AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ಆರೋಪಿಯಿಂದ ಹಣ ಪಡೆದ ಆರೋಪ, ಬೆಂಗಳೂರಿನ ಇನ್ಸ್​ಪೆಕ್ಟರ್ ಸಹಿತ ನಾಲ್ವರು ಸಸ್ಪೆಂಡ್

ಕೇರಳ ಪೊಲೀಸರಿಂದ ವೈಟ್​ಫೀಲ್ಡ್ ಸಿಇಎನ್​ ಪೊಲೀಸರನ್ನು ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್​ಪೆಕ್ಟರ್ ಶಿವಪ್ರಕಾಶ್ ಸೇರಿ ನಾಲ್ವರನ್ನು ಅಮಾನತು ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಆದೇಶ ಹೊರಡಿಸಿದ್ದಾರೆ.

ಕೇರಳದಲ್ಲಿ ಆರೋಪಿಯಿಂದ ಹಣ ಪಡೆದ ಆರೋಪ, ಬೆಂಗಳೂರಿನ ಇನ್ಸ್​ಪೆಕ್ಟರ್ ಸಹಿತ ನಾಲ್ವರು ಸಸ್ಪೆಂಡ್
ಕೇರಳದಲ್ಲಿ ಬೆಂಗಳೂರು ಪೊಲೀಸರು ವಶಕ್ಕೆ; ಇನ್ಸ್​ಪೆಕ್ಟರ್ ಸಹಿತ ನಾಲ್ವರು ಸಸ್ಪೆಂಡ್, ನಗರ ಪೊಲೀಸ್ ಆಯುಕ್ತ ದಯಾನಂದ್ ಆದೇಶ
Jagadisha B
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 04, 2023 | 10:56 AM

Share

ಬೆಂಗಳೂರು, ಆ.4: ಕೇರಳ ಪೊಲೀಸರಿಂದ ವೈಟ್​ಫೀಲ್ಡ್ ಸಿಇಎನ್​ ಪೊಲೀಸ(CEN Police)ರನ್ನು ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್​ಪೆಕ್ಟರ್ ಶಿವಪ್ರಕಾಶ್ ಸೇರಿ ನಾಲ್ವರನ್ನು ಅಮಾನತು ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಆದೇಶ ಹೊರಡಿಸಿದ್ದಾರೆ. ಇನ್ಸ್​ಪೆಕ್ಟರ್ ಶಿವಪ್ರಕಾಶ್, ಹೆಡ್ ಕಾನ್ಸ್​ಟೇಬಲ್​ಗಳಾದ ಶಿವಾನಿ, ವಿಜಯ್ ಕುಮಾರ್ ಹಾಗೂ ಕಾನ್ಸ್​ಟೇಬಲ್ ಸಂದೇಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಘಟನೆ ಕುರಿತು ಎಸಿಪಿ ವರದಿ ಆಧರಿಸಿ ಪ್ರಕರಣದ ತನಿಖೆ ಕಾರ್ಯವಿಧಾನದಲ್ಲಿ ಲೋಪ ಹಿನ್ನೆಲೆ ಈ ನಿರ್ಧಾರ ಮಾಡಲಾಗಿದೆ.

ಘಟನೆ ವಿವರ

ಉದ್ಯೋಗ ಕೊಡಿಸುವುದಾಗಿ ಹೇಳಿ ಸಾಫ್ಟ್​ವೇರ್ ಇಂಜಿನಿಯರ್​ ಬಳಿ ಆನ್​ಲೈನ್ ಮೂಲಕ 26 ಲಕ್ಷ ರೂ. ಹಣವನ್ನ ಪಡೆದು ವಂಚನೆ ಮಾಡಿದ ಆರೋಪದ ಹಿನ್ನಲೆ ಚಂದಕ್ ಶ್ರೀಕಾಂತ್ ಎಂಬುವವರು ವೈಟ್ ಫೀಲ್ಡ್ ಸೈಬರ್​ ಠಾಣೆಗೆ ದೂರು ಕೊಟ್ಟಿದ್ದರು. ಈ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಇಎನ್ ಪೊಲೀಸರಿಗೆ ಸಿಕ್ಕ ಸುಳಿವಿನ ಮೇರೆಗೆ ಮಡಿಕೇರಿಯ ಆರೋಪಿ ಐಸಾಕ್ ಬಳಿ ಹೋಗಿ ಪರಿಶೀಲನೆ ನಡೆಸಿದಾಗ ಐಸಾಕ್ ಅಕೌಂಟ್​ನಲ್ಲಿ 2 ಕೋಟಿ ಹಣ ವರ್ಗಾವಣೆ ಆಗಿರುವುದು ಪತ್ತೆಯಾಗಿತ್ತು. ಇದರ ಜಾಡು ಹಿಡಿದು ವೈಟ್ ಫೀಲ್ಡ್ ಸಿಇಎನ್ ಇನ್ಸ್​ಪೆಕ್ಟರ್ ಶಿವಪ್ರಕಾಶ್ ಹಾಗೂ ಅವರ ತಂಡ ಕೇರಳದ ಕೊಚ್ಚಿ ನಗರದ ಕಲ್ಲಂಚೇರಿಗೆ ಹೋಗಿದ್ದರು. ಆಲ್ಲಿ ಆರೋಪಿಗಳಾದ ನೌಶಾದ್ ಹಾಗೂ ಅಕೀಲ್​ ಎಂಬುವವರಿಂದ ಆನ್ ಲೈನ್ ಫ್ರಾಡ್​ ಆಗಿರುವ ಬಗ್ಗೆ ಸಾಕ್ಷಿ ಸಿಕ್ಕಿತ್ತು. ಈ ಹಿನ್ನಲೆ ಅರೆಸ್ಟ್ ಮಾಡಲು ಪೊಲೀಸರು ತೆರಳಿದ್ದರು.

ಇದನ್ನೂ ಓದಿ:ಬೆಂಗಳೂರು ಪೊಲೀಸರ ವಿರುದ್ಧ ಕೇರಳದಲ್ಲಿ ಎಫ್​ಐಆರ್; ಇನ್ಸ್​ಪೆಕ್ಟರ್ ಸೇರಿ ನಾಲ್ವರು ವಶಕ್ಕೆ; ಕಾರಣವೇನು ಗೊತ್ತಾ?

ಆರೋಪಿಯಿಂದಲೇ ಪೊಲೀಸರ ವಿರುದ್ದ ದೂರು

ಇನ್ನು ಈ ವೇಳೆ ಆರೋಪಿ ಅಕೀಲ್​ ಪೊಲೀಸರು ನಮ್ಮ ಬಳಿ ಹಣ ಪಡೆದ ಆರೋಪದ ಮೇಲೆ ಕೇರಳದ ಕಲ್ಲಂಚೇರಿ ಠಾಣೆಯಲ್ಲಿ ದೂರು ನೀಡಿದ್ದ. ಹೌದು, ಎಫ್​ಐಆರ್​ನಲ್ಲಿ ಇನ್ನೋವಾ ಕಾರಿನಲ್ಲಿದ್ದ 3.95 ಲಕ್ಷ ಹಣವನ್ನ ಪಡೆದಿರುವುದಾಗಿ ಉಲ್ಲೇಖ ಮಾಡಲಾಗಿದೆ. ಜೊತೆಗೆ ಆರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ಬಳಿಕ ಜಪ್ತಿ ಮಾಡಬೇಕಿತ್ತು. ಆದರೆ, ಪೊಲೀಸರು ಹಣ ನೀಡದಿದ್ರೆ, ಕ್ರಿಪ್ಟೋ ಕರೆನ್ಸಿ ಪ್ರಕರಣದಲ್ಲಿ ಆರೋಪಿ ಮಾಡುವುದಾಗಿ ನಿಖಿಲ್, ನೌಷಾದ್ ಹಾಗೂ ಅಖಿಲ್​ಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡಿರುವ ಆರೋಪ ಮಾಡಲಾಗಿತ್ತು. ಇದೀಗ ಎಸಿಪಿ ವರದಿ ಆಧರಿಸಿ ನಾಲ್ವರನ್ನು ಅಮಾನತುಗೊಳಿಸಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Jagadisha B
Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ