AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಚಿವ ಹಾಲಪ್ಪ ಆಚಾರ್ ಗನ್​ಮ್ಯಾನ್​ನಿಂದ ಲಕ್ಷಾಂತರ ರೂ. ವಂಚನೆ, ಪ್ರಕರಣ ದಾಖಲು

ಟೆಂಡರ್ ಕೊಡಿಸುತ್ತೇನೆ ಎಂದು ಹೇಳಿ ಹಣ ಪಡೆದು ವ್ಯಕ್ತಿಯೊಬ್ಬರಿಗೆ ಮಾಜಿ ಸಚಿವ ಹಾಲಪ್ಪ ಆಚಾರ್ ಅವರ ಗನ್ ಮ್ಯಾನ್​ ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 30 ಕೋಟಿ ವೆಚ್ಚದ ಟೆಂಡರ್​ಗೆ 12 ಪರ್ಸೆಂಟ್ ಕಮಿಷನ್ ಕೇಳಿದ್ದ ಗನ್​ಮ್ಯಾನ್, ಅಡ್ವಾನ್ಸ್ ಆಗಿ 10 ಲಕ್ಷ ರೂ. ಪಡೆದುಕೊಂಡಿದ್ದಾಗಿ ಆರೋಪಿಸಲಾಗಿದೆ.

ಮಾಜಿ ಸಚಿವ ಹಾಲಪ್ಪ ಆಚಾರ್ ಗನ್​ಮ್ಯಾನ್​ನಿಂದ ಲಕ್ಷಾಂತರ ರೂ. ವಂಚನೆ, ಪ್ರಕರಣ ದಾಖಲು
ವಂಚನೆ ಆರೋಪ ಸಂಬಂಧ ಮಾಜಿ ಸಚಿವ ಹಾಲಪ್ಪ ಆಚಾರ್ ಅವರ ಗನ್​ಮ್ಯಾನ್ ವಿರುದ್ಧ ಎಫ್​ಐಆರ್ ದಾಖಲು
ರಾಚಪ್ಪಾಜಿ ನಾಯ್ಕ್
| Edited By: |

Updated on:Sep 02, 2023 | 10:16 AM

Share

ಬೆಂಗಳೂರು, ಸೆ.2: ಮಾಜಿ ಸಚಿವ ಹಾಲಪ್ಪ ಆಚಾರ್ (Halappa Achar) ಗನ್​ಮ್ಯಾನ್​ನಿಂದ ಲಕ್ಷಾಂತರ ರೂಪಾಯಿ ವಂಚಿಸಿದ ಆರೋಪ ಸಂಬಂಧ ನಗರದ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಾಯಕೊಂಡ ಗ್ರಾ.ಪಂ. ಟೆಂಡರ್ ಕೊಡಿಸುತ್ತೇನೆ ಅಂತಾ ನಂಬಿಸಿ 30 ಕೋಟಿ ವೆಚ್ಚದ ಟೆಂಡರ್​ಗೆ 12 ಪರ್ಸೆಂಟ್ ಕಮಿಷನ್ ಕೇಳಿದ್ದ ಗನ್ ಮ್ಯಾನ್ ಅಡ್ವಾನ್ಸ್ 10 ಲಕ್ಷ ರೂ. ಪಡೆದುಕೊಂಡು ವಂಚಿಸಿದ್ದಾಗಿ ದೂರು ದಾಖಲಿಸಲಾಗಿದೆ.

ಹಾಲಪ್ಪ ಆಚಾರ್ ಗನ್​ಮ್ಯಾನ್​ ರಾಘವೇಂದ್ರ ಎಂಬವರು ಮಾಯಕೊಂಡ ಗ್ರಾಮ ಪಂಚಾಯತ್ ಟೆಂಡರ್ ಕೊಡಿಸುತ್ತೇನೆ ಅಂತಾ ಹೇಳಿ ಹೆಚ್.ರಾಜು ನಾಯ್ಕ್ ಅವರಿಗೆ ನಂಬಿಸಿದ್ದಾರೆ. ಅಲ್ಲದೆ, 30 ಕೋಟಿ ವೆಚ್ಚದ ಟೆಂಡರ್​ಗೆ 12 ಪರ್ಸೆಂಟ್ ಕಮಿಷನ್ ಕೇಳಿದ್ದ ರಾಘವೇಂದ್ರ, ರಾಜು ನಾಯ್ಕ್ ಅವರಿಂದ ಅಡ್ವಾನ್ಸ್ ಆಗಿ 10 ಲಕ್ಷ ರೂಪಾಯಿ ಪಡೆದುಕೊಂಡಿದ್ದರು.

ಇದನ್ನೂ ಓದಿ: ಬ್ಯಾಂಕ್ ವಂಚನೆ ಪ್ರಕರಣ: ಜಾರಿ ನಿರ್ದೇಶನಾಲಯದಿಂದ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಬಂಧನ

ಬಳಿಕ ಟೆಂಡರ್ ಕೊಡಿಸದೆ ಸತಾಯಿಸ್ತಿದ್ದ ಹಾಲಪ್ಪ ಆಚಾರ್ ಗನ್​ಮ್ಯಾನ್ ರಾಘವೇಂದ್ರ, ಹಣ ವಾಪಸ್ ಕೇಳಿದ್ದಕ್ಕೆ ಕೇವಲ 4 ಲಕ್ಷ ಅಷ್ಟೇ ನೀಡಿದ್ದಾರೆ. ಇನ್ನುಳಿದ 6 ಲಕ್ಷ ಹಣ ನೀಡದೇ ವಂಚಿಸಿರುವ ಗನ್​ಮ್ಯಾನ್ ರಾಘವೇಂದ್ರ ವಿರುದ್ಧ ರಾಜು ನಾಯ್ಕ್ ಅವರು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಎಫ್​ಐಆರ್ ದಾಲಿಸಿಕೊಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:15 am, Sat, 2 September 23

Follow Us
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ