AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​ಎಸ್​ಆರ್​​ ಲೇಔಟ್​ನಿಂದ ಅಪಹರಣಕ್ಕೀಡಾಗಿದ್ದವರ ರಕ್ಷಣೆ: ನಾಲ್ವರು ವಶಕ್ಕೆ

ಬೆಂಗಳೂರಿನ HSR ಲೇಔಟ್​ನಿಂದ ಅಪಹರಣಕ್ಕೀಡಾಗಿದ್ದ ನಂದನ್, ಕಾರ್ತಿಕ್ ರಕ್ಷಿಸಿ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಟಿವಿ9ಗೆ ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ ಹೇಳಿದ್ದಾರೆ.

ಹೆಚ್​ಎಸ್​ಆರ್​​  ಲೇಔಟ್​ನಿಂದ ಅಪಹರಣಕ್ಕೀಡಾಗಿದ್ದವರ ರಕ್ಷಣೆ: ನಾಲ್ವರು ವಶಕ್ಕೆ
ಅಪಹರಣ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Jul 15, 2023 | 8:10 PM

Share

ಬೆಂಗಳೂರು: ನಗರದ HSR ಲೇಔಟ್​ನಿಂದ ಅಪಹರಣಕ್ಕೀಡಾಗಿದ್ದವರನ್ನು ರಕ್ಷಣೆ ಮಾಡುವ ಮೂಲಕ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ನಂದನ್, ಕಾರ್ತಿಕ್ ರಕ್ಷಣೆಗೊಳಗಾದವರು. ಈ ಪ್ರಕರಣ ಕುರಿತಾಗಿ ಟಿವಿ9ಗೆ ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ ಪ್ರತಿಕ್ರಿಯೆ ನೀಡಿದ್ದು, ನಿನ್ನೆ ರಾತ್ರಿ 12ಗಂಟೆ ಸುಮಾರಿಗೆ ವಿಡಿಯೋ ಮೂಲಕ ಮಾಹಿತಿ ಸಿಕ್ಕಿತ್ತು. ತಕ್ಷಣ ಕಿಡ್ನ್ಯಾಪ್ ಕೇಸ್ ದಾಖಲಿಸಿ ರಕ್ಷಣೆಗಾಗಿ 2 ತಂಡ ರಚಿಸಲಾಗಿತ್ತು ಎಂದರು.

ಸ್ನೇಹಿತರ ನಡುವೆ ಹಣಕಾಸಿನ ವ್ಯವಹಾರ ಹಿನ್ನೆಲೆ ಗಲಾಟೆಯಾಗಿತ್ತು. ಹಣ ಕೊಡಬೇಕಾಗಿದ್ದವನನ್ನು ಬಲವಂತವಾಗಿ ಗ್ಯಾಂಗ್ ಎಳೆದೊಯ್ದಿದೆ. ಎಲ್ಲರೂ ಆಂಧ್ರ ಮೂಲದವರಾಗಿದ್ದಾರೆ, ಅಪಹರಕ್ಕೀಡಾದವರ ರಕ್ಷಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಪ್ರತೇಕ ಘಟನೆ: ಕಚೇರಿಯಲ್ಲೇ ನೋಡಲ್ ಅಧಿಕಾರಿ ಆತ್ಮಹತ್ಯೆ, ಮನೆಯಲ್ಲಿ ನೇಣಿಗೆ ಶರಣಾದ ಶಿಕ್ಷಕಿ

ಪುಷ್ಪ ಸಿನಿಮಾ ಮಾದರಿಯಲ್ಲಿ ಗಾಂಜಾ ಪೂರೈಸುತ್ತಿದ್ದ ಗ್ಯಾಂಗ್​​​ ಬಂಧನ

ಪುಷ್ಪ ಸಿನಿಮಾ ಮಾದರಿಯಲ್ಲಿ ಗಾಂಜಾ ಪೂರೈಸುತ್ತಿದ್ದ ಗ್ಯಾಂಗ್​​ ಒಂದನ್ನು​ ಪೊಲೀಸರ ಬಂಧಿಸಿದ್ದಾರೆ. ಕುಖ್ಯಾತ ಗಾಂಜಾ ಪೆಡ್ಲರ್​​ ಚಾಂದ್​​​​ ಸಹೋದರ ಸಲ್ಮಾನ್​ ಪಾಷಾ, ಚಂದ್ರಭಾನು ಬಿಷ್ಣೋಯ್​​, ಲಕ್ಷ್ಮೀಮೋಹನ್ ದಾಸ್ ಬಂಧಿತರು. ಸಿಸಿಬಿ ಮಹಿಳಾ ಸಂರಕ್ಷಕ ದಳದ ಕಾರ್ಯಾಚರಣೆ ನಡೆಸಿ ಆರೋಪಿಗಳಿಂದ 12 ಕೋಟಿ ರೂ. ಮೌಲ್ಯದ 1,500 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ಹಾಸನ: ಮಲಗಿದ್ದಲ್ಲೇ ನಿಗೂಢವಾಗಿ ಸಾವನ್ನಪ್ಪಿದ ಉತ್ತರ ಪ್ರದೇಶ ಮೂಲದ ಯುವಕರು

ಪುಷ್ಪ ಸಿನಿಮಾ ಮಾದರಿಯಲ್ಲಿ ​​ಆಂಧ್ರದ ವಿಶಾಖಪಟ್ಟಣದಿಂದ ಬೆಂಗಳೂರಿಗೆ ಗಾಂಜಾ ಪೂರೈಕೆ ಮಾಡಲಾಗುತ್ತಿತ್ತು. ಪಾಷಾ ವಿಚಾರಣೆ ವೇಳೆ ಗಾಂಜಾ ಪೂರೈಸುತ್ತಿದ್ದ ಬಗ್ಗೆ ಮಾಹಿತಿ ನೀಡಿದ್ದಾನೆ. ಗಾಂಜಾ ಪೂರೈಕೆಗೆಂದೇ ಗೂಡ್ಸ್ ವಾಹನದ ಚಾರ್ಸಿ ಮಾರ್ಪಾಡು ಮಾಡಲಾಗಿದೆ. ಅದರಲ್ಲಿ ಗಾಂಜಾ ಪ್ಯಾಕ್​ಗಳನ್ನು ಜೋಡಿಸಿ ಕ್ಲೋಸ್​​ ಮಾಡುತ್ತಿದ್ದರು. ಬಳಿಕ ಅದರ ಮೇಲೆ ಖಾಲಿ ಕಾಟನ್​ ಬಾಕ್ಸ್​ಗಳನ್ನು ಇಟ್ಟು ಸಾಗಣೆ ಮಾಡುತ್ತಿದ್ದರು. ಈ ಬಗ್ಗೆ ಕಳೆದ 3 ವಾರದಿಂದ ಸಿಸಿಬಿ ಪೊಲೀಸರು ಮಾಹಿತಿ ಕಲೆ ಹಾಕಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:19 pm, Sat, 15 July 23

ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ