Kasturi Rangan: ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್​ಗೆ ಲಘು ಹೃದಯಾಘಾತ

ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್​ ಅವರಿಗೆ ಕೊಲಂಬೊದಲ್ಲಿ ಇಂದು ಲಘು ಹೃದಯಾಘಾತ ಸಂಭವಿಸಿದೆ. ಸದ್ಯ ಕಸ್ತೂರಿ ರಂಗನ್ ಅವರನ್ನು ಏರ್​​ಲಿಫ್ಟ್ ಕೊಲಂಬೊದಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ.

Kasturi Rangan: ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್​ಗೆ ಲಘು ಹೃದಯಾಘಾತ
ಕಸ್ತೂರಿ ರಂಗನ್
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Jul 10, 2023 | 5:20 PM

ಬೆಂಗಳೂರು: ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ (Kasturi Rangan) ಅವರಿಗೆ ಕೊಲಂಬೊದಲ್ಲಿ ಇಂದು ಲಘು ಹೃದಯಾಘಾತ ಸಂಭವಿಸಿದೆ. ಸದ್ಯ ಕಸ್ತೂರಿ ರಂಗನ್ ಅವರನ್ನು ಏರ್​​ಲಿಫ್ಟ್ ಮೂಲಕ ಕೊಲಂಬೊದಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ. ಸಂಜೆ 5.30ಕ್ಕೆ HAL ಏರ್​ಪೋರ್ಟ್​ಗೆ ಆಗಮಿಸಲಿದ್ದು, ಝೀರೋ ಟ್ರಾಫಿಕ್ ಮೂಲಕ ನಾರಾಯಣ ಹೃದಯಾಲಯಕ್ಕೆ ಆಗಮಿಸಲಿದ್ದಾರೆ. ಶ್ರೀಲಂಕಾಕ್ಕೆ ತೆರಳಿದ್ದ ಸಮಯದಲ್ಲಿ ಕಸ್ತೂರಿ ರಂಗನ್ ಅವರಿಗೆ ಹೃದಯಾಘಾತ ಕಾಣಿಸಿಕೊಂಡಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗುತ್ತಿದೆ. ಖ್ಯಾತ ಹೃದ್ರೋಗ ತಜ್ಞ ಡಾ. ದೇವಿ ಶೆಟ್ಟಿ ಅವರು ಚಿಕಿತ್ಸೆ ನೀಡಲಿದ್ದಾರೆ. ಈ ಕುರಿತಾಗಿ ಡಿಸಿಎಂ ಡಿಕೆ ಶಿವಕುಮಾರ್​ ಖಚಿತಪಡಿಸಿದ್ದು, ಕಸ್ತೂರಿರಂಗನ್ ಅವರ ಆರೋಗ್ಯ ಮತ್ತು ಚಿಕಿತ್ಸೆಯ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೋಡಿಕೊಳ್ಳುತ್ತವೆ ಎಂದಿದ್ದಾರೆ.

ಇದನ್ನೂ ಓದಿ: ಅನ್ನಭಾಗ್ಯ ಯೋಜನೆ ಜಾರಿಯಾಗಿ 10 ವರ್ಷ ಪೂರೈಕೆ: ಟ್ವೀಟ್​ ಮೂಲಕ ಸಂತಸ ವ್ಯಕ್ತಪಡಿಸಿದ ಸಿಎಂ ಸಿದ್ಧರಾಮಯ್ಯ

ಭಾರತ ಸರ್ಕಾರ ನೀಡುವ ಅತ್ಯುನ್ನತ ನಾಗರಿಕ ಪುರಸ್ಕಾರಗಳಾದ ಪ್ರತಿಷ್ಠಿತ ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮ ವಿಭೂಷಣ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ. ಕಸ್ತೂರಿ ರಂಗನ್ ಅವರು ರಾಜಸ್ಥಾನದ ಕೇಂದ್ರೀಯ ವಿಶ್ವವಿದ್ಯಾಲಯ ಮತ್ತು ಎನ್ಐಐಟಿ ವಿಶ್ವವಿದ್ಯಾಲಯಗಳಲ್ಲಿ ಮಾಜಿ ಕುಲಪತಿಯಾಗಿದ್ದರು. ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಮಾಜಿ ಕುಲಪತಿಯೂ ಹೌದು. ಅವರು ಕರ್ನಾಟಕ ಜ್ಞಾನ ಆಯೋಗದ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ತಮ್ಮ ಗಮನಾರ್ಹ ವೃತ್ತಿಜೀವನದಲ್ಲಿ ಅವರು 2003 ರಿಂದ 2009 ರವರೆಗೆ ರಾಜ್ಯಸಭೆಯ ವಿಶಿಷ್ಟ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಇದಲ್ಲದೆ, ಅವರು ಸದ್ಯ ಭಾರತದ ಯೋಜನಾ ಆಯೋಗದ ಸದಸ್ಯರಾಗಿ ಮಹತ್ವದ ಸ್ಥಾನವನ್ನು ಅಲಂಕರಿಸಿದ್ದಾರೆ.

ಇದನ್ನೂ ಓದಿ: Tomato: ಈ ಸೀಸನ್​ನ ಟೊಮೆಟೋ ಕಥೆ; ಹಿಮಾಚಲ ದುರ್ಗತಿ, ಇಡೀ ಭಾರತಕ್ಕೀಗ ಬೆಂಗಳೂರೇ ಗತಿ

ಏಪ್ರಿಲ್ 2004 ರಿಂದ 2009 ರವರೆಗೆ ಬೆಂಗಳೂರಿನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ನಲ್ಲಿ ನಿರ್ದೇಶಕರಾಗಿದ್ದರು. ಪ್ರಸ್ತುತ, ಅವರು ಹೊಸ ಶಿಕ್ಷಣ ನೀತಿ ಕರಡು ಸಮಿತಿಯ ಅಧ್ಯಕ್ಷರಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:01 pm, Mon, 10 July 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ