AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಜಾಮೀನು

ಜಾಮೀನು ದೊರೆತ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಶೀಘ್ರ ಬಿಡುಗಡೆಯಾಗುವ ಸಾಧ್ಯತೆಯಿದೆ. ಜೈಲಿನಿಂದ ಬಿಡುಗಡೆಯಾದರೂ ಧಾರವಾಡ ಪ್ರವೇಶಿಸುವಂತಿಲ್ಲ.

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಜಾಮೀನು
ವಿನಯ್ ಕುಲಕರ್ಣಿ (ಸಂಗ್ರಹ ಚಿತ್ರ).
TV9 Web
| Edited By: |

Updated on:Aug 19, 2021 | 4:40 PM

Share

ಬೆಂಗಳೂರು: ಕೊಲೆ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು ನೀಡಿದೆ. ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಆರೋಪಿಯಾಗಿದ್ದಾರೆ. ಕೊಲೆ ಪ್ರಕರಣದಲ್ಲಿ ಈ ಹಿಂದೆ ಸುಪ್ರೀಂಕೋರ್ಟ್​ ಜಾಮೀನು ನೀಡಿತ್ತು. ಇದೀಗ ಜನಪ್ರತಿನಿಧಿಗಳ ಕೋರ್ಟ್​ನಿಂದ ಸಾಕ್ಷಿನಾಶ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜಾಮೀನು ಸಿಕ್ಕಿದೆ.

ಜಾಮೀನು ದೊರೆತ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಶೀಘ್ರ ಬಿಡುಗಡೆಯಾಗುವ ಸಾಧ್ಯತೆಯಿದೆ. ಜೈಲಿನಿಂದ ಬಿಡುಗಡೆಯಾದರೂ ಧಾರವಾಡ ಪ್ರವೇಶಿಸುವಂತಿಲ್ಲ. ಸುಪ್ರೀಂಕೋರ್ಟ್​ ಜಾಮೀನು ನೀಡುವಾಗ ಈ ಷರತ್ತು ವಿಧಿಸಿದೆ. ಪ್ರಕರಣದ ಮತ್ತೋರ್ವ ಆರೋಪ ಚಂದ್ರಶೇಖರ ಇಂಡಿಗೂ ಜಾಮೀನು ಸಿಕ್ಕಿದೆ.

ಯೋಗೇಶ್​ಗೌಡ ಹತ್ಯೆ ಪ್ರಕರಣದ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಪ್ರಸ್ತುತ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ. ನ.5ರಂದು ಒಂದು ದಿನ ನ್ಯಾಯಾಂಗ ಬಂಧನಕ್ಕೆ ನೀಡಿದ್ದ ಕೋರ್ಟ್​, ನ.6ರಂದು ಮತ್ತೆ ಮೂರು ದಿನಗಳಿಗೆ ಅವಧಿ ವಿಸ್ತರಿಸಿತ್ತು. ನ.9ರಂದು ನ್ಯಾಯಾಂಗ ಬಂಧನದ ಅವಧಿಯನ್ನು 14 ದಿನಗಳಿಗೆ ವಿಸ್ತರಿಸಲಾಯಿತು. ನಂತರದ ದಿನಗಳಲ್ಲಿ ಸುಮಾರು ಒಂಬತ್ತು ತಿಂಗಳಿನಿಂದ ವಿನಯ್ ಕುಲಕರ್ಣಿ ಜೈಲಿನಲ್ಲಿಯೇ ಇದ್ದಾರೆ. ಇದೀಗ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದಲೂ ವಿನಯ್ ಕುಲಕರ್ಣಿಗೆ ಜಾಮೀನು ದೊರೆತಿದ್ದು, ಷರತ್ತುಬದ್ಧ ಬಿಡುಗಡೆಗೆ ಹಾದಿ ಮುಕ್ತವಾಗಿದೆ.

(Former Minister Vinay Kulkarni Got Bail in Yogesh Gowda Murder Case)

ಇದನ್ನೂ ಓದಿ: ‘ಅಫ್ಘಾನ್​​ನಲ್ಲಿ ಭಾರತದ ಹೂಡಿಕೆ ಮುಂದುವರಿಯಲಿದೆಯಾ’-ಅಮೆರಿಕ ಮಾಧ್ಯಮಗಳ ಈ ಪ್ರಶ್ನೆಗೆ ಎಸ್​.ಜೈಶಂಕರ್​ ಕೊಟ್ಟ ಚುಟುಕು ಉತ್ತರ ಹೀಗಿದೆ

ಇದನ್ನೂ ಓದಿ: ತಾಲಿಬಾನಿಗಳ ವಿರುದ್ಧ ಶಸ್ತ್ರ ಹಿಡಿದಿದ್ದ ಅಫ್ಘಾನಿಸ್ತಾನದ ಮಹಿಳಾ ಗವರ್ನರ್ ಬಂಧನ

Published On - 4:24 pm, Thu, 19 August 21

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್