ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವ ಗ್ಯಾರಂಟಿ ಠುಸ್ ಆಯ್ತು ಎಂದು ಕಾಲೆಳೆದ ಮಾಜಿ ಸಚಿವ ಆರ್ ಅಶೋಕ್
ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವ ಗ್ಯಾರಂಟಿ ಠುಸ್ ಆಯ್ತು ಎಂದು ಕಾಲೆಳೆದ ಮಾಜಿ ಸಚಿವ ಆರ್ ಅಶೋಕ್
ವಿಧಾನಸಭೆಯಲ್ಲಿ ನಿಲುವಳಿ ಪ್ರಸ್ತಾವ ಮಂಡನೆ ವೇಳೆ ಶಾಸಕ ಆರ್. ಅಶೋಕ್ ಹೇಳಿಕೆ: ಉಚಿತ ಬಸ್ ಭಾಗ್ಯದ ಬಗ್ಗೆ ಮಾತನಾಡುತ್ತಾ ಸಿಎಂ ನನ್ನ ಹೆಂಡ್ತಿಗೂ ಫ್ರೀ ಎಂದಿದ್ದರು. ಆ ನಂತರ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ರಾಜಹಂಸದಲ್ಲಿ ಉಚಿತ ಇಲ್ಲ ಅಂತಾ ಹೇಳಿದ್ದರು. ಆಗ ಸಿಎಂ ಮಧ್ಯ ಪ್ರವೇಶಿಸಿ, ಎಲ್ಲರೂ ಹೋಗಲಿ ಬಿಡ್ರೀ ಅಂದಿದ್ದರು. ಈಗ ಆ ಮಾತಿನಂತೆ ಎಲ್ಲಾ ಬಸ್ ಗಳಲ್ಲೂ ಎಲ್ಲಿ ಫ್ರೀ ಇದೆ? ಎಂದು ಅಶೋಕ್ ತರಾಟೆಗೆ ತೆಗೆದುಕೊಂಡರು.
ಮುಂದುವರಿದು ಮಾತನಾಡಿದ ಅಶೋಕ್, ನೀವು ಮೊದಲು ಗ್ಯಾರಂಟಿ ಘೋಷಣೆ ಮಾಡಿ ಸ್ವಾಮಿ, ಜಾರಿ ಮಾಡಲು ಯೋಗ್ಯತೆ ಇಲ್ಲ ಎಂದು ಕಾಲೆಳೆದರು. ಆ ವೇಳೆ ಅಶೋಕ್ ಮಾತಿಗೆ ಆಡಳಿತ ಪಕ್ಷದಿಂದ ತೀವ್ರ ವಿರೋಧ ವ್ಯಕ್ತವಾಯಿತು. ಆಡಳಿತ ಮತ್ತು ವಿಪಕ್ಷ ಸದಸ್ಯರ ಮಧ್ಯೆ ಮಾತಿನ ಸಮರ ನಡೆಯಿತು. ಇದೇ ವೇಳೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವ ಗ್ಯಾರಂಟಿ ಠುಸ್ ಆಯ್ತು ಎಂದು ಮಾಜಿ ಸಚಿವ ಆರ್ ಅಶೋಕ್ ಕಾಲೆಳೆದು, ಕುಳಿತರು.

‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..

ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್

ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ

ಟೆಸ್ಟ್ ಚಾಂಪಿಯನ್ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
