AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಕವಿ ಕುವೆಂಪು, ನಾಡಗೀತೆಗೆ ಅಪಮಾನ ಆರೋಪ; ರೋಹಿತ್ ಚಕ್ರತೀರ್ಥ, ಲಕ್ಷ್ಮಣ ಆಕಾಶೆ ಕಾರ್ಕಳ ವಿರುದ್ಧ ದೂರು ದಾಖಲಿಸಿದ ವಕೀಲರ ಸಂಘದ ಮಾಜಿ ಅಧ್ಯಕ್ಷ ರಂಗನಾಥ್

ನಾಡು ನುಡಿಯ ಹೆಮ್ಮೆ ಕುವೆಂಪುರ ಬಗ್ಗೆ ಅವಹೇಳನ ರೀತಿಯಲ್ಲಿ ಬರೆದು ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿತ್ತು. ಲಕ್ಷ್ಮಣ ಎಂಬುವವರು ಕುವೆಂಪುರ ಬಗ್ಗೆ ಕೆಟ್ಟ ಪದದಿಂದ ನಿಂದನೆ ಮಾಡಿದ್ದಾರೆ ಎಂಬ ಆರೋಪವಿದೆ. ಹೀಗಾಗಿ ಇಬ್ಬರ ವಿರುದ್ದ ಕ್ರಮ ಕೈಗೊಳ್ಳುವಂತೆ ರಂಗನಾಥ್ ನೇತೃತ್ವದಲ್ಲಿ ದೂರು ನೀಡಲಾಗಿದೆ.

ರಾಷ್ಟ್ರಕವಿ ಕುವೆಂಪು, ನಾಡಗೀತೆಗೆ ಅಪಮಾನ ಆರೋಪ; ರೋಹಿತ್ ಚಕ್ರತೀರ್ಥ, ಲಕ್ಷ್ಮಣ ಆಕಾಶೆ ಕಾರ್ಕಳ ವಿರುದ್ಧ ದೂರು ದಾಖಲಿಸಿದ ವಕೀಲರ ಸಂಘದ ಮಾಜಿ ಅಧ್ಯಕ್ಷ ರಂಗನಾಥ್
ರೋಹಿತ್ ಚಕ್ರತೀರ್ಥ, ಲಕ್ಷ್ಮಣ ಆಕಾಶೆ ಕಾರ್ಕಳ ವಿರುದ್ಧ ದೂರು ದಾಖಲಿಸಿದ ವಕೀಲರ ಸಂಘದ ಮಾಜಿ ಅಧ್ಯಕ್ಷ ರಂಗನಾಥ್
TV9 Web
| Edited By: |

Updated on:May 26, 2022 | 10:35 PM

Share

ಬೆಂಗಳೂರು: ರಾಷ್ಟ್ರಕವಿ ಕುವೆಂಪುರವರ ಬಗ್ಗೆ ಅವಹೇಳನ ಮಾಡಿ ನಾಡಗೀತೆಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ರೋಹಿತ್ ಚಕ್ರತೀರ್ಥ, ಲಕ್ಷ್ಮಣ ಆಕಾಶೆ ಕಾರ್ಕಳ ವಿರುದ್ಧ ದೂರು ದಾಖಲಿಸಲಾಗಿದೆ. ವಕೀಲರ ಸಂಘದ ಮಾಜಿ ಅಧ್ಯಕ್ಷ ರಂಗನಾಥ್ ನೇತೃತ್ವದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್‌ ರೆಡ್ಡಿಗೆ ದೂರು ಸಲ್ಲಿಸಲಾಗಿದೆ.

ನಾಡು ನುಡಿಯ ಹೆಮ್ಮೆ ಕುವೆಂಪುರ ಬಗ್ಗೆ ಅವಹೇಳನ ರೀತಿಯಲ್ಲಿ ಬರೆದು ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿತ್ತು. ಲಕ್ಷ್ಮಣ ಎಂಬುವವರು ಕುವೆಂಪುರ ಬಗ್ಗೆ ಕೆಟ್ಟ ಪದದಿಂದ ನಿಂದನೆ ಮಾಡಿದ್ದಾರೆ ಎಂಬ ಆರೋಪವಿದೆ. ಹೀಗಾಗಿ ಸಮಾಜ ಸ್ವಾಸ್ಥ ಕೆಡುವ ಪ್ರಚೋದಿತ ಹಿನ್ನಲೆ ಇಬ್ಬರ ವಿರುದ್ದ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್‌ ರೆಡ್ಡಿಗೆ ರಂಗನಾಥ್ ನೇತೃತ್ವದಲ್ಲಿ ದೂರು ನೀಡಲಾಗಿದೆ.

ಕನ್ನಡ ಧ್ವಜವನ್ನು ಒಳ ಉಡುಪಿಗೆ ಹೋಲಿಸಿದ್ದ ರೋಹಿತ್ ಚಕ್ರತೀರ್ಥ, ವಿದ್ಯಾರ್ಥಿಗಳು ಏನ್ನು ಕಲಿಯಬೇಕು ಎಂಬುವುದನ್ನು ನಿರ್ಧರಿಸಬೇಕೆ? ಬೆಂಗಳೂರು: ರೋಹಿತ್ ಚಕ್ರತೀರ್ಥ ಎಂಬ‌ ವಿಕೃತ ಮನಸ್ಸಿನ ವ್ಯಕ್ತಿ 2017ರಲ್ಲಿ ನಾಡಗೀತೆಯನ್ನು ಅಪಹಾಸ್ಯ ಮಾಡಿ ಬರೆದಿದ್ದ ಪದ್ಯವಿದು. ನಾಡಗೀತೆಗೆ ಅವಮಾನ ಮಾಡಿದ, ಕನ್ನಡ ಧ್ವಜವನ್ನು ಒಳ ಉಡುಪಿಗೆ ಹೋಲಿಸಿದ ರೋಹಿತ್ ಚಕ್ರತೀರ್ಥ ಎಂಬ ಮತಾಂಧ ಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ಎಂದು ಟ್ವಿಟರ್ನಲ್ಲಿ ಸರ್ಕಾರದ ವಿರುದ್ಧ ದಿನೇಶ್ ಗುಂಡೂರಾವ್ ಕಿಡಿ ಕಾಡಿದ್ದಾರೆ.

ಸರ್ಕಾರ ಈ ಶತಮೂರ್ಖನಿಗೆ ಪಠ್ಯ ಪರಿಷ್ಕರಿಸುವ ಜವಾಬ್ದಾರಿ ನೀಡಿದೆ. ಇಂತಹ ವ್ಯಕ್ತಿ ಪಠ್ಯವನ್ನು ನಿರ್ಧರಿಸುವುದು ದುರಂತವಲ್ಲವೆ? ರೋಹಿತ್ ಚಕ್ರತೀರ್ಥ ಎಂಬ‌ ಈ ವಿಕೃತ ಮನಸ್ಸಿನ ವ್ಯಕ್ತಿ 2017ರಲ್ಲಿ ನಾಡಗೀತೆಯನ್ನು ಅಪಹಾಸ್ಯ ಮಾಡಿ ಬರೆದಿದ್ದ. ನಮ್ಮ ಕನ್ನಡದ ಬಾವುಟವನ್ನು ಒಳ ಉಡುಪಿಗೆ ಹೋಲಿಸಿದ್ದ. ನಾಡಗೀತೆಗೆ ಅಪಮಾನಿಸಿದ್ದ ಈ ಮತಾಂಧ ಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷ. ಇಂಥವನನ್ನ ಅಧ್ಯಕ್ಷನನ್ನಾಗಿ ಮಾಡಿರುವುದು ನಾಚಿಕೆಗೇಡು. ಅಧ್ಯಯನ ಇಲ್ಲದ, ಅನುಭವ ಇಲ್ಲದ ರೋಹಿತ್‌ನಂಥವರು ವಿದ್ಯಾರ್ಥಿಗಳು ಏನ್ನು ಕಲಿಯಬೇಕು ಎಂದು ನಿರ್ಧರಿಸಬೇಕೆ? ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕಲಿಕಾ ವಿಷಯವನ್ನು ಇಂತಹ ವ್ಯಕ್ತಿ ನಿರ್ಧರಿಸಲು ಹೊರಟಿರುವುದು ವಿಪರ್ಯಾಸ ಎಂದು ಆಕ್ರೋಶ ಹೊರ ಹಾಕಿದ್ದಾರೆ.

Published On - 10:35 pm, Thu, 26 May 22

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು