AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಚಿವ ಹಾಲಪ್ಪ ಆಚಾರ್ ಗನ್​ಮ್ಯಾನ್​ನಿಂದ ಲಕ್ಷಾಂತರ ರೂ. ವಂಚನೆ, ಪ್ರಕರಣ ದಾಖಲು

ಟೆಂಡರ್ ಕೊಡಿಸುತ್ತೇನೆ ಎಂದು ಹೇಳಿ ಹಣ ಪಡೆದು ವ್ಯಕ್ತಿಯೊಬ್ಬರಿಗೆ ಮಾಜಿ ಸಚಿವ ಹಾಲಪ್ಪ ಆಚಾರ್ ಅವರ ಗನ್ ಮ್ಯಾನ್​ ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 30 ಕೋಟಿ ವೆಚ್ಚದ ಟೆಂಡರ್​ಗೆ 12 ಪರ್ಸೆಂಟ್ ಕಮಿಷನ್ ಕೇಳಿದ್ದ ಗನ್​ಮ್ಯಾನ್, ಅಡ್ವಾನ್ಸ್ ಆಗಿ 10 ಲಕ್ಷ ರೂ. ಪಡೆದುಕೊಂಡಿದ್ದಾಗಿ ಆರೋಪಿಸಲಾಗಿದೆ.

ಮಾಜಿ ಸಚಿವ ಹಾಲಪ್ಪ ಆಚಾರ್ ಗನ್​ಮ್ಯಾನ್​ನಿಂದ ಲಕ್ಷಾಂತರ ರೂ. ವಂಚನೆ, ಪ್ರಕರಣ ದಾಖಲು
ವಂಚನೆ ಆರೋಪ ಸಂಬಂಧ ಮಾಜಿ ಸಚಿವ ಹಾಲಪ್ಪ ಆಚಾರ್ ಅವರ ಗನ್​ಮ್ಯಾನ್ ವಿರುದ್ಧ ಎಫ್​ಐಆರ್ ದಾಖಲು
ರಾಚಪ್ಪಾಜಿ ನಾಯ್ಕ್
| Edited By: Rakesh Nayak Manchi|

Updated on:Sep 02, 2023 | 10:16 AM

Share

ಬೆಂಗಳೂರು, ಸೆ.2: ಮಾಜಿ ಸಚಿವ ಹಾಲಪ್ಪ ಆಚಾರ್ (Halappa Achar) ಗನ್​ಮ್ಯಾನ್​ನಿಂದ ಲಕ್ಷಾಂತರ ರೂಪಾಯಿ ವಂಚಿಸಿದ ಆರೋಪ ಸಂಬಂಧ ನಗರದ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಾಯಕೊಂಡ ಗ್ರಾ.ಪಂ. ಟೆಂಡರ್ ಕೊಡಿಸುತ್ತೇನೆ ಅಂತಾ ನಂಬಿಸಿ 30 ಕೋಟಿ ವೆಚ್ಚದ ಟೆಂಡರ್​ಗೆ 12 ಪರ್ಸೆಂಟ್ ಕಮಿಷನ್ ಕೇಳಿದ್ದ ಗನ್ ಮ್ಯಾನ್ ಅಡ್ವಾನ್ಸ್ 10 ಲಕ್ಷ ರೂ. ಪಡೆದುಕೊಂಡು ವಂಚಿಸಿದ್ದಾಗಿ ದೂರು ದಾಖಲಿಸಲಾಗಿದೆ.

ಹಾಲಪ್ಪ ಆಚಾರ್ ಗನ್​ಮ್ಯಾನ್​ ರಾಘವೇಂದ್ರ ಎಂಬವರು ಮಾಯಕೊಂಡ ಗ್ರಾಮ ಪಂಚಾಯತ್ ಟೆಂಡರ್ ಕೊಡಿಸುತ್ತೇನೆ ಅಂತಾ ಹೇಳಿ ಹೆಚ್.ರಾಜು ನಾಯ್ಕ್ ಅವರಿಗೆ ನಂಬಿಸಿದ್ದಾರೆ. ಅಲ್ಲದೆ, 30 ಕೋಟಿ ವೆಚ್ಚದ ಟೆಂಡರ್​ಗೆ 12 ಪರ್ಸೆಂಟ್ ಕಮಿಷನ್ ಕೇಳಿದ್ದ ರಾಘವೇಂದ್ರ, ರಾಜು ನಾಯ್ಕ್ ಅವರಿಂದ ಅಡ್ವಾನ್ಸ್ ಆಗಿ 10 ಲಕ್ಷ ರೂಪಾಯಿ ಪಡೆದುಕೊಂಡಿದ್ದರು.

ಇದನ್ನೂ ಓದಿ: ಬ್ಯಾಂಕ್ ವಂಚನೆ ಪ್ರಕರಣ: ಜಾರಿ ನಿರ್ದೇಶನಾಲಯದಿಂದ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಬಂಧನ

ಬಳಿಕ ಟೆಂಡರ್ ಕೊಡಿಸದೆ ಸತಾಯಿಸ್ತಿದ್ದ ಹಾಲಪ್ಪ ಆಚಾರ್ ಗನ್​ಮ್ಯಾನ್ ರಾಘವೇಂದ್ರ, ಹಣ ವಾಪಸ್ ಕೇಳಿದ್ದಕ್ಕೆ ಕೇವಲ 4 ಲಕ್ಷ ಅಷ್ಟೇ ನೀಡಿದ್ದಾರೆ. ಇನ್ನುಳಿದ 6 ಲಕ್ಷ ಹಣ ನೀಡದೇ ವಂಚಿಸಿರುವ ಗನ್​ಮ್ಯಾನ್ ರಾಘವೇಂದ್ರ ವಿರುದ್ಧ ರಾಜು ನಾಯ್ಕ್ ಅವರು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಎಫ್​ಐಆರ್ ದಾಲಿಸಿಕೊಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:15 am, Sat, 2 September 23

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’