AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್ಚರ, ಎಚ್ಚರ; ಕೊರೊನಾ ಮುಗೀತು ಅಂತ ನಿರ್ಲಕ್ಷ್ಯ ಬೇಡ, ಸಿಲಿಕಾನ್ ಸಿಟಿಯಲ್ಲಿ 3 ರೂಪಾಂತರಿ ‘AY.4.2’ ಪತ್ತೆ

ಡೆಲ್ಟಾ ರೂಪಾಂತರಿ ‘AY.4.2’ನಿಂದ ಟೆನ್ಷನ್ ಶುರುವಾಗಿದೆ. ರಾಜ್ಯದಲ್ಲಿ ರೂಪಾಂತರಿ ‘AY.4.2’ನ 7 ಪ್ರಕರಣಗಳು ಪತ್ತೆಯಾಗಿದೆ. 7 ಕೇಸ್‌ನಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೇ 3 ಪ್ರಕರಣಗಳು ಪತ್ತೆಯಾಗಿದೆ.

ಎಚ್ಚರ, ಎಚ್ಚರ; ಕೊರೊನಾ ಮುಗೀತು ಅಂತ ನಿರ್ಲಕ್ಷ್ಯ ಬೇಡ, ಸಿಲಿಕಾನ್ ಸಿಟಿಯಲ್ಲಿ 3 ರೂಪಾಂತರಿ ‘AY.4.2’ ಪತ್ತೆ
ಪ್ರಾತಿನಿಧಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Oct 26, 2021 | 8:23 AM

Share

ಬೆಂಗಳೂರು: ಇನ್ನೇನು ಕೊರೊನಾ ಕಡಿಮೆಯಾಗಿ ಮೊದಲಿನಂತೆ ಜೀವನ ಸಾಗುತ್ತಿರುವ ನಡುವೆ ಈಗ ರಾಜ್ಯದಲ್ಲಿ ಮತ್ತೆ ಕೊರೊನಾ ಪ್ರಕರಣ ಹೆಚ್ಚಾಗುವ ಆತಂಕ ಎದುರಾಗಿದೆ. ಕರ್ನಾಟಕದಲ್ಲಿ ರೂಪಾಂತರಿ ‘AY.4.2’ ಪತ್ತೆಯಾಗಿದೆ. ಈ ರೂಪಾಂತರಿ ‘AY.4.2’ ಡೆಲ್ಟಾಗಿಂತ ವೇಗವಾಗಿ ಹರಡುತ್ತೆ. ಹೀಗಾಗಿ ಕೊರೊನಾ ಕಾಲ ಮುಗಿತು ಅಂತ ಅರಾಮಾಗಿದ್ದ ಜನ ಕೊರೊನಾ ರೂಲ್ಸ್ ಉಲ್ಲಂಘಿಸುತ್ತ ಬೇಕಾಬಿಟ್ಟಿಯಾಗಿ ನಿರ್ಲಕ್ಷ್ಯ ಮಾಡುವಂತಿಲ್ಲ.

ಡೆಲ್ಟಾ ರೂಪಾಂತರಿ ‘AY.4.2’ನಿಂದ ಟೆನ್ಷನ್ ಶುರುವಾಗಿದೆ. ರಾಜ್ಯದಲ್ಲಿ ರೂಪಾಂತರಿ ‘AY.4.2’ನ 7 ಪ್ರಕರಣಗಳು ಪತ್ತೆಯಾಗಿದೆ. 7 ಕೇಸ್‌ನಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೇ 3 ಪ್ರಕರಣಗಳು ಪತ್ತೆಯಾಗಿದೆ. ರಾಜ್ಯದಲ್ಲಿ 3ನೇ ಅಲೆ ಬರುವ ಸಾಧ್ಯತೆ ಇದೆ ಎಂದ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ರಾಜ್ಯದಲ್ಲಿ ಎರಡನೇ ಅಲೆಯಲ್ಲಿ ಡೆಲ್ಟಾ ಅಬ್ಬರಿಸಿತ್ತು. ಈಗ ‘AY.4.2’ನಿಂದ 3ನೇ ಅಲೆ ಬರುವ ಆತಂಕ ಶುರುವಾಗಿದೆ. ಆದರೆ ‘AY.4.2’ನಿಂದ ರಾಜ್ಯದಲ್ಲಿ ಯಾರೂ ಮೃತಪಟ್ಟಿಲ್ಲ. ರೂಪಾಂತರಿ ‘AY.4.2’ ಸೋಂಕಿತರು ಆರೋಗ್ಯವಾಗಿದ್ದಾರೆ ಎಂದು ಟಿವಿ9ಗೆ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ತಿಳಿಸಿದ್ದಾರೆ.

ಬ್ರಿಟನ್, ಯೂರೋಪ್, ರಷ್ಯಾ, ಅಮೆರಿಕದಲ್ಲಿ ‘AY.4.2’ ರೂಪಾಂತರಿಯಿಂದ ಕೊವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಅಲರ್ಟ್ ಆಗಿದ್ದಾರೆ. ರಷ್ಯಾದಲ್ಲಿ 37 ಸಾವಿರಕ್ಕೂ ಹೆಚ್ಚು ‘AY.4.2’ ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ ನವೆಂಬರ್ 7ರವರೆಗೆ ಕಚೇರಿಗಳಿಗೆ ತೆರಳದಂತೆ ಸೂಚನೆ ನವೆಂಬರ್ 7ರ ತನಕ ಕೆಲಸಕ್ಕೆ ಹೋಗದಂತೆ ಆದೇಶ ಹೊರಡಿಸಲಾಗಿದೆ. ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ಬಸ್ ಸಂಚಾರವಿಲ್ಲ, ಜಿಮ್‌ಗಳು ಕ್ಲೋಸ್ ಮಾಡಲಾಗಿದೆ. 11 ದಿನ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ.

ಇನ್ನು ಚೀನಾದ 11 ಕಡೆ ಕೊರೊನಾ ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ 35,000 ಜನರಿಗೆ ಮನೆಯಿಂದ ಹೊರ ಬರದಂತೆ ವಾರ್ನ್ ಮಾಡಲಾಗಿದೆ. ಮನೆಯಿಂದ ಹೊರಗೆ ಬಂದರೆ ಕ್ರಿಮಿನಲ್ ಮೊಕದ್ದಮೆ ಹಾಕುವುದಾಗಿ ಎಚ್ಚರಿಕೆ ನೀಡಲಾಗಿದೆ. ಚೀನಾದಲ್ಲಿಯೂ ಕೊರೊನಾ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಕೊರೊನಾದ ಹೊಸ ರೂಪಾಂತರಿಯೊಂದೇ 3ನೇ ಅಲೆ ಹುಟ್ಟುಹಾಕಲು ಸಾಧ್ಯವಿಲ್ಲ: ಎನ್​ಸಿಡಿಸಿ ನಿರ್ದೇಶಕ ಸುಜೀತ್ ಸಿಂಗ್

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್