AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನದಲ್ಲಿ ಕಲಬುರಗಿಯಿಂದ ಬೆಂಗಳೂರಿಗೆ ಹಾರಿದ 4 ಜೆಡಿಎಸ್ ಸದಸ್ಯರು; 4 ವಾರ್ಡ್​ ಗೆದ್ದಿದ್ದೇ ಅಚ್ಚರಿ ಎಂದ ದೇವೇಗೌಡ

ಜೆಡಿಎಸ್​ ಮುಖಂಡ ನಾಸೀರ್ ಹುಸೇನ್ ಜತೆ ಕಲಬುರಗಿಯಿಂದ ಬೆಂಗಳೂರಿನತ್ತ ವಿಮಾನದಲ್ಲಿ ಜೆಡಿಎಸ್ ಸದಸ್ಯರು ಪ್ರಯಾಣ ಬೆಳೆಸಿದ್ದಾರೆ.

ವಿಮಾನದಲ್ಲಿ ಕಲಬುರಗಿಯಿಂದ ಬೆಂಗಳೂರಿಗೆ ಹಾರಿದ 4 ಜೆಡಿಎಸ್ ಸದಸ್ಯರು; 4 ವಾರ್ಡ್​ ಗೆದ್ದಿದ್ದೇ ಅಚ್ಚರಿ ಎಂದ ದೇವೇಗೌಡ
ಹೆಚ್​.ಡಿ.ದೇವೇಗೌಡ, ಹೆಚ್​.ಡಿ.ಕುಮಾರಸ್ವಾಮಿ
TV9 Web
| Edited By: |

Updated on: Sep 07, 2021 | 4:46 PM

Share

ಬೆಂಗಳೂರು: ಕಲಬುರಗಿ ಮಹಾನಗರ ಪಾಲಿಕೆ ಫಲಿತಾಂಶ ಅತಂತ್ರವಾಗಿ ಯಾರೊಬ್ಬರಿಗೂ ಬಹುಮತ ದೊರೆಯದ ಕಾರಣ ಜೆಡಿಎಸ್ ಸದಸ್ಯರ ಬೆಂಬಲ ಮಹತ್ವದ್ದೆನಿಸಿದೆ. ಜೆಡಿಎಸ್ ಸದಸ್ಯರು ಯಾವ ಪಕ್ಷವನ್ನು ಬೆಂಬಲಿಸುವರೋ ಅವರು ಕಲಬುರಗಿ ಪಾಲಿಕೆಯ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತವಾದಂತಾಗಿದೆ. ಈಬೆನ್ನಲ್ಲೇ ಜೆಡಿಎಸ್​ನ ನಾಲ್ವರು ಪಾಲಿಕೆ ಸದಸ್ಯರನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಂಗಳೂರಿಗೆ ಕರೆಸಿಕೊಂಡಿದ್ದಾರೆ. ಜೆಡಿಎಸ್​ ಮುಖಂಡ ನಾಸೀರ್ ಹುಸೇನ್ ಜತೆ ಕಲಬುರಗಿಯಿಂದ ಬೆಂಗಳೂರಿನತ್ತ ವಿಮಾನದಲ್ಲಿ ಜೆಡಿಎಸ್ ಸದಸ್ಯರು ಪ್ರಯಾಣ ಬೆಳೆಸಿದ್ದಾರೆ.

ಕಲಬುರಗಿ ಪಾಲಿಕೆ ಚುನಾವಣೆಯಲ್ಲಿ 4 ವಾರ್ಡ್‌ಗಳಲ್ಲಿ ಜೆಡಿಎಸ್ ಗೆಲ್ಲುವುದೆಂದು ನಾನೇ ಅಂದುಕೊಂಡಿರಲಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅಚ್ಚರಿ ವ್ಯಕ್ತಪಡಿಸಿದರು. ಕಲಬುರಗಿಯಲ್ಲಿ ಬಿಜೆಪಿ, ಜೆಡಿಎಸ್ ಪಕ್ಷದ ಮೈತ್ರಿ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಜೆಡಿಎಸ್ ವರಿಷ್ಠ ದೇವೇಗೌಡ, ಈ ಕುರಿತು ಎಚ್‌.ಡಿ.ಕುಮಾರಸ್ವಾಮಿ ಮತ್ತು ಪಕ್ಷದ ಉನ್ನತ ಮಟ್ಟದ ಪದಾಧಿಕಾರಿಗಳು ತೀರ್ಮಾನಿಸುತ್ತಾರೆ. ಎಚ್.ಡಿ.ಕುಮಾರಸ್ವಾಮಿ ಅವರ ಜತೆ ಈಗಾಗಲೇ ಮಲ್ಲಿಕಾರ್ಜುನ ಖರ್ಗೆಯವರು ಅಧಿಕಾರ ಹಿಡಿಯುವ ಸಂಬಂಧ ಮಾತುಕತೆ ನಡೆಸಿದ್ದಾರೆ. ಆದರೆ ಸ್ಥಳೀಯ ಮುಖಂಡರ ಅಭಿಪ್ರಾಯ ಪಡೆಯಬೇಕು. ಅವರ ಅಭಿಪ್ರಾಯ ಆಧರಿಸಿ ತೀರ್ಮಾನಿಸಲು ಹೇಳಿದ್ದೇನೆ. ಆದರೆ ಬಿಜೆಪಿ ನಾಯಕರು ಯಾರೂ ನನ್ನ ಜೊತೆ ಮಾತನಾಡಿಲ್ಲ. ಎಚ್.ಡಿ.ಕುಮಾರಸ್ವಾಮಿ ಅವರ ಬಳಿ ಮಾತನಾಡಿರಬಹುದು ಎಂದು ಸ್ಪಷ್ಟಪಡಿಸಿದರು.

ಕೋಲಾರ ಶಾಸಕ ಶ್ರೀನಿವಾಸಗೌಡ ಹೇಳಿಕೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಮಾಜಿ ಪ್ರಧಾನಿ ದೇವೇಗೌಡ, ಶಾಸಕ ಶ್ರೀನಿವಾಸಗೌಡ ಪಕ್ಷಕ್ಕೆ ಡ್ಯಾಮೇಜ್ ಆಗುವ ರೀತಿ ಮಾತನಾಡಿದ್ದಾರೆ. ಅವರ ವಿರುದ್ಧ ಪಕ್ಷದ ರಾಜ್ಯಾಧ್ಯಕ್ಷರು ಕ್ರಮಕೈಗೊಳ್ಳುತ್ತಾರೆ ಎಂದಷ್ಟೇ ತಿಳಿಸಿದರು.

ಇದನ್ನೂ ಓದಿ: 

ಕಲಬುರಗಿ: ಬಿಜೆಪಿ ಅಧಿಕಾರ ಹಿಡಿಯಲು ಜೆಡಿಎಸ್ ಸಹಕಾರ ಕೇಳುತ್ತಿದ್ದೇವೆ: ರವಿಕುಮಾರ್

ಕಲಬುರಗಿ ಪಾಲಿಕೆ ಚುನಾವಣೆ: ಸ್ಪಷ್ಟ ಬಹುಮತ ನೀಡದ ಮತದಾರ; ಟಿಕೆಟ್ ಹಂಚಿಕೆ, ಕಾರ್ಯಕರ್ತರ ಅಸಮಾಧಾನ ಕಾರಣ

(Former PM HD Deve Gowda wondered about 4 ward win in Kalaburagi Municipal Elections 2021 JDS winners who flew from Kalaburagi to Bengaluru)

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್