AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಹಬ್ಬದ ಸಂಭ್ರಮದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ; ಗಣೇಶ ವೇಷಧಾರಿ ಜತೆ ಮಾತುಕತೆ

ಗಣೇಶ ಹಬ್ಬ ಹಿನ್ನೆಲೆ ಗಣಪತಿ ವೇಷಧರಿಸಿ ಬಾಲಕ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲು ಆಗಮಿಸಿದ್ದಾನೆ. ಗಣೇಶ ವೇಷದಾರಿ ಬಾಲಕನ ಜೊತೆ ಮಾಜಿ ಸಿಎಂ ಕುಮಾರಸ್ವಾಮಿ ಕೆಲ ಕಾಲ ಮಾತನಾಡಿದ್ದಾರೆ.

ಗಣೇಶ ಹಬ್ಬದ ಸಂಭ್ರಮದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ; ಗಣೇಶ ವೇಷಧಾರಿ ಜತೆ ಮಾತುಕತೆ
ಗಣೇಶ ವೇಷದಾರಿ ಬಾಲಕನ ಜೊತೆ ಮಾಜಿ ಸಿಎಂ ಕುಮಾರಸ್ವಾಮಿ
TV9 Web
| Edited By: |

Updated on:Sep 10, 2021 | 9:15 AM

Share

ಬೆಂಗಳೂರು: ನಾಡಿನೆಲ್ಲೇಡೆ ಇಂದು ಗಣೇಶ ಹಬ್ಬವನ್ನು ಆಚರಿಸಲಾಗುತ್ತಿದೆ. ಅದರಂತೆ ಈ ಸಂಭ್ರಮಾಚರಣೆಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಭಾಗಿಯಾಗಿದ್ದಾರೆ. ಬಿಡದಿ ತೋಟದ ಮನೆಯಲ್ಲಿ ಕುಮಾರಸ್ವಾಮಿ ಗಣೇಶ ಹಬ್ಬ ಆಚರಣೆ ಮಾಡುತ್ತಿದ್ದು, ಗಣೇಶ ಹಬ್ಬ(Ganesha Chaturthi 2021) ಹಿನ್ನೆಲೆ ಗಣಪತಿ ವೇಷಧರಿಸಿ ಬಾಲಕ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲು ಆಗಮಿಸಿದ್ದಾನೆ. ಗಣೇಶ ವೇಷಧಾರಿ ಬಾಲಕನ ಜೊತೆ ಮಾಜಿ ಸಿಎಂ ಕುಮಾರಸ್ವಾಮಿ ಕೆಲ ಕಾಲ ಮಾತನಾಡಿದ್ದಾರೆ.

ಗಣೇಶ ಹಬ್ಬದ ಹಿನ್ನಲೆ ಕೆ.ಆರ್ ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಹಬ್ಬಕ್ಕೆ ಹೂವು, ಹಣ್ಣು ಸೇರಿದಂತೆ ಇತರೆ ವಸ್ತುಗಳ ದರ ಏರಿಕೆಯಾಗಿದೆ. ದರ ಏರಿಕೆ‌ ಮಧ್ಯೆಯೂ ಅಗತ್ಯ ವಸ್ತುಗಳ ಖರೀದಿಗೆ ಜನ ಮುಂದಾಗಿದ್ದಾರೆ. ಇಂದು ಕೆ. ಆರ್. ಮಾರುಕಟ್ಟೆಯಲ್ಲಿನ ಹೂವಿನ ಬೆಲೆ ಹೀಗಿವೆ. ಸೇವಂತಿಗೆ (ಒಂದು ಮಾರು)70-90 ರೂ. ಸುಗಂಧರಾಜ ಹಾರ 130-170 ರೂ. ಮಲ್ಲಿಗೆ ಹೂವು (ಮೊಳ) 40-50 ರೂ. ಮಾವಿನ ಸೊಪ್ಪು (1 ಕಟ್ಟು) 20-25 ರೂ. ಬಾಳೆ ಕಂದು‌ ಜೋಡಿ 50-80 ರೂ.

ಹಾಸನ: ಕೊವಿಡ್ ನಿಯಮ ಮರೆತು ಹಬ್ಬದ ಖರೀದಿಗೆ ಮುಗಿಬಿದ್ದ ಜನರು ಹಾಸನದಲ್ಲಿ ಗಣೇಶ ಚತುರ್ಥಿ ಸಡಗರ ಜೋರಾಗಿದ್ದು, ಕೊವಿಡ್ ನಿಯಮ ಮರೆತು ಹಬ್ಬದ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಅಪಾರ ಸಂಖ್ಯೆಯಲ್ಲಿ ಜನರು ಮಾರುಕಟ್ಟೆಯಲ್ಲಿ  ಭಾಗಿಯಾಗಿದ್ದಾರೆ. ಕೊರೊನಾ ನಿಯಮ ಪಾಲಿಸಿ ಹಬ್ಬ ಆಚರಣೆಗೆ ಅನುಮತಿ ನೀಡಿರುವ ಸರ್ಕಾರದ ನಿಯಮವನ್ನು ಗಾಳಿಗೆ ತೂರಲಾಗಿದೆ.

ಬೆಳಗಾವಿಯಲ್ಲಿ ಹೂವು ಖರೀದಿಗೆ ಮುಗಿಬಿದ್ದಿರುವ ಜನ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ನೆಹರು ನಗರದಲ್ಲಿರುವ ಪುಷ್ಪ ಖರೀದಿ ಮಾರುಕಟ್ಟೆಯಲ್ಲಿ ಜನಸಾಗರ ನಿರ್ಮಾಣವಾಗಿದೆ. ದೈಹಿಕ ಅಂತರ ಮರೆತು, ಮಾಸ್ಕ್ ಧರಿಸದೆ ಜನರು ನಿರ್ಲಕ್ಷ್ಯ ತೋರಿದ್ದಾರೆ. ವ್ಯಾಪಾರಸ್ಥರು ಕೂಡ ಕೊವಿಡ್ ನಿಯಮ ಮರೆತು ವಹಿವಾಟು ನಡೆಸುತ್ತಿದ್ದಾರೆ. ಆದರೆ ಮಾರುಕಟ್ಟೆಯತ್ತ ಪೊಲೀಸರು, ಮಹಾನಗರ ಪಾಲಿಕೆ ಸಿಬ್ಬಂದಿಗಳು ಮಾತ್ರ ಭೇಟಿ ನೀಡಿಲ್ಲ.

ಜೆಪಿ ನಗರದ ಸತ್ಯಗಣಪತಿ ದೇವಸ್ಥಾನದಲ್ಲಿ ವಿಶೇಷ ಆಲಂಕಾರ ಹಾಗೂ ಪೂಜೆ ಇವತ್ತು ಗಣೇಶ ಚತುರ್ಥಿಯ ಹಿನ್ನಲೆಯಲ್ಲಿ ಜೆಪಿ ನಗರದ ಸತ್ಯಗಣಪತಿ ದೇವಸ್ಥಾನದಲ್ಲಿ ವಿಶೇಷ ಆಲಂಕಾರ ಹಾಗೂ ಪೂಜೆ ನಡೆಸಲಾಗಿದೆ. ಶ್ರೀಸತ್ಯ ಗಣಪತಿ ದೇವಸ್ಥಾನದಲ್ಲಿ ಮುಸುಕಿನ ಜೋಳ, ಸೊಪ್ಪುಗಳನ್ನು ಹಾಗೂ ಹೂವುಗಳನ್ನು ಬಳಸಿ ಗಣೇಶನಿಗೆ ಅಲಂಕಾರ ಮಾಡಲಾಗಿದೆ. ದೇವರ ದರ್ಶನಕ್ಕೆ ಭಕ್ತ ಸಮೂಹ ಆಗಮಿಸುತ್ತಿದ್ದು, ಭಕ್ತಾಧಿಗಳ ಮನಸೆಳೆಯಲು ದೇವಾಲಯ ಸಜ್ಜಾಗಿದೆ.

ಇದನ್ನೂ ಓದಿ: ಗಣೇಶ ಹಬ್ಬದ ಮಾರ್ಗಸೂಚಿಗೆ ಅಸಮಾಧಾನ; ಬಿಬಿಎಂಪಿ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧಾರ

ಗಣಪತಿಯನ್ನೇ ಪರಬ್ರಹ್ಮ ಎಂದು ಆರಾಧಿಸುವ ಪಂಥ ಗಾಣಪತ್ಯ: ಶ್ರೀನಗರದ ಗಾಣಪತ್ಯರ್ ದೇಗುಲಕ್ಕೂ ಅಫ್ಘಾನಿಸ್ತಾನಕ್ಕೂ ಇದೆ ನಂಟು

Published On - 8:38 am, Fri, 10 September 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!