AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಳ್ಳು ಗಾಡಿ ವ್ಯಾಪಾರಿಗಳು ಧ್ವನಿವರ್ಧಕ ಬಳಸಬಾರದೆಂಬ ಕಮಲ್ ಪಂತ್ ನಿರ್ಣಯಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ವಿರೋಧ

ಬಿಸಿಲು, ಧೂಳು, ಮಳೆ ಲೆಕ್ಕಿಸದೆ ಪ್ರತಿ ದಿನ 10ರಿಂದ 20 ಕಿಲೋಮೀಟರ್ ದೂರ ನಡೆದು ತಳ್ಳು ಗಾಡಿ ಮೂಲಕ ವ್ಯಾಪಾರ ಮಾಡುತ್ತಾರೆ. ಹೀಗೆ ನಡೆಸುವವರ ಬಗ್ಗೆ ಕನಿಕರ ಇರಬೇಕು.

ತಳ್ಳು ಗಾಡಿ ವ್ಯಾಪಾರಿಗಳು ಧ್ವನಿವರ್ಧಕ ಬಳಸಬಾರದೆಂಬ ಕಮಲ್ ಪಂತ್ ನಿರ್ಣಯಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ವಿರೋಧ
ತಳ್ಳು ಗಾಡಿಯಲ್ಲಿ ವ್ಯಾಪಾರ
TV9 Web
| Edited By: |

Updated on: Oct 07, 2021 | 12:43 PM

Share

ಬೆಂಗಳೂರು: ತರಕಾರಿ ಹಾಗೂ ಇನ್ನಿತರೆ ತಳ್ಳುಗಾಡಿ ವ್ಯಾಪಾರಿಗಳು ಧ್ವನಿವರ್ಧಕ ಬಳಸಬಾರದು ಅಂತ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ತಿಳಿಸಿದ್ದಾರೆ. ಕಾನೂನೂ ಉಲ್ಲಂಘಿಸುವವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಪೊಲೀಸ್ ಆಯುಕ್ತರ ಈ ನಿರ್ದೇಶನಕ್ಕೆ ಮಾಜಿ ಸಚಿವ ಎಸ್ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ. ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿರುವ ಅವರು, ತಳ್ಳು ಗಾಡಿಯ ವ್ಯಾಪಾರಿಗಳಿಗೆ ಧ್ವನಿವರ್ಧಕ ನಿಯಂತ್ರಣ ಮಾಡುವ ಕುರಿತು ಜಾಗೃತಿ ಮೂಡಿಸುವ ಬದಲು, ಇಡೀ ದಿನ ಗಂಟಲು ಘೋಷಣೆ ಮಾಡಿಕೊಂಡೇ ವ್ಯಾಪಾರ ಮಾಡಿ ಅಂತ ಹೇಳುವುದು ಸರಿಯಲ್ಲ. ಇದು ಮಾನವೀಯ ನಡವಳಿಕೆ ಅಲ್ಲ ಅಂತ ಅಭಿಪ್ರಾಯಪಟ್ಟಿದ್ದಾರೆ.

ಬಿಸಿಲು, ಧೂಳು, ಮಳೆ ಲೆಕ್ಕಿಸದೆ ಪ್ರತಿ ದಿನ 10ರಿಂದ 20 ಕಿಲೋಮೀಟರ್ ದೂರ ನಡೆದು ತಳ್ಳು ಗಾಡಿ ಮೂಲಕ ವ್ಯಾಪಾರ ಮಾಡುತ್ತಾರೆ. ಹೀಗೆ ನಡೆಸುವವರ ಬಗ್ಗೆ ಕನಿಕರ ಇರಬೇಕು. ಗಂಟೆಗಟ್ಟಲೆ ಕೂಗುತ್ತಾ ವ್ಯಾಪಾರ ಮಾಡುವುದಕ್ಕೆ ಆಗುತ್ತಾ? ಎಂದು ಪತ್ರದಲ್ಲಿ ಪ್ರಶ್ನಿಸದ ಶಾಸಕ ಸುರೇಶ್ ಕುಮಾರ್, ತಳ್ಳುವ ಗಾಡಿಯವರೆಲ್ಲಾ ನಮ್ಮವರೇ, ಬೆಂಗಳೂರಿನ ಸುತ್ತ ಮುತ್ತಲಿನ ಕುಟುಂಬದವರೇ ಜೊತೆಗೆ ಕನ್ನಡಿಗರೇ ಎಂಬುವುದನ್ನು ತಿಳಿಯಬೇಕೆಂದು ಹೇಳಿದ್ದಾರೆ.

ತಳ್ಳುವ ಗಾಡಿಗಳ ವ್ಯಾಪಾರಿಗಳಿಗೂ ಸರ್ಕಾರ ಕೆಲಸ ಕೊಡುವ ಸ್ಥಿತಿಯಲ್ಲಿಲ್ಲ. ಈಗಾಗಲೇ ಆನ್ಲೈನ್ ಮೂಲಕ ತರಕಾರಿ ಸೇರಿ ಅಗತ್ಯ ವಸ್ತುಗಳನ್ನು ಖರೀದಿಸುವ ವ್ಯವಸ್ಥೆ ಜೋರಾಗಿ ನಡೆಯುತ್ತಿದೆ. ಇದರಿಂದ ತಳ್ಳುವ ಗಾಡಿಗಳ ವ್ಯಾಪಾರಿಗಳಿಗೆ ಹೊಡೆತ ಬಿದ್ದಿದೆ. ಕೊರೊನಾದಿಂದ ಬಹಳಷ್ಟು ನಷ್ಟ ಅನುಭವಿಸಿದ್ದಾರೆ. ಈ ಬಗ್ಗೆ ಗಮನದಲ್ಲಿಟ್ಟುಕೊಂಡು ಪರಾಮರ್ಶೆ ಮಾಡಬೇಕು ಅಂತ ಪತ್ರದಲ್ಲಿ ಒತ್ತಾಯಿಸಿದ್ದಾರೆ.

 

ಇದನ್ನೂ ಓದಿ

Lakhimpur Kheri violence ಲಖಿಂಪುರ್ ಖೇರಿ ಹಿಂಸಾಚಾರದ ತನಿಖೆಗಾಗಿ ಉತ್ತರ ಪ್ರದೇಶ ಸರ್ಕಾರದಿಂದ ಅಲಹಾಬಾದ್ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇಮಕ

Viral Video: ಬಟ್ಟೆ ತೊಳೆಯಲು ದೇಸಿ ವಾಶಿಂಗ್​ ಮಷೀನ್​ ಕಂಡುಹಿಡಿದ ವಿದ್ಯಾರ್ಥಿ! ವಿಡಿಯೋ ಮಿಸ್​ ಮಾಡ್ಕೊಳ್ಬೇಡಿ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​