ಕೇರಳದಲ್ಲಿ ಆರೋಪಿಯಿಂದ ಹಣ ಪಡೆದ ಆರೋಪ, ಬೆಂಗಳೂರಿನ ಇನ್ಸ್​ಪೆಕ್ಟರ್ ಸಹಿತ ನಾಲ್ವರು ಸಸ್ಪೆಂಡ್

ಕೇರಳ ಪೊಲೀಸರಿಂದ ವೈಟ್​ಫೀಲ್ಡ್ ಸಿಇಎನ್​ ಪೊಲೀಸರನ್ನು ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್​ಪೆಕ್ಟರ್ ಶಿವಪ್ರಕಾಶ್ ಸೇರಿ ನಾಲ್ವರನ್ನು ಅಮಾನತು ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಆದೇಶ ಹೊರಡಿಸಿದ್ದಾರೆ.

ಕೇರಳದಲ್ಲಿ ಆರೋಪಿಯಿಂದ ಹಣ ಪಡೆದ ಆರೋಪ, ಬೆಂಗಳೂರಿನ ಇನ್ಸ್​ಪೆಕ್ಟರ್ ಸಹಿತ ನಾಲ್ವರು ಸಸ್ಪೆಂಡ್
ಕೇರಳದಲ್ಲಿ ಬೆಂಗಳೂರು ಪೊಲೀಸರು ವಶಕ್ಕೆ; ಇನ್ಸ್​ಪೆಕ್ಟರ್ ಸಹಿತ ನಾಲ್ವರು ಸಸ್ಪೆಂಡ್, ನಗರ ಪೊಲೀಸ್ ಆಯುಕ್ತ ದಯಾನಂದ್ ಆದೇಶ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 04, 2023 | 10:56 AM

ಬೆಂಗಳೂರು, ಆ.4: ಕೇರಳ ಪೊಲೀಸರಿಂದ ವೈಟ್​ಫೀಲ್ಡ್ ಸಿಇಎನ್​ ಪೊಲೀಸ(CEN Police)ರನ್ನು ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್​ಪೆಕ್ಟರ್ ಶಿವಪ್ರಕಾಶ್ ಸೇರಿ ನಾಲ್ವರನ್ನು ಅಮಾನತು ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಆದೇಶ ಹೊರಡಿಸಿದ್ದಾರೆ. ಇನ್ಸ್​ಪೆಕ್ಟರ್ ಶಿವಪ್ರಕಾಶ್, ಹೆಡ್ ಕಾನ್ಸ್​ಟೇಬಲ್​ಗಳಾದ ಶಿವಾನಿ, ವಿಜಯ್ ಕುಮಾರ್ ಹಾಗೂ ಕಾನ್ಸ್​ಟೇಬಲ್ ಸಂದೇಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಘಟನೆ ಕುರಿತು ಎಸಿಪಿ ವರದಿ ಆಧರಿಸಿ ಪ್ರಕರಣದ ತನಿಖೆ ಕಾರ್ಯವಿಧಾನದಲ್ಲಿ ಲೋಪ ಹಿನ್ನೆಲೆ ಈ ನಿರ್ಧಾರ ಮಾಡಲಾಗಿದೆ.

ಘಟನೆ ವಿವರ

ಉದ್ಯೋಗ ಕೊಡಿಸುವುದಾಗಿ ಹೇಳಿ ಸಾಫ್ಟ್​ವೇರ್ ಇಂಜಿನಿಯರ್​ ಬಳಿ ಆನ್​ಲೈನ್ ಮೂಲಕ 26 ಲಕ್ಷ ರೂ. ಹಣವನ್ನ ಪಡೆದು ವಂಚನೆ ಮಾಡಿದ ಆರೋಪದ ಹಿನ್ನಲೆ ಚಂದಕ್ ಶ್ರೀಕಾಂತ್ ಎಂಬುವವರು ವೈಟ್ ಫೀಲ್ಡ್ ಸೈಬರ್​ ಠಾಣೆಗೆ ದೂರು ಕೊಟ್ಟಿದ್ದರು. ಈ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಇಎನ್ ಪೊಲೀಸರಿಗೆ ಸಿಕ್ಕ ಸುಳಿವಿನ ಮೇರೆಗೆ ಮಡಿಕೇರಿಯ ಆರೋಪಿ ಐಸಾಕ್ ಬಳಿ ಹೋಗಿ ಪರಿಶೀಲನೆ ನಡೆಸಿದಾಗ ಐಸಾಕ್ ಅಕೌಂಟ್​ನಲ್ಲಿ 2 ಕೋಟಿ ಹಣ ವರ್ಗಾವಣೆ ಆಗಿರುವುದು ಪತ್ತೆಯಾಗಿತ್ತು. ಇದರ ಜಾಡು ಹಿಡಿದು ವೈಟ್ ಫೀಲ್ಡ್ ಸಿಇಎನ್ ಇನ್ಸ್​ಪೆಕ್ಟರ್ ಶಿವಪ್ರಕಾಶ್ ಹಾಗೂ ಅವರ ತಂಡ ಕೇರಳದ ಕೊಚ್ಚಿ ನಗರದ ಕಲ್ಲಂಚೇರಿಗೆ ಹೋಗಿದ್ದರು. ಆಲ್ಲಿ ಆರೋಪಿಗಳಾದ ನೌಶಾದ್ ಹಾಗೂ ಅಕೀಲ್​ ಎಂಬುವವರಿಂದ ಆನ್ ಲೈನ್ ಫ್ರಾಡ್​ ಆಗಿರುವ ಬಗ್ಗೆ ಸಾಕ್ಷಿ ಸಿಕ್ಕಿತ್ತು. ಈ ಹಿನ್ನಲೆ ಅರೆಸ್ಟ್ ಮಾಡಲು ಪೊಲೀಸರು ತೆರಳಿದ್ದರು.

ಇದನ್ನೂ ಓದಿ:ಬೆಂಗಳೂರು ಪೊಲೀಸರ ವಿರುದ್ಧ ಕೇರಳದಲ್ಲಿ ಎಫ್​ಐಆರ್; ಇನ್ಸ್​ಪೆಕ್ಟರ್ ಸೇರಿ ನಾಲ್ವರು ವಶಕ್ಕೆ; ಕಾರಣವೇನು ಗೊತ್ತಾ?

ಆರೋಪಿಯಿಂದಲೇ ಪೊಲೀಸರ ವಿರುದ್ದ ದೂರು

ಇನ್ನು ಈ ವೇಳೆ ಆರೋಪಿ ಅಕೀಲ್​ ಪೊಲೀಸರು ನಮ್ಮ ಬಳಿ ಹಣ ಪಡೆದ ಆರೋಪದ ಮೇಲೆ ಕೇರಳದ ಕಲ್ಲಂಚೇರಿ ಠಾಣೆಯಲ್ಲಿ ದೂರು ನೀಡಿದ್ದ. ಹೌದು, ಎಫ್​ಐಆರ್​ನಲ್ಲಿ ಇನ್ನೋವಾ ಕಾರಿನಲ್ಲಿದ್ದ 3.95 ಲಕ್ಷ ಹಣವನ್ನ ಪಡೆದಿರುವುದಾಗಿ ಉಲ್ಲೇಖ ಮಾಡಲಾಗಿದೆ. ಜೊತೆಗೆ ಆರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ಬಳಿಕ ಜಪ್ತಿ ಮಾಡಬೇಕಿತ್ತು. ಆದರೆ, ಪೊಲೀಸರು ಹಣ ನೀಡದಿದ್ರೆ, ಕ್ರಿಪ್ಟೋ ಕರೆನ್ಸಿ ಪ್ರಕರಣದಲ್ಲಿ ಆರೋಪಿ ಮಾಡುವುದಾಗಿ ನಿಖಿಲ್, ನೌಷಾದ್ ಹಾಗೂ ಅಖಿಲ್​ಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡಿರುವ ಆರೋಪ ಮಾಡಲಾಗಿತ್ತು. ಇದೀಗ ಎಸಿಪಿ ವರದಿ ಆಧರಿಸಿ ನಾಲ್ವರನ್ನು ಅಮಾನತುಗೊಳಿಸಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್