AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಲಿಂಗಾಯತ ಧರ್ಮ ಆಗಬೇಕು: ಮಾಜಿ ಸಚಿವ ಎಂ.ಬಿ.ಪಾಟೀಲ್ ಆಗ್ರಹ

ಪ್ರತ್ಯೇಕ ಧರ್ಮ ಆದರೆ ಎಲ್ಲರಿಗೂ ಮೀಸಲಾತಿ ಸಿಗುತ್ತದೆ. ಎಲ್ಲರೂ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಹೋರಾಟ ಮಾಡುತ್ತೇವೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಪ್ರತ್ಯೇಕ ಲಿಂಗಾಯತ ಧರ್ಮ ಆಗಬೇಕು: ಮಾಜಿ ಸಚಿವ ಎಂ.ಬಿ.ಪಾಟೀಲ್ ಆಗ್ರಹ
ಮಾಜಿ ಸಚಿವ ಎಂ.ಬಿ.ಪಾಟೀಲ್ (ಫೈಲ್ ಚಿತ್ರ)
TV9 Web
| Edited By: |

Updated on:Sep 01, 2021 | 9:22 PM

Share

ಬೆಂಗಳೂರು: ಪಂಚಪೀಠದವರು ಎಲ್ಲರೂ ಸೇರಿ ಬಸವ ಧರ್ಮ ಆಗಬೇಕು. ಪ್ರತ್ಯೇಕ ಲಿಂಗಾಯತ ಧರ್ಮ ಆದರೆ ನಮಗೆ ಸೌಲಭ್ಯ ಸಿಗುತ್ತದೆ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಪ್ರತ್ಯೇಕ ಬಸವ ಧರ್ಮ ಆದರೆ ಮುಸ್ಲಿಂ, ಜೈನ ಮಾದರಿ ಅಲ್ಪಸಂಖ್ಯಾತ ಸ್ಥಾನಮಾನ ಸಿಗುತ್ತದೆ. ವೀರಶೈವರನ್ನು ಸೇರಿಸಿಕೊಂಡು ನಾವು ಮುಂದುವರಿಯುತ್ತೇವೆ. ಚುನಾವಣಾ ಸೋಲಿಗೆ ಪ್ರತ್ಯೇಕ ಲಿಂಗಾಯತ ಧರ್ಮ ಕಾರಣವಲ್ಲ. ಪಂಚಮಸಾಲಿ ಮೀಸಲಾತಿಗೆ ಹೋರಾಟ ಮಾಡುತ್ತಿದ್ದಾರೆ. ಪ್ರತ್ಯೇಕ ಧರ್ಮ ಆದರೆ ಎಲ್ಲರಿಗೂ ಮೀಸಲಾತಿ ಸಿಗುತ್ತದೆ. ಎಲ್ಲರೂ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಹೋರಾಟ ಮಾಡುತ್ತೇವೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಪಂಚಮಸಾಲಿ ಸಮಾಜದ 3ನೇ ಪೀಠದ ಕುರಿತು ಸ್ಫೋಟಕ ಹೇಳಿಕೆ ನೀಡಿದ ಮನಗೂಳಿ ಹಿರೇಮಠದ ಸಂಗನ ಬಸವ ಸ್ವಾಮೀಜಿ ಬಾಗಲಕೋಟೆ: ಮುಂದಿನ ದಿನಮಾನಗಳಲ್ಲಿ ಪಂಚಮಸಾಲಿ ಸಮಾಜದ 3ನೇ ಪೀಠ ನಿರ್ಮಾಣವಾಗಬಹುದು. ಈಗಾಗಲೇ ಒಂಬತ್ತು ಜಿಲ್ಲೆಗಳಲ್ಲಿ ಸಂಘಟನೆ ಆರಂಭವಾಗಿದೆ. ಜನರ ಒತ್ತಡ ಬಂದರೆ ಪರ್ಯಾಯ ಪೀಠ ರಚನೆ ಖಚಿತ. ಮುಂದಿನ‌ ದಿನಮಾನಗಳಲ್ಲಿ ಏನು‌ ಬೇಕಾದ್ರೂ ಆಗಬಹುದು ಎಂದು ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿ ಸಂಗನ ಬಸವಶ್ರೀ ಸುದ್ದಿಗೋಷ್ಠಿ ನಡೆಸಿ ತಿಳಿಸಿದರು. ಪಂಚಮಸಾಲಿ ಪರ್ಯಾಯ ಒಕ್ಕೂಟದ ಸ್ವಾಮೀಜಿಗಳು ನಡೆಸಿದ ಸಭೆಯ ನಂತರ ಅವರು ಈ ಸ್ಫೋಟಕ ಹೇಳಿಕೆ ನೀಡಿದರು.

ಪಂಚಮಸಾಲಿ ಸಮಾಜದ ಮನಗೂಳಿಯ ಮೊದಲನೇ ಶ್ರೀಗಳಾದ ಮಹಾಂತ ಶಿವಾಚಾರ್ಯರು ಪಂಚಮಸಾಲಿ ಸಮಾಜದ ಐದು‌ಪೀಠಗಳಾದ್ರೆ ತಪ್ಪೇನಿದೆ ಅಂತಿದ್ದರು.ಈಗಾಗಲೇ ಕೂಡಲಸಂಗನದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಶ್ರೀಗಳು ಹಾಗೂ ಹರಿಹರಪೀಠದ ಶ್ರೀಗಳು ಏನು ಮಾಡುತ್ತಿದ್ದಾರೆ ಎಂಬುದು ನಿಮಗೆ ಗೊತ್ತಿದೆ ಎಂದ ಸಂಗನ ಬಸವ ಸ್ವಾಮೀಜಿ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ‌ರು.

ಇದನ್ನೂ ಓದಿ: 

30 ತಾಸು ಕೊರೆಯುವ ಚಳಿಯಲ್ಲಿ ನಿಂತು ಅಫ್ಘಾನಿಸ್ತಾನದಲ್ಲಿ ಬೈಡೆನ್ ಜೀವ ಕಾಪಾಡಿದ್ದವಗೆ ವಿಸಾ ಕೊಡಲು ಅಮೆರಿಕ ಮೀನಮೇಷ

ಅಗತ್ಯವಿದ್ದಾಗ ಅಫ್ಘಾನಿಸ್ತಾನದಲ್ಲಿ ನಾವು ಡ್ರೋನ್ ದಾಳಿ ಮುಂದುವರೆಸುತ್ತೇವೆ; ಅಮೆರಿಕ ಎಚ್ಚರಿಕೆ

(Former Minister MB Patel urges separate Lingayat Religion in Bengaluru)

Published On - 4:13 pm, Wed, 1 September 21

ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ