AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದೃಷ್ಟ ಖುಲಾಯಿಸುತ್ತೆ ಅಂತಾ ಕೃಷ್ಣಯ್ಯ ಶೆಟ್ಟಿ ವಾಸವಿದ್ದ ಬಾಡಿಗೆ ಮನೆಯಲ್ಲಿ ಬಿಎಸ್‌ವೈ ಆಪ್ತ ಉಮೇಶ್ ವಾಸ: ಇಂಟರೆಸ್ಟಿಂಗ್​ ಸ್ಟೋರಿ ಇಲ್ಲಿದೆ!

ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ವಾಸವಿದ್ದ ಮನೆಯಲ್ಲಿಯೇ ಬಿಎಸ್​ವೈ ಪಿಎ ಆಗಿದ್ದ ಉಮೇಶ್ ಕೂಡ ಬಾಡಿಗೆಗಿದ್ದರು. ಇದಕ್ಕೆ ಕಾರಣ ಉಮೇಶ್ ಅವರಲ್ಲಿದ್ದ ಅದೃಷ್ಟ ಕುರಿತಾದ ನಂಬಿಕೆ. ಆದರೆ ಕೃಷ್ಣಯ್ಯ ಶೆಟ್ಟಿ ಅವ್ಯವಹಾರದಲ್ಲಿ ಜೈಲು ಸೇರಿದ್ದರು. ಇದೀಗ ಕಾಕತಾಳೀಯವೆಂಬಂತೆ ಉಮೇಶ್​ಗೂ ಕಂಟಕ ಎದುರಾಗಿದೆ.

ಅದೃಷ್ಟ ಖುಲಾಯಿಸುತ್ತೆ ಅಂತಾ ಕೃಷ್ಣಯ್ಯ ಶೆಟ್ಟಿ ವಾಸವಿದ್ದ ಬಾಡಿಗೆ ಮನೆಯಲ್ಲಿ ಬಿಎಸ್‌ವೈ ಆಪ್ತ ಉಮೇಶ್ ವಾಸ: ಇಂಟರೆಸ್ಟಿಂಗ್​ ಸ್ಟೋರಿ ಇಲ್ಲಿದೆ!
ಉಮೇಶ್, ಎಸ್.ಎನ್. ಕೃಷ್ಣಯ್ಯ ಶೆಟ್ಟಿ
TV9 Web
| Edited By: |

Updated on:Oct 08, 2021 | 9:34 AM

Share

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಉಮೇಶ್ ಅವರ ರಾಜಾಜಿ ನಗರದಲ್ಲಿರುವ ಭಾಷ್ಯಂ ಸರ್ಕಲ್​ನಲ್ಲಿರುವ ಮನೆ ಮೇಲೆ ನಿನ್ನೆ (ಅಕ್ಟೋಬರ್ 7) ಐಟಿ ದಾಳಿ ನಡೆದಿತ್ತು. ಇಂದು ಮುಂಜಾನೆಯವರೆಗೂ ಪರಿಶೀಲನೆ ನಡೆಸಿದ್ದ ಅಧಿಕಾರಿಗಳು ಹಲವು ಕಡತಗಳನ್ನು ವಶಪಡಿಸಿಕೊಂಡು ಮರಳಿದ್ದಾರೆ. ಈ ನಡುವೆ ಉಮೇಶ್ ಕುರಿತ ಒಂದೊಂದೇ ಮಾಹಿತಿಗಳು ಹೊರಬರುತ್ತಿದೆ. ಸ್ವಂತ ಮನೆ ಕಟ್ಟಿಸಿದ್ದರೂ ಕೂಡ, ಅವರು ಭಾಷ್ಯಂ ಸರ್ಕಲ್​ನ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಇದಕ್ಕೆ ಕಾರಣ ಆ ಮನೆಯಿಂದ ಅದೃಷ್ಟ ಖುಲಾಯಿಸುತ್ತದೆ ಎಂಬ ನಂಬಿಕೆ ಅವರಲ್ಲಿತ್ತು.

ಈ ಹಿಂದೆ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಮತ್ತು ಅವರ ಸಹೋದರ ಪ್ರಭಾಕರ್ ಶೆಟ್ಟಿ ವಾಸವಿದ್ದ ಮನೆಯಲ್ಲಿಯೇ ಉಮೇಶ್ ಕೂಡ ಬಾಡಿಗೆಗಿದ್ದರು. ಮನೆಯ ಈಶಾನ್ಯ ಭಾಗದಲ್ಲಿ ಸ್ಟೇರ್ ಕೇಸ್ ಹೊಂದಿರುವುದು ಅದೃಷ್ಟ ತರುವುದೆಂಬ ನಂಬಿಕೆ ಅವರಲ್ಲಿತ್ತು. ಅದೇ ಮನೆಯ ಕೆಳಭಾಗದಲ್ಲಿ ಈ ಹಿಂದೆ ರಿಯಲ್ ಎಸ್ಟೇಟ್ ಕಚೇರಿ ಇತ್ತು. ಕೃಷ್ಣಯ್ಯ ಶೆಟ್ಟಿ ಮತ್ತು ಸೋದರ ಪ್ರಭಾಕರ್ ಶೆಟ್ಟಿ 90 ರ ದಶಕದಲ್ಲಿ ಕಾಮಧೇನು ಎಂಟರ್ ಪ್ರೈಸಸ್ ರಿಯಲ್ ಎಸ್ಟೇಟ್ ನಡೆಸುತ್ತಿದ್ದರು.

ಆದರೆ ಆ ಮನೆ ಅದೃಷ್ಟ ತಂದಷ್ಟೇ ವೇಗವಾಗಿ ದುರಾದೃಷ್ಟ ತಂದೊಡ್ಡಿತ್ತು. ಕೃಷ್ಣಯ್ಯ ಶೆಟ್ಟಿ ಕರ್ನಾಟಕ ರಾಜ್ಯ ಗೃಹ‌ ಮಂಡಳಿ ಅವ್ಯವಹಾರದಲ್ಲಿ ಜೈಲು ಸೇರಿದ್ದರು. ಕಾಕತಾಳೀಯವೆಂಬಂತೆ ಇದೀಗ ಬಿಎಸ್​​ವೈ ಪಿಎ ಉಮೇಶ್​ಗೂ ಸಂಕಷ್ಟ ಎದುರಾಗಿದೆ. ಕೆಎಸ್​ಆರ್​ಟಿಸಿ ಕಂಡಕ್ಟರ್ ಮತ್ತು ಡ್ರೈವರ್ ಆಗಿದ್ದ ಉಮೇಶ್, ಮಾಜಿ ಸಿಎಂ ಬಿಎಸ್​​ವೈ ಪಿಎ ಆದ ಬಳಿಕ ಕೋಟ್ಯಂತರ ಮೌಲ್ಯದ ಆಸ್ತಿ-ಪಾಸ್ತಿ ಒಡೆಯರಾಗಿದ್ದಾರೆ. ಇದೇ ಕಾರಣಕ್ಕೆ ಹಾಗೂ ನೀರಾವರಿ ಇಲಾಖೆಯಲ್ಲಿನ ಟೆಂಡರ್ ಕುರಿತಾದ ಕಾರಣಗಳಿಂದ ಅವರ ಮನೆಯ ಮೇಲೆ ಐಟಿ ದಾಳಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬಿಎಸ್‌ವೈ ಆಪ್ತ ಉಮೇಶ್ ಮನೆ ಮೇಲೆ ಐಟಿ ದಾಳಿ ಅಂತ್ಯ: ಬೆಂಗಳೂರಿನ ರಾಜಾಜಿ ನಗರದಲ್ಲಿರುವ ಭಾಷ್ಯಂ ಸರ್ಕಲ್‌ನಲ್ಲಿರುವ ಉಮೇಶ್ ಮನೆಯ ಮೇಲಿನ ಐಟಿ ದಾಳಿ ಅಂತ್ಯವಾಗಿದೆ. ನಿನ್ನೆ ಬೆಳಗ್ಗೆ 6ರಿಂದ ಇಂದು ಬೆಳಗ್ಗೆ 6ರವರೆಗೆ ನಡೆದ ಸತತ 24 ಗಂಟೆಗಳ ಐಟಿ ಅಧಿಕಾರಿಗಳ ಕಾರ್ಯಾಚರಣೆ ಮುಗಿದಿದ್ದು, ದಾಖಲಾತಿಗಳು, ಬ್ಯಾಂಕ್ ಪಾಸ್ ಬುಕ್​ಗಳು,ಪೆನ್​​ಡ್ರೈವ್, ಹಾರ್ಡ್ ಡಿಸ್ಕ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಇದರೊಂದಿಗೆ ನೀರಾವರಿ ಇಲಾಖೆಗೆ ಸಂಬಂಧಪಟ್ಟ ಕೆಲ ಕಡತಗಳನ್ನೂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಇಂದು ಅಥವಾ ನಾಳೆ ವಶಕ್ಕೆ ಪಡೆದ ಸಂಪೂರ್ಣ ದಾಖಲೆಗಳ ಪರಿಶೀಲನೆ ನಡೆಯಲಿದ್ದು, ಹಣ ವರ್ಗಾವಣೆ ಸೇರಿದಂತೆ ಮತ್ತಿತರ ಮಾಹಿತಿಯನ್ನು ಐಟಿ ಅಧಿಕಾರಿಗಳು ಸಂಗ್ರಹಿಸಲಿದ್ದಾರೆ. ಆ ಬಳಿಕ ಸ್ಪಷ್ಟೀಕರಣ ಕೇಳಿ ವಿಚಾರಣೆಗೆ ಹಾಜರಾಗುವಂತೆ ಉಮೇಶ್​ಗೆ ಐಟಿ ನೋಟಿಸ್ ನೀಡುವ ಸಾಧ್ಯತೆ ಇದೆ.

ದಾಳಿ ಪೂರ್ಣವಾದರೂ ಮನೆಯಿಂದ ಹೊರಬರದ ಉಮೇಶ್: ಬಿಎಸ್‌ವೈ ಆಪ್ತ ಉಮೇಶ್ ಮನೆ ಮೇಲೆ ಐಟಿ ದಾಳಿ ಮುಕ್ತಾಯಗೊಂಡಿದೆ. ಬೆಂಗಳೂರಿನ ರಾಜಾಜಿ ನಗರದ ಭಾಷ್ಯಂ ಸರ್ಕಲ್‌ನಲ್ಲಿರುವ ಉಮೇಶ್ ಮನೆಯ ಮೇಲೆ ನಿನ್ನೆ ಮುಂಜಾನೆ ಆರು ಗಂಟೆಯಿಂದ ಇಂದು ಮುಂಜಾನೆ 6 ಗಂಟೆಯವರೆಗೆ ಪರಿಶೀಲನೆ ನಡೆಸಲಾಗಿತ್ತು. ಪರಿಶೀಲನೆ ಮುಗಿಸಿ ಅಧಿಕಾರಿಗಳು ತೆರಳಿದ್ದರೂ ಕೂಡ, ಈವರೆಗೂ ಎಂ.ಆರ್. ಉಮೇಶ್ ಮನೆಯಿಂದ ಹೊರಬಂದಿಲ್ಲ.

ಇದನ್ನೂ ಓದಿ:

ಐಟಿ ದಾಳಿ ಹಿನ್ನೆಲೆ ಸಿಎಂ ಕಚೇರಿ ಡ್ಯೂಟಿಯಿಂದ ಬಿಎಸ್‌ವೈ ಆಪ್ತ ಉಮೇಶ್​ಗೆ ಗೇಟ್​ ಪಾಸ್​ ನೀಡಿದ ಸಿಎಂ ಬೊಮ್ಮಾಯಿ

ರಾಹುಲ್ ಎಂಟರ್​ಪ್ರೈಸಸ್, ಉಮೇಶ್ ಮನೆ ಮೇಲಿನ ಐಟಿ ದಾಳಿ ಅಂತ್ಯ; ಹಲವು ಕಡತಗಳನ್ನು ವಶಪಡಿಸಿಕೊಂಡ ಅಧಿಕಾರಿಗಳು

Published On - 9:04 am, Fri, 8 October 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ