AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​ಎಸ್​ಆರ್​​ ಲೇಔಟ್​ನಿಂದ ಅಪಹರಣಕ್ಕೀಡಾಗಿದ್ದವರ ರಕ್ಷಣೆ: ನಾಲ್ವರು ವಶಕ್ಕೆ

ಬೆಂಗಳೂರಿನ HSR ಲೇಔಟ್​ನಿಂದ ಅಪಹರಣಕ್ಕೀಡಾಗಿದ್ದ ನಂದನ್, ಕಾರ್ತಿಕ್ ರಕ್ಷಿಸಿ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಟಿವಿ9ಗೆ ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ ಹೇಳಿದ್ದಾರೆ.

ಹೆಚ್​ಎಸ್​ಆರ್​​  ಲೇಔಟ್​ನಿಂದ ಅಪಹರಣಕ್ಕೀಡಾಗಿದ್ದವರ ರಕ್ಷಣೆ: ನಾಲ್ವರು ವಶಕ್ಕೆ
ಅಪಹರಣ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Jul 15, 2023 | 8:10 PM

Share

ಬೆಂಗಳೂರು: ನಗರದ HSR ಲೇಔಟ್​ನಿಂದ ಅಪಹರಣಕ್ಕೀಡಾಗಿದ್ದವರನ್ನು ರಕ್ಷಣೆ ಮಾಡುವ ಮೂಲಕ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ನಂದನ್, ಕಾರ್ತಿಕ್ ರಕ್ಷಣೆಗೊಳಗಾದವರು. ಈ ಪ್ರಕರಣ ಕುರಿತಾಗಿ ಟಿವಿ9ಗೆ ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ ಪ್ರತಿಕ್ರಿಯೆ ನೀಡಿದ್ದು, ನಿನ್ನೆ ರಾತ್ರಿ 12ಗಂಟೆ ಸುಮಾರಿಗೆ ವಿಡಿಯೋ ಮೂಲಕ ಮಾಹಿತಿ ಸಿಕ್ಕಿತ್ತು. ತಕ್ಷಣ ಕಿಡ್ನ್ಯಾಪ್ ಕೇಸ್ ದಾಖಲಿಸಿ ರಕ್ಷಣೆಗಾಗಿ 2 ತಂಡ ರಚಿಸಲಾಗಿತ್ತು ಎಂದರು.

ಸ್ನೇಹಿತರ ನಡುವೆ ಹಣಕಾಸಿನ ವ್ಯವಹಾರ ಹಿನ್ನೆಲೆ ಗಲಾಟೆಯಾಗಿತ್ತು. ಹಣ ಕೊಡಬೇಕಾಗಿದ್ದವನನ್ನು ಬಲವಂತವಾಗಿ ಗ್ಯಾಂಗ್ ಎಳೆದೊಯ್ದಿದೆ. ಎಲ್ಲರೂ ಆಂಧ್ರ ಮೂಲದವರಾಗಿದ್ದಾರೆ, ಅಪಹರಕ್ಕೀಡಾದವರ ರಕ್ಷಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಪ್ರತೇಕ ಘಟನೆ: ಕಚೇರಿಯಲ್ಲೇ ನೋಡಲ್ ಅಧಿಕಾರಿ ಆತ್ಮಹತ್ಯೆ, ಮನೆಯಲ್ಲಿ ನೇಣಿಗೆ ಶರಣಾದ ಶಿಕ್ಷಕಿ

ಪುಷ್ಪ ಸಿನಿಮಾ ಮಾದರಿಯಲ್ಲಿ ಗಾಂಜಾ ಪೂರೈಸುತ್ತಿದ್ದ ಗ್ಯಾಂಗ್​​​ ಬಂಧನ

ಪುಷ್ಪ ಸಿನಿಮಾ ಮಾದರಿಯಲ್ಲಿ ಗಾಂಜಾ ಪೂರೈಸುತ್ತಿದ್ದ ಗ್ಯಾಂಗ್​​ ಒಂದನ್ನು​ ಪೊಲೀಸರ ಬಂಧಿಸಿದ್ದಾರೆ. ಕುಖ್ಯಾತ ಗಾಂಜಾ ಪೆಡ್ಲರ್​​ ಚಾಂದ್​​​​ ಸಹೋದರ ಸಲ್ಮಾನ್​ ಪಾಷಾ, ಚಂದ್ರಭಾನು ಬಿಷ್ಣೋಯ್​​, ಲಕ್ಷ್ಮೀಮೋಹನ್ ದಾಸ್ ಬಂಧಿತರು. ಸಿಸಿಬಿ ಮಹಿಳಾ ಸಂರಕ್ಷಕ ದಳದ ಕಾರ್ಯಾಚರಣೆ ನಡೆಸಿ ಆರೋಪಿಗಳಿಂದ 12 ಕೋಟಿ ರೂ. ಮೌಲ್ಯದ 1,500 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ಹಾಸನ: ಮಲಗಿದ್ದಲ್ಲೇ ನಿಗೂಢವಾಗಿ ಸಾವನ್ನಪ್ಪಿದ ಉತ್ತರ ಪ್ರದೇಶ ಮೂಲದ ಯುವಕರು

ಪುಷ್ಪ ಸಿನಿಮಾ ಮಾದರಿಯಲ್ಲಿ ​​ಆಂಧ್ರದ ವಿಶಾಖಪಟ್ಟಣದಿಂದ ಬೆಂಗಳೂರಿಗೆ ಗಾಂಜಾ ಪೂರೈಕೆ ಮಾಡಲಾಗುತ್ತಿತ್ತು. ಪಾಷಾ ವಿಚಾರಣೆ ವೇಳೆ ಗಾಂಜಾ ಪೂರೈಸುತ್ತಿದ್ದ ಬಗ್ಗೆ ಮಾಹಿತಿ ನೀಡಿದ್ದಾನೆ. ಗಾಂಜಾ ಪೂರೈಕೆಗೆಂದೇ ಗೂಡ್ಸ್ ವಾಹನದ ಚಾರ್ಸಿ ಮಾರ್ಪಾಡು ಮಾಡಲಾಗಿದೆ. ಅದರಲ್ಲಿ ಗಾಂಜಾ ಪ್ಯಾಕ್​ಗಳನ್ನು ಜೋಡಿಸಿ ಕ್ಲೋಸ್​​ ಮಾಡುತ್ತಿದ್ದರು. ಬಳಿಕ ಅದರ ಮೇಲೆ ಖಾಲಿ ಕಾಟನ್​ ಬಾಕ್ಸ್​ಗಳನ್ನು ಇಟ್ಟು ಸಾಗಣೆ ಮಾಡುತ್ತಿದ್ದರು. ಈ ಬಗ್ಗೆ ಕಳೆದ 3 ವಾರದಿಂದ ಸಿಸಿಬಿ ಪೊಲೀಸರು ಮಾಹಿತಿ ಕಲೆ ಹಾಕಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:19 pm, Sat, 15 July 23

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ