AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್ಚರ, ಎಚ್ಚರ; ಕೊರೊನಾ ಮುಗೀತು ಅಂತ ನಿರ್ಲಕ್ಷ್ಯ ಬೇಡ, ಸಿಲಿಕಾನ್ ಸಿಟಿಯಲ್ಲಿ 3 ರೂಪಾಂತರಿ ‘AY.4.2’ ಪತ್ತೆ

ಡೆಲ್ಟಾ ರೂಪಾಂತರಿ ‘AY.4.2’ನಿಂದ ಟೆನ್ಷನ್ ಶುರುವಾಗಿದೆ. ರಾಜ್ಯದಲ್ಲಿ ರೂಪಾಂತರಿ ‘AY.4.2’ನ 7 ಪ್ರಕರಣಗಳು ಪತ್ತೆಯಾಗಿದೆ. 7 ಕೇಸ್‌ನಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೇ 3 ಪ್ರಕರಣಗಳು ಪತ್ತೆಯಾಗಿದೆ.

ಎಚ್ಚರ, ಎಚ್ಚರ; ಕೊರೊನಾ ಮುಗೀತು ಅಂತ ನಿರ್ಲಕ್ಷ್ಯ ಬೇಡ, ಸಿಲಿಕಾನ್ ಸಿಟಿಯಲ್ಲಿ 3 ರೂಪಾಂತರಿ ‘AY.4.2’ ಪತ್ತೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Oct 26, 2021 | 8:23 AM

Share

ಬೆಂಗಳೂರು: ಇನ್ನೇನು ಕೊರೊನಾ ಕಡಿಮೆಯಾಗಿ ಮೊದಲಿನಂತೆ ಜೀವನ ಸಾಗುತ್ತಿರುವ ನಡುವೆ ಈಗ ರಾಜ್ಯದಲ್ಲಿ ಮತ್ತೆ ಕೊರೊನಾ ಪ್ರಕರಣ ಹೆಚ್ಚಾಗುವ ಆತಂಕ ಎದುರಾಗಿದೆ. ಕರ್ನಾಟಕದಲ್ಲಿ ರೂಪಾಂತರಿ ‘AY.4.2’ ಪತ್ತೆಯಾಗಿದೆ. ಈ ರೂಪಾಂತರಿ ‘AY.4.2’ ಡೆಲ್ಟಾಗಿಂತ ವೇಗವಾಗಿ ಹರಡುತ್ತೆ. ಹೀಗಾಗಿ ಕೊರೊನಾ ಕಾಲ ಮುಗಿತು ಅಂತ ಅರಾಮಾಗಿದ್ದ ಜನ ಕೊರೊನಾ ರೂಲ್ಸ್ ಉಲ್ಲಂಘಿಸುತ್ತ ಬೇಕಾಬಿಟ್ಟಿಯಾಗಿ ನಿರ್ಲಕ್ಷ್ಯ ಮಾಡುವಂತಿಲ್ಲ.

ಡೆಲ್ಟಾ ರೂಪಾಂತರಿ ‘AY.4.2’ನಿಂದ ಟೆನ್ಷನ್ ಶುರುವಾಗಿದೆ. ರಾಜ್ಯದಲ್ಲಿ ರೂಪಾಂತರಿ ‘AY.4.2’ನ 7 ಪ್ರಕರಣಗಳು ಪತ್ತೆಯಾಗಿದೆ. 7 ಕೇಸ್‌ನಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೇ 3 ಪ್ರಕರಣಗಳು ಪತ್ತೆಯಾಗಿದೆ. ರಾಜ್ಯದಲ್ಲಿ 3ನೇ ಅಲೆ ಬರುವ ಸಾಧ್ಯತೆ ಇದೆ ಎಂದ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ರಾಜ್ಯದಲ್ಲಿ ಎರಡನೇ ಅಲೆಯಲ್ಲಿ ಡೆಲ್ಟಾ ಅಬ್ಬರಿಸಿತ್ತು. ಈಗ ‘AY.4.2’ನಿಂದ 3ನೇ ಅಲೆ ಬರುವ ಆತಂಕ ಶುರುವಾಗಿದೆ. ಆದರೆ ‘AY.4.2’ನಿಂದ ರಾಜ್ಯದಲ್ಲಿ ಯಾರೂ ಮೃತಪಟ್ಟಿಲ್ಲ. ರೂಪಾಂತರಿ ‘AY.4.2’ ಸೋಂಕಿತರು ಆರೋಗ್ಯವಾಗಿದ್ದಾರೆ ಎಂದು ಟಿವಿ9ಗೆ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ತಿಳಿಸಿದ್ದಾರೆ.

ಬ್ರಿಟನ್, ಯೂರೋಪ್, ರಷ್ಯಾ, ಅಮೆರಿಕದಲ್ಲಿ ‘AY.4.2’ ರೂಪಾಂತರಿಯಿಂದ ಕೊವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಅಲರ್ಟ್ ಆಗಿದ್ದಾರೆ. ರಷ್ಯಾದಲ್ಲಿ 37 ಸಾವಿರಕ್ಕೂ ಹೆಚ್ಚು ‘AY.4.2’ ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ ನವೆಂಬರ್ 7ರವರೆಗೆ ಕಚೇರಿಗಳಿಗೆ ತೆರಳದಂತೆ ಸೂಚನೆ ನವೆಂಬರ್ 7ರ ತನಕ ಕೆಲಸಕ್ಕೆ ಹೋಗದಂತೆ ಆದೇಶ ಹೊರಡಿಸಲಾಗಿದೆ. ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ಬಸ್ ಸಂಚಾರವಿಲ್ಲ, ಜಿಮ್‌ಗಳು ಕ್ಲೋಸ್ ಮಾಡಲಾಗಿದೆ. 11 ದಿನ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ.

ಇನ್ನು ಚೀನಾದ 11 ಕಡೆ ಕೊರೊನಾ ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ 35,000 ಜನರಿಗೆ ಮನೆಯಿಂದ ಹೊರ ಬರದಂತೆ ವಾರ್ನ್ ಮಾಡಲಾಗಿದೆ. ಮನೆಯಿಂದ ಹೊರಗೆ ಬಂದರೆ ಕ್ರಿಮಿನಲ್ ಮೊಕದ್ದಮೆ ಹಾಕುವುದಾಗಿ ಎಚ್ಚರಿಕೆ ನೀಡಲಾಗಿದೆ. ಚೀನಾದಲ್ಲಿಯೂ ಕೊರೊನಾ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಕೊರೊನಾದ ಹೊಸ ರೂಪಾಂತರಿಯೊಂದೇ 3ನೇ ಅಲೆ ಹುಟ್ಟುಹಾಕಲು ಸಾಧ್ಯವಿಲ್ಲ: ಎನ್​ಸಿಡಿಸಿ ನಿರ್ದೇಶಕ ಸುಜೀತ್ ಸಿಂಗ್

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?