AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದಿ ನಾಯಿಗಳಿಗೆ ಆಹಾರ ಹಾಕಿದ ನೌಕಾಪಡೆಯ ಮಾಜಿ ಎಂಜಿನಿಯರ್​ ಮೇಲೆ ಕಟ್ಟಿಗೆಯಿಂದ ಬಡಿದು ಹಲ್ಲೆ

ಬೀದಿ ನಾಯಿಗಳಿಗೆ ಆಹಾರ ಹಾಕಿದ ನೌಕಾಪಡೆಯ ಮಾಜಿ ಎಂಜಿನಿಯರ್​​ ಮೇಲೆ ಹಲ್ಲೆ ನಡೆದಿದೆ. ಯಲಹಂಕ ತಾಲೂಕಿನ ಚೊಕ್ಕನಹಳ್ಳಿಯ ಎನ್‌ಆರ್‌ ಲೇಔಟ್‌ ನಿವಾಸಿ ಕೆ ಅಮರನಾಥ ಚವ್ಹಾಣ್‌ ಎಂಬಾತ ಹಲ್ಲೆಗೊಳಗಾದ ವ್ಯಕ್ತಿ. ಚೊಕ್ಕನಹಳ್ಳಿಯ ಎಸ್ ಮತ್ತು ಎನ್ ಲೇಔಟ್ ನಲ್ಲಿ ಭಾನುವಾರ ಬೆಳಗ್ಗೆ 7:15 ರಿಂದ 7:30 ರ ನಡುವೆ ಅವರ ಮೇಲೆ ಹಲ್ಲೆ ನಡೆದಿದೆ.

ಬೀದಿ ನಾಯಿಗಳಿಗೆ ಆಹಾರ ಹಾಕಿದ ನೌಕಾಪಡೆಯ ಮಾಜಿ ಎಂಜಿನಿಯರ್​ ಮೇಲೆ ಕಟ್ಟಿಗೆಯಿಂದ ಬಡಿದು ಹಲ್ಲೆ
(ಪ್ರಾತಿನಿಧಿಕ ಚಿತ್ರ)
ಸಾಧು ಶ್ರೀನಾಥ್​
|

Updated on: Sep 28, 2023 | 11:15 AM

Share

ಬೆಂಗಳೂರು, ಸೆಪ್ಟೆಂಬರ್​ 28: ಯಲಹಂಕ ಸಮೀಪದ ಚೊಕ್ಕನಹಳ್ಳಿಯಲ್ಲಿ (Chokkanahalli near Yelahanka) ಬೀದಿ ನಾಯಿಗಳಿಗೆ (stray dogs) ಆಹಾರ ನೀಡುತ್ತಿದ್ದ ಭಾರತೀಯ ನೌಕಾಪಡೆಯ (Indian Navy) 74 ವರ್ಷದ ನಿವೃತ್ತ ಎಂಜಿನಿಯರ್ (engineer) ಮೇಲೆ ಕಳೆದ ಭಾನುವಾರ ಸ್ಥಳೀಯ ವ್ಯಕ್ತಿಯಿಂದ ಹಲ್ಲೆ (attack) ನಡೆದಿದೆ. ಕೊನೆಗೆ, ಸ್ಥಳೀಯ ನಿವಾಸಿಯೊಬ್ಬರು ಮರದ ಹಲಗೆಯಿಂದ ಪೆಟ್ಟು ತಿಂದು ಗಾಯಗೊಂಡ ವೃದ್ಧನನ್ನು (victim) ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಯಲಹಂಕ ತಾಲೂಕಿನ ಚೊಕ್ಕನಹಳ್ಳಿಯ ಎನ್‌ಆರ್‌ ಲೇಔಟ್‌ ನಿವಾಸಿ ಕೆ ಅಮರನಾಥ ಚವ್ಹಾಣ್‌ ಎಂಬಾತ ಹಲ್ಲೆಗೊಳಗಾದ ವ್ಯಕ್ತಿ. ಚೊಕ್ಕನಹಳ್ಳಿಯ ಎಸ್ ಮತ್ತು ಎನ್ ಲೇಔಟ್ ನಲ್ಲಿ ಭಾನುವಾರ ಬೆಳಗ್ಗೆ 7:15 ರಿಂದ 7:30 ರ ನಡುವೆ ಅವರ ಮೇಲೆ ಹಲ್ಲೆ ನಡೆದಿದೆ. ಕಳೆದ ಮೂರು ವರ್ಷಗಳಿಂದ ಈ ಪ್ರದೇಶದ ನಿವಾಸಿಯಾಗಿರುವ ತಾನು ಪ್ರತಿದಿನ ಬೆಳಗ್ಗೆ 7 ರಿಂದ 7:45 ರವರೆಗೆ ಬೆಳಗಿನ ವಾಕ್ ಮಾಡುತ್ತೇನೆ ಎಂದು ದೂರಿನಲ್ಲಿ ತಿಳಿಸಿರುವುದಾಗಿ newindianexpress.com TNIE ವರದಿ ಮಾಡಿದೆ.

ತನ್ನ ಕಾಲ್ನಡಿಗೆ ಸಮಯದಲ್ಲಿ ಬೀದಿನಾಯಿಗಳಿಗೆ ಬಿಸ್ಕೆಟ್‌ಗಳನ್ನು ತಿನ್ನಿಸುತ್ತೇನೆ. ಮೊನ್ನೆ ಭಾನುವಾರವೂ ಎಂದಿನಂತೆ ತಮ್ಮ ದಿನಚರಿ ಅನುಸರಿಸುತ್ತಿದ್ದಾಗ ಶಂಕಿತ ಆರೋಪಿ (ಎಸ್ ಮತ್ತು ಎನ್ ಲೇಔಟ್‌ನ ಚಂದ್ರಪ್ಪ ಎಂದು ಗುರುತಿಸಲಾಗಿದೆ) ತನ್ನ ಮನೆಯ ಹೊರಗೆ ನಿಂತು ಅಮರನಾಥ್​ ವಿರುದ್ಧ ಜೋರಾಗಿ ಕೂಗಾಡಿದ್ದಾನೆ. ಅಮರನಾಥ್ ಕೂಗಾಡುತ್ತಿದ್ದ ಆ ವ್ಯಕ್ತಿಯ ಬಳಿ ಹೋದಾಗ, ನಾಯಿಗಳಿಗೆ ಆಹಾರ ಹಾಕುತ್ತೀಯಾ ಎಂದು ಜರಿದವನೆ, ಮರದ ಹಲಗೆಯಿಂದ ಆ ಮಾಜಿ ನೌಕಾಪಡೆಯ ಅಧಿಕಾರಿಗೆ ಹೊಡೆದಿದ್ದಾನೆ. ಬೀದಿನಾಯಿಗಳಿಗೆ ಮತ್ತೊಮ್ಮೆ ಆಹಾರ ನೀಡಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದೂ ಆರೋಪಿಯು ಅಮರನಾಥ್‌ಗೆ ಬೆದರಿಕೆ ಹಾಕಿದ್ದಾನೆ. ಸಂತ್ರಸ್ತ ವೃದ್ಧನನ್ನು ಬಾಗಲೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

Also Read: ಬೀದಿನಾಯಿಗಳ ಉಪಟಳಕ್ಕೆ ಬೆಂಗಳೂರಿಗರು ಗಢಗಢ ನಡುಗುತ್ತಿದ್ದಾರೆ, ಬಿಬಿಎಂಪಿ ನಾಯಿಗಳ ಲೆಕ್ಕ ಹಾಕುತ್ತಿದೆ!

ಆರೋಪಿಯನ್ನು ಬಂಧಿಸಲಾಗಿದೆಯೇ ಎಂಬ ಬಗ್ಗೆ ಪೊಲೀಸರಿಂದ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ಸಂತ್ರಸ್ತ ವೃದ್ಧರು TNIE ಗೆ ತಿಳಿಸಿದ್ದಾರೆ. “ನಾನು ಅನಾರೋಗ್ಯದಿಂದ ಬಳಲುತ್ತಿರುವ ಕಾರಣ ಹೆಚ್ಚು ಮಾತನಾಡಲು ಸಾಧ್ಯವಿಲ್ಲ ಮತ್ತು ಘಟನೆಯ ನಂತರ ಬೆಡ್ ರೆಸ್ಟ್ಗೆ ಸಲಹೆ ನೀಡಿದ್ದಾರೆ” ಎಂದು ಪ್ರತಿಕ್ರಿಯಿಸಿದ್ದಾರೆ. ಆರೋಪಿಯನ್ನು ಪೊಲೀಸರು ಇನ್ನೂ ಬಂಧಿಸಿಲ್ಲ. ಶಂಕಿತನ ವಿರುದ್ಧ ಭಾರತೀಯ ದಂಡ ಸಂಹಿತೆಯ ಕೆಲ ಸೆಕ್ಷನ್‌ಗಳ ಜೊತೆಗೆ ಅಪಾಯಕಾರಿ ಆಯುಧಗಳಿಂದ ಗಾಯಗೊಳಿಸಿದ ಪ್ರಕರಣವನ್ನು ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ