ಬಾರಿಸಿ, ನೃತ್ಯ ಮಾಡಿದ್ದಾರೆ.

ಅಕ್ಟೋಬರ್ 29ರಂದು ಭದ್ರಾಚಲಂನಲ್ಲಿ ಆದಿವಾಸಿಗಳೊಂದಿಗೆ ಕೊಮ್ಮು ನೃತ್ಯದಲ್ಲಿ ಭಾಗವಹಿಸಿದ ರಾಹುಲ್ ಗಾಂಧಿ ಈ ಬಾರಿ ಬುಡಕಟ್ಟು ಸಮುದಾಯದ ಶಿರಸ್ತ್ರಾಣವನ್ನು ಧರಿಸಿರಲಿಲ್ಲ. ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ತೆಲಂಗಾಣದಲ್ಲಿ 9ನೇ ದಿನಕ್ಕೆ ಕಾಲಿಡುತ್ತಿದ್ದಂತೆ ಈ ವಿಡಿಯೋವನ್ನು ಕಾಂಗ್ರೆಸ್ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ.

ಬುಧವಾರ ತೆಲಂಗಾಣದ ರಸ್ತೆಯೊಂದು ಯುವ ಬ್ಯಾಟರ್‌ಗೆ ರಾಹುಲ್ ಗಾಂಧಿ ಬೌಲಿಂಗ್ ಮಾಡಿದ್ದರಿಂದ ಆ ರಸ್ತೆ ಸ್ವಲ್ಪ ಸಮಯದವರೆಗೆ ಕ್ರಿಕೆಟ್ ಪಿಚ್ ಆಗಿ ಮಾರ್ಪಟ್ಟಿತು. ರಾಹುಲ್ ಗಾಂಧಿ ಕ್ರಿಕೆಟ್ ಆಡುತ್ತಿರುವ ವಿಡಿಯೋ ವೈರಲ್ ಆಗಿತ್ತು.

ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಜೊತೆ ಸೇರಿಕೊಂಡು ಇಂದು ಬೆಳಗ್ಗೆಯಿಂದ ರಾಹುಲ್ ಗಾಂಧಿ ತಮ್ಮ ಪಾದಯಾತ್ರೆಯನ್ನು ಪುನರಾರಂಭಿಸಿದ್ದರು. ಭಾರತ್ ಜೋಡೋ ಯಾತ್ರೆಯು ನವೆಂಬರ್ 7ರಂದು ಮಹಾರಾಷ್ಟ್ರವನ್ನು ಪ್ರವೇಶಿಸುವ ಮೊದಲು ತೆಲಂಗಾಣದಲ್ಲಿ ಒಟ್ಟು 375 ಕಿ.ಮೀ ದೂರವನ್ನು ವ್ಯಾಪಿಸಿರುವ ತೆಲಂಗಾಣದ 19 ಅಸೆಂಬ್ಲಿ ಮತ್ತು 7 ಸಂಸದೀಯ ಕ್ಷೇತ್ರಗಳನ್ನು ಒಳಗೊಳ್ಳಲಿದೆ. ಈ ಯಾತ್ರೆಯು ನವೆಂಬರ್ 4ರಂದು ಒಂದು ದಿನದ ವಿರಾಮವನ್ನು ತೆಗೆದುಕೊಳ್ಳುತ್ತದೆ.

ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಬುಧವಾರ ಹೈದರಾಬಾದ್‌ನಲ್ಲಿದ್ದು, ಅಲ್ಲಿ ಬಾಲಿವುಡ್ ನಟಿ ಪೂಜಾ ಭಟ್ ಅವರು ಕಾಂಗ್ರೆಸ್ ನಾಯಕಿಯೊಂದಿಗೆ ಸೇರಿಕೊಂಡು ಸುಮಾರು 10.5 ಕಿ.ಮೀ. ನಡೆದಿದ್ದಾರೆ. ಮಂಗಳವಾರ ಹೈದರಾಬಾದ್‌ನ ಚಾರ್ಮಿನಾರ್‌ನಲ್ಲಿ ರಾಹುಲ್ ಗಾಂಧಿ ರಾಷ್ಟ್ರಧ್ವಜಾರೋಹಣ ಮಾಡಿದರು. ಕಿರುಕುಳ ಆರೋಪದ ನಂತರ 2016 ರಲ್ಲಿ ಆತ್ಮಹತ್ಯೆ ಮಾಡಿಕೊಂಡ ದಲಿತ ವಿದ್ಯಾರ್ಥಿ ರೋಹಿತ್ ವೇಮುಲಾ ಅವರ ತಾಯಿ ರಾಧಿಕಾ ವೇಮುಲಾ ಅವರು ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡರು. ಬುಧವಾರವೂ ರಾಹುಲ್ ಗಾಂಧಿ ಪಟಂಚೇರುವಿನಲ್ಲಿ 5ನೇ ತರಗತಿ ವಿದ್ಯಾರ್ಥಿಯೊಂದಿಗೆ ಕ್ರಿಕೆಟ್ ಆಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:52 pm, Fri, 4 November 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!