AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧೆ; 8-9 ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್: ದೇವೇಗೌಡ

ಜೆಡಿಎಸ್ ಮಹಿಳಾ ಸಮಾವೇಶಕ್ಕೆ ಜೆಡಿಎಸ್‌ನ ಏಕೈಕ ಮಹಿಳಾ ಶಾಸಕಿ ಅನಿತಾ ಕುಮಾರಸ್ವಾಮಿ ಗೈರಾಗಿದ್ದರು. ಇದು ಹಲವು ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರಿನ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧೆ; 8-9 ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್: ದೇವೇಗೌಡ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
TV9 Web
| Edited By: |

Updated on: Sep 02, 2021 | 7:44 PM

Share

ಬೆಂಗಳೂರು: ಕಾಲ ಬಂದಾಗ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುತ್ತೇನೆ. ಕಾಂಗ್ರೆಸ್​ನವರು ಏನೇನು ಮಾತಾಡುತ್ತಿದ್ದಾರೆಂದು ಗೊತ್ತಿದೆ. ಬೆಂಗಳೂರಿನ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಕಣಕ್ಕೆ ಇಳಿಯಲಿದ್ದು, ಬೆಂಗಳೂರಿನ ಬೆಂಗಳೂರಿನಲ್ಲಿ 8 ರಿಂದ 9 ಮಹಿಳೆಯರಿಗೆ ಟಿಕೆಟ್ ನೀಡುತ್ತೇವೆ ಎಂದು ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದರು.

ಎಚ್.ಡಿ.ದೇವೇಗೌಡರು ಹೋದರೆ ಜೆಡಿಎಸ್ ಪಕ್ಷವೇ ಹೋಗುತ್ತೆಂದು ಅಣಕ ಮಾಡುತ್ತಾರೆ. ಆದರೆ ನೀವು ಯಾರೂ ದೇವೇಗೌಡರನ್ನು ನೋಡಿ ಪಕ್ಷಕ್ಕೆ ಬಂದಿಲ್ಲ. ಕಾರ್ಯಕರ್ತರಿಂದಲೇ ಜೆಡಿಎಸ್ ಪಕ್ಷ ಇರುವುದು. ಮುಸ್ಲಿಂ ಸಮುದಾಯವನ್ನು ಜೆಡಿಎಸ್ ಕೈಬಿಡುವುದಿಲ್ಲ. ನಮಗೆ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲರೂ ಒಂದೇ, ಇದನ್ನು ನಾನು ಸಂಸತ್ತಿನಲ್ಲಿಯೂ ಹೇಳಿದ್ದೇನೆ ಎಂದು ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ಮಹಿಳಾ ಸಮಾವೇಶದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ದೃಢ ವಿಶ್ವಾಸ ವ್ಯಕ್ತಪಡಿಸಿದರು.

ಹೇಗೆ ಪಕ್ಷ ಸಂಘಟನೆ ಮಾಡಬೇಕು ಎಂದು ಎಲ್ಲರಿಗೂ ಸೂಚನೆ ಕೊಟ್ಟಿದ್ದೇನೆ. ರಾಜಕೀಯವಾಗಿ ನಮ್ಮ ಶಕ್ತಿ ಪ್ರದರ್ಶನ ಮಾಡಲು ಮಹಿಳೆಯರು ಆಗಮಿಸಿದ್ದೀರಿ. ನಾನು ಸಿಎಂ ಆಗೋದಿಕ್ಕೆ ಮುಂಚೆಯೇ ಹೆಣ್ಣು ಮಕ್ಕಳಿಗೆ ಏನೂ ಮಾಡಬೇಕು ಎಂದು ಚಿಂತನೆ ಮಾಡಿ ಮೀಸಲಾತಿಗೆ ಹೋರಾಟ ಮಾಡಿದ್ದೆ ಎಂದು ಅವರು ಸಮಾವೇಶದಲ್ಲಿ ನೆರೆದ ಮಹಿಳೆಯರನ್ನುದ್ದೇಶಿಸಿ ತಿಳಿಸಿದರು.

ಆದರೆ ಜೆಡಿಎಸ್ ಮಹಿಳಾ ಸಮಾವೇಶಕ್ಕೆ ಜೆಡಿಎಸ್‌ನ ಏಕೈಕ ಮಹಿಳಾ ಶಾಸಕಿ ಅನಿತಾ ಕುಮಾರಸ್ವಾಮಿ ಗೈರಾಗಿದ್ದರು. ಇದು ಹಲವು ಕುತೂಹಲಕ್ಕೆ ಕಾರಣವಾಗಿದೆ.

ಅರುಣ್ ಸಿಂಗ್ ಹೇಳಿಕೆಗೆ ತಿರುಗೇಟು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಜೆಡಿಎಸ್ ಮುಳುಗುತ್ತಿರುವ ಹಡಗು ಎಂಬ ಹೇಳಿಕೆಗೆ ಜೆಡಿಎಸ್ ನಾಯಕ ಹೆಚ್ ಕೆ‌ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಬಿಜೆಪಿ ಅದೇ ಹಡಗಿನ ಜತೆ ಎರಡು ಬಾರಿ ಸರ್ಕಾರ ಮಾಡಿದೆ. ಮುಂದಿನ ಚುನಾವಣೆಯಲ್ಲಿ ಅವರಿಗೆ ನಮ್ಮ ಶಕ್ತಿ ತೋರಿಸುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಇದನ್ನೂ ಓದಿ:  

ಜೆಡಿಎಸ್ ಮುಳುಗುತ್ತಿದೆ, ಬಿಜೆಪಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳಲ್ಲ: ಮೈಸೂರಿನಲ್ಲಿ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

ಯಾರು ಯಾರ ಫ್ಯೂಸ್ ಕಿತ್ತಾಕಿದ್ದಾರೆಂದು ಮುಂದೆ ಚುನಾವಣೆಯಲ್ಲಿ ಗೊತ್ತಾಗುತ್ತೆ; ಕುಮಾರಸ್ವಾಮಿಗೆ ಸಿದ್ದರಾಮಯ್ಯ ತಿರುಗೇಟು

(Former PM HD DeveGowda says JDS competes in all the constituencies of Bengaluru and 8 to 9 tickets will given to women)

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್