AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಜಾಮೀನು

ಜಾಮೀನು ದೊರೆತ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಶೀಘ್ರ ಬಿಡುಗಡೆಯಾಗುವ ಸಾಧ್ಯತೆಯಿದೆ. ಜೈಲಿನಿಂದ ಬಿಡುಗಡೆಯಾದರೂ ಧಾರವಾಡ ಪ್ರವೇಶಿಸುವಂತಿಲ್ಲ.

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಜಾಮೀನು
ವಿನಯ್ ಕುಲಕರ್ಣಿ (ಸಂಗ್ರಹ ಚಿತ್ರ).
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Aug 19, 2021 | 4:40 PM

Share

ಬೆಂಗಳೂರು: ಕೊಲೆ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು ನೀಡಿದೆ. ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಆರೋಪಿಯಾಗಿದ್ದಾರೆ. ಕೊಲೆ ಪ್ರಕರಣದಲ್ಲಿ ಈ ಹಿಂದೆ ಸುಪ್ರೀಂಕೋರ್ಟ್​ ಜಾಮೀನು ನೀಡಿತ್ತು. ಇದೀಗ ಜನಪ್ರತಿನಿಧಿಗಳ ಕೋರ್ಟ್​ನಿಂದ ಸಾಕ್ಷಿನಾಶ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜಾಮೀನು ಸಿಕ್ಕಿದೆ.

ಜಾಮೀನು ದೊರೆತ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಶೀಘ್ರ ಬಿಡುಗಡೆಯಾಗುವ ಸಾಧ್ಯತೆಯಿದೆ. ಜೈಲಿನಿಂದ ಬಿಡುಗಡೆಯಾದರೂ ಧಾರವಾಡ ಪ್ರವೇಶಿಸುವಂತಿಲ್ಲ. ಸುಪ್ರೀಂಕೋರ್ಟ್​ ಜಾಮೀನು ನೀಡುವಾಗ ಈ ಷರತ್ತು ವಿಧಿಸಿದೆ. ಪ್ರಕರಣದ ಮತ್ತೋರ್ವ ಆರೋಪ ಚಂದ್ರಶೇಖರ ಇಂಡಿಗೂ ಜಾಮೀನು ಸಿಕ್ಕಿದೆ.

ಯೋಗೇಶ್​ಗೌಡ ಹತ್ಯೆ ಪ್ರಕರಣದ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಪ್ರಸ್ತುತ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ. ನ.5ರಂದು ಒಂದು ದಿನ ನ್ಯಾಯಾಂಗ ಬಂಧನಕ್ಕೆ ನೀಡಿದ್ದ ಕೋರ್ಟ್​, ನ.6ರಂದು ಮತ್ತೆ ಮೂರು ದಿನಗಳಿಗೆ ಅವಧಿ ವಿಸ್ತರಿಸಿತ್ತು. ನ.9ರಂದು ನ್ಯಾಯಾಂಗ ಬಂಧನದ ಅವಧಿಯನ್ನು 14 ದಿನಗಳಿಗೆ ವಿಸ್ತರಿಸಲಾಯಿತು. ನಂತರದ ದಿನಗಳಲ್ಲಿ ಸುಮಾರು ಒಂಬತ್ತು ತಿಂಗಳಿನಿಂದ ವಿನಯ್ ಕುಲಕರ್ಣಿ ಜೈಲಿನಲ್ಲಿಯೇ ಇದ್ದಾರೆ. ಇದೀಗ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದಲೂ ವಿನಯ್ ಕುಲಕರ್ಣಿಗೆ ಜಾಮೀನು ದೊರೆತಿದ್ದು, ಷರತ್ತುಬದ್ಧ ಬಿಡುಗಡೆಗೆ ಹಾದಿ ಮುಕ್ತವಾಗಿದೆ.

(Former Minister Vinay Kulkarni Got Bail in Yogesh Gowda Murder Case)

ಇದನ್ನೂ ಓದಿ: ‘ಅಫ್ಘಾನ್​​ನಲ್ಲಿ ಭಾರತದ ಹೂಡಿಕೆ ಮುಂದುವರಿಯಲಿದೆಯಾ’-ಅಮೆರಿಕ ಮಾಧ್ಯಮಗಳ ಈ ಪ್ರಶ್ನೆಗೆ ಎಸ್​.ಜೈಶಂಕರ್​ ಕೊಟ್ಟ ಚುಟುಕು ಉತ್ತರ ಹೀಗಿದೆ

ಇದನ್ನೂ ಓದಿ: ತಾಲಿಬಾನಿಗಳ ವಿರುದ್ಧ ಶಸ್ತ್ರ ಹಿಡಿದಿದ್ದ ಅಫ್ಘಾನಿಸ್ತಾನದ ಮಹಿಳಾ ಗವರ್ನರ್ ಬಂಧನ

Published On - 4:24 pm, Thu, 19 August 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ