ಮಾಜಿ ಸಚಿವ ಹಾಲಪ್ಪ ಆಚಾರ್ ಗನ್​ಮ್ಯಾನ್​ನಿಂದ ಲಕ್ಷಾಂತರ ರೂ. ವಂಚನೆ, ಪ್ರಕರಣ ದಾಖಲು

ಟೆಂಡರ್ ಕೊಡಿಸುತ್ತೇನೆ ಎಂದು ಹೇಳಿ ಹಣ ಪಡೆದು ವ್ಯಕ್ತಿಯೊಬ್ಬರಿಗೆ ಮಾಜಿ ಸಚಿವ ಹಾಲಪ್ಪ ಆಚಾರ್ ಅವರ ಗನ್ ಮ್ಯಾನ್​ ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 30 ಕೋಟಿ ವೆಚ್ಚದ ಟೆಂಡರ್​ಗೆ 12 ಪರ್ಸೆಂಟ್ ಕಮಿಷನ್ ಕೇಳಿದ್ದ ಗನ್​ಮ್ಯಾನ್, ಅಡ್ವಾನ್ಸ್ ಆಗಿ 10 ಲಕ್ಷ ರೂ. ಪಡೆದುಕೊಂಡಿದ್ದಾಗಿ ಆರೋಪಿಸಲಾಗಿದೆ.

ಮಾಜಿ ಸಚಿವ ಹಾಲಪ್ಪ ಆಚಾರ್ ಗನ್​ಮ್ಯಾನ್​ನಿಂದ ಲಕ್ಷಾಂತರ ರೂ. ವಂಚನೆ, ಪ್ರಕರಣ ದಾಖಲು
ವಂಚನೆ ಆರೋಪ ಸಂಬಂಧ ಮಾಜಿ ಸಚಿವ ಹಾಲಪ್ಪ ಆಚಾರ್ ಅವರ ಗನ್​ಮ್ಯಾನ್ ವಿರುದ್ಧ ಎಫ್​ಐಆರ್ ದಾಖಲು
Edited By: Rakesh Nayak Manchi

Updated on: Sep 02, 2023 | 10:16 AM

ಬೆಂಗಳೂರು, ಸೆ.2: ಮಾಜಿ ಸಚಿವ ಹಾಲಪ್ಪ ಆಚಾರ್ (Halappa Achar) ಗನ್​ಮ್ಯಾನ್​ನಿಂದ ಲಕ್ಷಾಂತರ ರೂಪಾಯಿ ವಂಚಿಸಿದ ಆರೋಪ ಸಂಬಂಧ ನಗರದ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಾಯಕೊಂಡ ಗ್ರಾ.ಪಂ. ಟೆಂಡರ್ ಕೊಡಿಸುತ್ತೇನೆ ಅಂತಾ ನಂಬಿಸಿ 30 ಕೋಟಿ ವೆಚ್ಚದ ಟೆಂಡರ್​ಗೆ 12 ಪರ್ಸೆಂಟ್ ಕಮಿಷನ್ ಕೇಳಿದ್ದ ಗನ್ ಮ್ಯಾನ್ ಅಡ್ವಾನ್ಸ್ 10 ಲಕ್ಷ ರೂ. ಪಡೆದುಕೊಂಡು ವಂಚಿಸಿದ್ದಾಗಿ ದೂರು ದಾಖಲಿಸಲಾಗಿದೆ.

ಹಾಲಪ್ಪ ಆಚಾರ್ ಗನ್​ಮ್ಯಾನ್​ ರಾಘವೇಂದ್ರ ಎಂಬವರು ಮಾಯಕೊಂಡ ಗ್ರಾಮ ಪಂಚಾಯತ್ ಟೆಂಡರ್ ಕೊಡಿಸುತ್ತೇನೆ ಅಂತಾ ಹೇಳಿ ಹೆಚ್.ರಾಜು ನಾಯ್ಕ್ ಅವರಿಗೆ ನಂಬಿಸಿದ್ದಾರೆ. ಅಲ್ಲದೆ, 30 ಕೋಟಿ ವೆಚ್ಚದ ಟೆಂಡರ್​ಗೆ 12 ಪರ್ಸೆಂಟ್ ಕಮಿಷನ್ ಕೇಳಿದ್ದ ರಾಘವೇಂದ್ರ, ರಾಜು ನಾಯ್ಕ್ ಅವರಿಂದ ಅಡ್ವಾನ್ಸ್ ಆಗಿ 10 ಲಕ್ಷ ರೂಪಾಯಿ ಪಡೆದುಕೊಂಡಿದ್ದರು.

ಇದನ್ನೂ ಓದಿ: ಬ್ಯಾಂಕ್ ವಂಚನೆ ಪ್ರಕರಣ: ಜಾರಿ ನಿರ್ದೇಶನಾಲಯದಿಂದ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಬಂಧನ

ಬಳಿಕ ಟೆಂಡರ್ ಕೊಡಿಸದೆ ಸತಾಯಿಸ್ತಿದ್ದ ಹಾಲಪ್ಪ ಆಚಾರ್ ಗನ್​ಮ್ಯಾನ್ ರಾಘವೇಂದ್ರ, ಹಣ ವಾಪಸ್ ಕೇಳಿದ್ದಕ್ಕೆ ಕೇವಲ 4 ಲಕ್ಷ ಅಷ್ಟೇ ನೀಡಿದ್ದಾರೆ. ಇನ್ನುಳಿದ 6 ಲಕ್ಷ ಹಣ ನೀಡದೇ ವಂಚಿಸಿರುವ ಗನ್​ಮ್ಯಾನ್ ರಾಘವೇಂದ್ರ ವಿರುದ್ಧ ರಾಜು ನಾಯ್ಕ್ ಅವರು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಎಫ್​ಐಆರ್ ದಾಲಿಸಿಕೊಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:15 am, Sat, 2 September 23

Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
Follow Us