AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jayanagar Shopping Complex: ಶಾಸಕ ರಾಮಮೂರ್ತಿಗೆ ಮಾಜಿ ಕಾರ್ಪೊರೇಟರ್ ತಿರುಗೇಟು, ಮಾನನಷ್ಟ ಮೊಕದ್ದಮೆ ಕೇಸ್ ಎಚ್ಚರಿಕೆ

ಜಯನಗರ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿ ಭೈರಸಂದ್ರ ಮಾಜಿ ಕಾರ್ಪೋರೇಟರ್ ನಾಗರಾಜು ಅವರು ಹಾಲಿ ಶಾಸಕ ರಾಮಮೂರ್ತಿಗೆ ತಿರುಗೇಟು ನೀಡಿದ್ದಾರೆ. ಕಾನೂನು ಬದ್ದವಾಗಿ ಮಳಿಗೆಗಳ ಹಂಚಿಕೆಯಾಗಿದೆ. ಶಾಸಕ ರಾಮಮೂರ್ತಿ ಸೇಡಿನ ರಾಜಕಾರಣ ಮಾಡ್ತಿದ್ದಾರೆ ಎಂದಿದ್ದಾರೆ.

Jayanagar Shopping Complex: ಶಾಸಕ ರಾಮಮೂರ್ತಿಗೆ ಮಾಜಿ ಕಾರ್ಪೊರೇಟರ್ ತಿರುಗೇಟು, ಮಾನನಷ್ಟ ಮೊಕದ್ದಮೆ ಕೇಸ್ ಎಚ್ಚರಿಕೆ
ಜಯನಗರ ಶಾಸಕ ರಾಮಮೂರ್ತಿ, ಭೈರಸಂದ್ರ ಮಾಜಿ ಪಾಲಿಕೆ ಸದಸ್ಯ ಎನ್ ನಾಗರಾಜ್
ಆಯೇಷಾ ಬಾನು
ಆಯೇಷಾ ಬಾನು|

Updated on: May 31, 2023 | 12:42 PM

Share

ಬೆಂಗಳೂರು: ಬಿಬಿಎಂಪಿ(BBMP) ಹಾಗೂ ಬಿಡಿಎ(BDA) ಸಹಭಾಗಿತ್ವದಲ್ಲಿ ನಿರ್ಮಾಣ ಮಾಡಿರುವ ಜಯನಗರ ವಾಣಿಜ್ಯ ಕಾಂಪ್ಲೆಕ್ಸ್ ನಲ್ಲಿ(Jayanagar Shopping Complex) ಹೆಚ್ಚುವರಿಯಾಗಿ ಮಳಿಗೆ ನಿರ್ಮಿಸಿ, ಪ್ರಭಾವಿಗಳ ಸಂಬಂಧಿಕರಿಗೆ ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ. ಶಾಂಪಿಗ್ ಕಾಂಪ್ಲೇಕ್ಸ್ ಹೆಸರಿನಲ್ಲಿ ಕೋಟಿ ಕೋಟಿ ಹಣವನ್ನ ಪಾಲಿಕೆ ಅಧಿಕಾರಿಗಳು ಸೇರಿದಂತೆ ಅನೇಕರ ಪ್ರಭಾವಿಗಳು ಲೂಟಿ ಮಾಡಿದ್ದಾರೆ ಎಂದು ಜಯನಗರ ಕ್ಷೇತ್ರದ ನೂತನ ಶಾಸಕ ಸಿಕೆ ರಾಮಮೂರ್ತಿ ಆರೋಪ ಮಾಡಿದ್ದು ಭೈರಸಂದ್ರ ಮಾಜಿ ಪಾಲಿಕೆ ಸದಸ್ಯ ಎನ್ ನಾಗರಾಜ್ ತಿರುಗೇಟು ಕೊಟ್ಟಿದ್ದಾರೆ.

ಜಯನಗರ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿ ಭೈರಸಂದ್ರ ಮಾಜಿ ಕಾರ್ಪೋರೇಟರ್ ನಾಗರಾಜು ಅವರು ಹಾಲಿ ಶಾಸಕ ರಾಮಮೂರ್ತಿಗೆ ತಿರುಗೇಟು ನೀಡಿದ್ದಾರೆ. ಕಾನೂನು ಬದ್ದವಾಗಿ ಮಳಿಗೆಗಳ ಹಂಚಿಕೆಯಾಗಿದೆ. ಶಾಸಕ ರಾಮಮೂರ್ತಿ ಸೇಡಿನ ರಾಜಕಾರಣ ಮಾಡ್ತಿದ್ದಾರೆ. ಕಾಂಪ್ಲೆಕ್ಸ್ ಹೊರಭಾಗದ ಫುಟ್‌ಪಾತ್‌ನಲ್ಲಿರೋ ವ್ಯಾಪಾರಿಗಳ ಬಳಿ ರೋಲ್‌ಕಾಲ್ ಮಾಡಲು ಮುಂದಾಗಿದ್ದಾರೆ. ಕೂಡಲೇ ತೆರವು ಮಾಡುವಂತೆ ಸೂಚಿಸಿ ಖುದ್ದಾಗಿ ಬಂದು ಕಾಣಲು ಹೇಳಿದ್ದಾರೆ. ತಿಂಗಳ ಮಾಮುಲಿ ಫಿಕ್ಸ್ ಮಾಡಲು ಹೊರಟಿದ್ದಾರೆ. ತನ್ನ ವಿರುದ್ಧ ಆರೋಪಕ್ಕೆ ಮಾನನಷ್ಟ ಮೊಕದ್ದಮೆ ಹೂಡೋದಾಗಿ ಭೈರಸಂದ್ರ ನಾಗರಾಜ್ ತಿರಗೇಟು ನೀಡಿದ್ದಾರೆ.

ಇದನ್ನೂ ಓದಿ: ಜಯನಗರ ಶಾಪಿಂಗ್ ಕಾಂಪ್ಲೆಕ್ಸ್ ಹೆಸರಿನಲ್ಲಿ ಕೋಟಿ-ಕೋಟಿ ಹಣ ಲೂಟಿ ಆರೋಪ: ಮಾಜಿ ಶಾಸಕಿ ವಿರುದ್ಧ ದೂರು ದಾಖಲಿಸಲು ಮುಂದಾದ ಹಾಲಿ ಶಾಸಕ

ಬೆಂಗಳೂರು ಜಯನಗರ ವಾಣಿಜ್ಯ ಸಂಕೀರ್ಣದಲ್ಲಿ ನೂರಾರು ಅಕ್ರಮ ಮಳಿಗೆಗಳನ್ನು ನಿರ್ಮಿಸಿ, ಕಾನೂನು ಬಾಹಿರವಾಗಿ ಹಂಚಿಕೆ ಮಾಡಿ ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರ ನಡೆಸಲಾಗಿದೆ. ಜಯನಗರ ನೂತನ ಶಾಂಪಿಗ್ ಕಾಂಪ್ಲೇಕ್ಸ್ ನಲ್ಲಿ 362 ಮಳಿಗೆ ನಿರ್ಮಾಣ ಮಾಡಲಾಗಿದ 362 ಮಳಿಗೆಗಳಲ್ಲಿ 30 ರಿಂದ 35 ಮಳಿಗೆಗಳನ್ನ ಕಾನೂನು ಬಾಹಿರವಾಗಿ ಮಾರಟ ಮಾಡಿದ್ದಾರೆ. ಒಂದು ಮಳಿಗೆಗೆ ಕನಿಷ್ಠ 40 ರಿಂದ 50 ಲಕ್ಷ ಹಣ ಸೂಲಿಗೆ ಮಾಡಲಾಗಿದೆ. ಕಾನೂನು ಉಲ್ಲಂಘಿಸಿ ಮಳಿಗೆಗಳನ್ನ ನಿರ್ಮಿಸಿ ಹಂಚಿಕೆ ಮಾಡಿದ್ದಾರೆ ಅಂತಾ ಶಾಸಕ ರಾಮಮೂರ್ತಿ ಆರೋಪಿಸಿದ್ದು ಆಯುಕ್ತರಿಗೆ ಹಾಗೂ ಲೋಕಾಯುಕ್ತರಿಗೆ ದೂರು ಸಲ್ಲಿಕೆಗೆ ಮುಂದಾಗಿದ್ದರು. ಸದ್ಯ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಭೈರಸಂದ್ರ ಮಾಜಿ ಕಾರ್ಪೋರೇಟರ್ ನಾಗರಾಜ್ ತಿರುಗೇಟು ಕೊಟ್ಟಿದ್ದಾರೆ. ಈ ಆರೋಪವು ಸುಳ್ಳಾಗಿದ್ದು ನೂತನ ಶಾಸಕ ರಾಮಮೂರ್ತಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡೋದಾಗಿ ಎಚ್ಚರಿಕೆ ಕೊಟ್ಟಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು