AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ನೀರಿಗಾಗಿ ಕರ್ನಾಟಕ ಬಂದ್​; ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಹೇಳಿದ್ದಿಷ್ಟು

‘ಕಾವೇರಿ ವಿಚಾರದಲ್ಲಿ ಯಾರು ರಾಜಕೀಯ ಮಾಡಬಾರದು. ತಮಿಳುನಾಡಿನಲ್ಲಿ ಈಗಾಗಲೇ ಸಾಕಷ್ಟು ಮಳೆಯಾಗಿದೆ. ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದೆ. ಆದರೂ ನೀರಿಗಾಗಿ ಖ್ಯಾತೆ ನಡೆಯುತ್ತಿದೆ. ಸರ್ಕಾರ ಯಾವುದೇ ರೀತಿ ರಾಜ್ಯದ ಜನರ ಪರವಾಗಿ ನಿಲುವು ತೆಗೆದುಕೊಳ್ಳುತ್ತಿಲ್ಲ. ಹೀಗಾಗಿ ಹೋರಾಟ ಅನಿವಾರ್ಯ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಕಾವೇರಿ ನೀರಿಗಾಗಿ ಕರ್ನಾಟಕ ಬಂದ್​; ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಹೇಳಿದ್ದಿಷ್ಟು
ಹೆಚ್​ಡಿ ಕುಮಾರಸ್ವಾಮಿ
Sunil MH
| Edited By: |

Updated on:Sep 29, 2023 | 9:00 AM

Share

ಬೆಂಗಳೂರು, ಸೆ.29: ಕಾವೇರಿಗಾಗಿ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು,ಇಂದು ಕರ್ನಾಟಕ ಬಂದ್​(Karnataka Bandh)ಗೆ ಕರೆ ನೀಡಲಾಗಿದೆ. ಈ ವಿಚಾರವಾಗಿ  ಮಾತನಾಡಿದ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ (HD Kumaraswamy) ಅವರು ‘ಈಗಿನ ಪರಿಸ್ಥಿತಿಯಲ್ಲಿ ಕಾವೇರಿ ನೀರಿಗಾಗಿ ಹೋರಾಟ ಮಾಡುವುದು ಅನಿವಾರ್ಯವಾಗಿದೆ.  ‘ಕರ್ನಾಟಕ ಬಂದ್​ಗೆ ನನ್ನ ಸಂಪೂರ್ಣ ಬೆಂಬಲವಿದೆ. ಜೆಡಿಎಸ್ ಪಕ್ಷದಿಂದ ನೈತಿಕ ಬೆಂಬಲ ಘೋಷಣೆ ಮಾಡಿದ್ದೇವೆ.  ಸರ್ಕಾರದ ನಡವಳಿಕೆಯನ್ನು ನೋಡಿದರೆ ಒಲೈಕೆ ರಾಜಕಾರಣ ಮಾಡುತ್ತಿದ್ದಾರೆ ಎಂದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ  ಮಾತನಾಡಿ ‘ಕಾವೇರಿ ವಿಚಾರದಲ್ಲಿ ಯಾರು ರಾಜಕೀಯ ಮಾಡಬಾರದು. ತಮಿಳುನಾಡಿನಲ್ಲಿ ಈಗಾಗಲೇ ಸಾಕಷ್ಟು ಮಳೆಯಾಗಿದೆ. ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದೆ. ಆದರೂ ನೀರಿಗಾಗಿ ಖ್ಯಾತೆ ನಡೆಯುತ್ತಿದೆ. ಸರ್ಕಾರ ಯಾವುದೇ ರೀತಿ ರಾಜ್ಯದ ಜನರ ಪರವಾಗಿ ನಿಲುವು ತೆಗೆದುಕೊಳ್ಳುತ್ತಿಲ್ಲ. ಹೀಗಾಗಿ ಹೋರಾಟ ಅನಿವಾರ್ಯವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿಯವರು ಕಿಡಿಕಾರಿದರು.

ಇದನ್ನೂ ಓದಿ: ಸೆಪ್ಟೆಂಬರ್ 29 ರಂದು ಕರ್ನಾಟಕ ಬಂದ್ ಹಿನ್ನೆಲೆ ಕಾನೂನು ವಿಶ್ವವಿದ್ಯಾಲಯದ ಪರೀಕ್ಷೆ ಮುಂದೂಡಿಕೆ

ಇನ್ನು ಕರ್ನಾಟಕ ಬಂದ್​ ವಿಚಾರವಾಗಿ  ಬಿಎಸ್ ಯಡಿಯೂರಪ್ಪ ಅವರು ಮಾತನಾಡಿದ್ದು, ‘ಎಲ್ಲರೂ ಸಹ ಬಂದ್​ಗೆ ಸಹಕಾರ ಕೊಡಬೇಕು. ಇದರಿಂದ ಬಂದ್ ಯಶಸ್ವಿಯಾಗುತ್ತೆ. ನಾನು ಅಸ್ಸಾಂಗೆ ಹೊರಡುತ್ತಿದ್ದೇನೆ. ಬಂದ್ ಯಶಸ್ವಿಯಾಗುವ ವಿಶ್ವಾಸ ಇದೆ. ಇನ್ನು ಪ್ರತಿಭಟನಾಕಾರರಿಗೆ ಯಾವುದೇ ಗೊಂದಲ ಇಲ್ಲದೆ ಯಶಸ್ವಿಗೊಳಿಸಲು ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಇನ್ನು ಡಾಲರ್ಸ್ ಕಾಲೋನಿಯ ದವಳಗಿರಿ ನಿವಾಸದಿಂದ ಹೊರಟ ಬಿ.ಎಸ್ ಯಡಿಯೂರಪ್ಪ ಅವರು ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಅಸ್ಸಾಂಗೆ ಪ್ರಯಾಣ ಮಾಡಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:58 am, Fri, 29 September 23

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?