AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​ಎಸ್​ಆರ್​​ ಲೇಔಟ್​ನಿಂದ ಅಪಹರಣಕ್ಕೀಡಾಗಿದ್ದವರ ರಕ್ಷಣೆ: ನಾಲ್ವರು ವಶಕ್ಕೆ

ಬೆಂಗಳೂರಿನ HSR ಲೇಔಟ್​ನಿಂದ ಅಪಹರಣಕ್ಕೀಡಾಗಿದ್ದ ನಂದನ್, ಕಾರ್ತಿಕ್ ರಕ್ಷಿಸಿ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಟಿವಿ9ಗೆ ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ ಹೇಳಿದ್ದಾರೆ.

ಹೆಚ್​ಎಸ್​ಆರ್​​  ಲೇಔಟ್​ನಿಂದ ಅಪಹರಣಕ್ಕೀಡಾಗಿದ್ದವರ ರಕ್ಷಣೆ: ನಾಲ್ವರು ವಶಕ್ಕೆ
ಅಪಹರಣ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Jul 15, 2023 | 8:10 PM

Share

ಬೆಂಗಳೂರು: ನಗರದ HSR ಲೇಔಟ್​ನಿಂದ ಅಪಹರಣಕ್ಕೀಡಾಗಿದ್ದವರನ್ನು ರಕ್ಷಣೆ ಮಾಡುವ ಮೂಲಕ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ನಂದನ್, ಕಾರ್ತಿಕ್ ರಕ್ಷಣೆಗೊಳಗಾದವರು. ಈ ಪ್ರಕರಣ ಕುರಿತಾಗಿ ಟಿವಿ9ಗೆ ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ ಪ್ರತಿಕ್ರಿಯೆ ನೀಡಿದ್ದು, ನಿನ್ನೆ ರಾತ್ರಿ 12ಗಂಟೆ ಸುಮಾರಿಗೆ ವಿಡಿಯೋ ಮೂಲಕ ಮಾಹಿತಿ ಸಿಕ್ಕಿತ್ತು. ತಕ್ಷಣ ಕಿಡ್ನ್ಯಾಪ್ ಕೇಸ್ ದಾಖಲಿಸಿ ರಕ್ಷಣೆಗಾಗಿ 2 ತಂಡ ರಚಿಸಲಾಗಿತ್ತು ಎಂದರು.

ಸ್ನೇಹಿತರ ನಡುವೆ ಹಣಕಾಸಿನ ವ್ಯವಹಾರ ಹಿನ್ನೆಲೆ ಗಲಾಟೆಯಾಗಿತ್ತು. ಹಣ ಕೊಡಬೇಕಾಗಿದ್ದವನನ್ನು ಬಲವಂತವಾಗಿ ಗ್ಯಾಂಗ್ ಎಳೆದೊಯ್ದಿದೆ. ಎಲ್ಲರೂ ಆಂಧ್ರ ಮೂಲದವರಾಗಿದ್ದಾರೆ, ಅಪಹರಕ್ಕೀಡಾದವರ ರಕ್ಷಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಪ್ರತೇಕ ಘಟನೆ: ಕಚೇರಿಯಲ್ಲೇ ನೋಡಲ್ ಅಧಿಕಾರಿ ಆತ್ಮಹತ್ಯೆ, ಮನೆಯಲ್ಲಿ ನೇಣಿಗೆ ಶರಣಾದ ಶಿಕ್ಷಕಿ

ಪುಷ್ಪ ಸಿನಿಮಾ ಮಾದರಿಯಲ್ಲಿ ಗಾಂಜಾ ಪೂರೈಸುತ್ತಿದ್ದ ಗ್ಯಾಂಗ್​​​ ಬಂಧನ

ಪುಷ್ಪ ಸಿನಿಮಾ ಮಾದರಿಯಲ್ಲಿ ಗಾಂಜಾ ಪೂರೈಸುತ್ತಿದ್ದ ಗ್ಯಾಂಗ್​​ ಒಂದನ್ನು​ ಪೊಲೀಸರ ಬಂಧಿಸಿದ್ದಾರೆ. ಕುಖ್ಯಾತ ಗಾಂಜಾ ಪೆಡ್ಲರ್​​ ಚಾಂದ್​​​​ ಸಹೋದರ ಸಲ್ಮಾನ್​ ಪಾಷಾ, ಚಂದ್ರಭಾನು ಬಿಷ್ಣೋಯ್​​, ಲಕ್ಷ್ಮೀಮೋಹನ್ ದಾಸ್ ಬಂಧಿತರು. ಸಿಸಿಬಿ ಮಹಿಳಾ ಸಂರಕ್ಷಕ ದಳದ ಕಾರ್ಯಾಚರಣೆ ನಡೆಸಿ ಆರೋಪಿಗಳಿಂದ 12 ಕೋಟಿ ರೂ. ಮೌಲ್ಯದ 1,500 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ಹಾಸನ: ಮಲಗಿದ್ದಲ್ಲೇ ನಿಗೂಢವಾಗಿ ಸಾವನ್ನಪ್ಪಿದ ಉತ್ತರ ಪ್ರದೇಶ ಮೂಲದ ಯುವಕರು

ಪುಷ್ಪ ಸಿನಿಮಾ ಮಾದರಿಯಲ್ಲಿ ​​ಆಂಧ್ರದ ವಿಶಾಖಪಟ್ಟಣದಿಂದ ಬೆಂಗಳೂರಿಗೆ ಗಾಂಜಾ ಪೂರೈಕೆ ಮಾಡಲಾಗುತ್ತಿತ್ತು. ಪಾಷಾ ವಿಚಾರಣೆ ವೇಳೆ ಗಾಂಜಾ ಪೂರೈಸುತ್ತಿದ್ದ ಬಗ್ಗೆ ಮಾಹಿತಿ ನೀಡಿದ್ದಾನೆ. ಗಾಂಜಾ ಪೂರೈಕೆಗೆಂದೇ ಗೂಡ್ಸ್ ವಾಹನದ ಚಾರ್ಸಿ ಮಾರ್ಪಾಡು ಮಾಡಲಾಗಿದೆ. ಅದರಲ್ಲಿ ಗಾಂಜಾ ಪ್ಯಾಕ್​ಗಳನ್ನು ಜೋಡಿಸಿ ಕ್ಲೋಸ್​​ ಮಾಡುತ್ತಿದ್ದರು. ಬಳಿಕ ಅದರ ಮೇಲೆ ಖಾಲಿ ಕಾಟನ್​ ಬಾಕ್ಸ್​ಗಳನ್ನು ಇಟ್ಟು ಸಾಗಣೆ ಮಾಡುತ್ತಿದ್ದರು. ಈ ಬಗ್ಗೆ ಕಳೆದ 3 ವಾರದಿಂದ ಸಿಸಿಬಿ ಪೊಲೀಸರು ಮಾಹಿತಿ ಕಲೆ ಹಾಕಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:19 pm, Sat, 15 July 23

Follow Us
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ