AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ಆರೋಪಿಯಿಂದ ಹಣ ಪಡೆದ ಆರೋಪ, ಬೆಂಗಳೂರಿನ ಇನ್ಸ್​ಪೆಕ್ಟರ್ ಸಹಿತ ನಾಲ್ವರು ಸಸ್ಪೆಂಡ್

ಕೇರಳ ಪೊಲೀಸರಿಂದ ವೈಟ್​ಫೀಲ್ಡ್ ಸಿಇಎನ್​ ಪೊಲೀಸರನ್ನು ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್​ಪೆಕ್ಟರ್ ಶಿವಪ್ರಕಾಶ್ ಸೇರಿ ನಾಲ್ವರನ್ನು ಅಮಾನತು ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಆದೇಶ ಹೊರಡಿಸಿದ್ದಾರೆ.

ಕೇರಳದಲ್ಲಿ ಆರೋಪಿಯಿಂದ ಹಣ ಪಡೆದ ಆರೋಪ, ಬೆಂಗಳೂರಿನ ಇನ್ಸ್​ಪೆಕ್ಟರ್ ಸಹಿತ ನಾಲ್ವರು ಸಸ್ಪೆಂಡ್
ಕೇರಳದಲ್ಲಿ ಬೆಂಗಳೂರು ಪೊಲೀಸರು ವಶಕ್ಕೆ; ಇನ್ಸ್​ಪೆಕ್ಟರ್ ಸಹಿತ ನಾಲ್ವರು ಸಸ್ಪೆಂಡ್, ನಗರ ಪೊಲೀಸ್ ಆಯುಕ್ತ ದಯಾನಂದ್ ಆದೇಶ
Jagadisha B
| Edited By: |

Updated on: Aug 04, 2023 | 10:56 AM

Share

ಬೆಂಗಳೂರು, ಆ.4: ಕೇರಳ ಪೊಲೀಸರಿಂದ ವೈಟ್​ಫೀಲ್ಡ್ ಸಿಇಎನ್​ ಪೊಲೀಸ(CEN Police)ರನ್ನು ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್​ಪೆಕ್ಟರ್ ಶಿವಪ್ರಕಾಶ್ ಸೇರಿ ನಾಲ್ವರನ್ನು ಅಮಾನತು ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಆದೇಶ ಹೊರಡಿಸಿದ್ದಾರೆ. ಇನ್ಸ್​ಪೆಕ್ಟರ್ ಶಿವಪ್ರಕಾಶ್, ಹೆಡ್ ಕಾನ್ಸ್​ಟೇಬಲ್​ಗಳಾದ ಶಿವಾನಿ, ವಿಜಯ್ ಕುಮಾರ್ ಹಾಗೂ ಕಾನ್ಸ್​ಟೇಬಲ್ ಸಂದೇಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಘಟನೆ ಕುರಿತು ಎಸಿಪಿ ವರದಿ ಆಧರಿಸಿ ಪ್ರಕರಣದ ತನಿಖೆ ಕಾರ್ಯವಿಧಾನದಲ್ಲಿ ಲೋಪ ಹಿನ್ನೆಲೆ ಈ ನಿರ್ಧಾರ ಮಾಡಲಾಗಿದೆ.

ಘಟನೆ ವಿವರ

ಉದ್ಯೋಗ ಕೊಡಿಸುವುದಾಗಿ ಹೇಳಿ ಸಾಫ್ಟ್​ವೇರ್ ಇಂಜಿನಿಯರ್​ ಬಳಿ ಆನ್​ಲೈನ್ ಮೂಲಕ 26 ಲಕ್ಷ ರೂ. ಹಣವನ್ನ ಪಡೆದು ವಂಚನೆ ಮಾಡಿದ ಆರೋಪದ ಹಿನ್ನಲೆ ಚಂದಕ್ ಶ್ರೀಕಾಂತ್ ಎಂಬುವವರು ವೈಟ್ ಫೀಲ್ಡ್ ಸೈಬರ್​ ಠಾಣೆಗೆ ದೂರು ಕೊಟ್ಟಿದ್ದರು. ಈ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಇಎನ್ ಪೊಲೀಸರಿಗೆ ಸಿಕ್ಕ ಸುಳಿವಿನ ಮೇರೆಗೆ ಮಡಿಕೇರಿಯ ಆರೋಪಿ ಐಸಾಕ್ ಬಳಿ ಹೋಗಿ ಪರಿಶೀಲನೆ ನಡೆಸಿದಾಗ ಐಸಾಕ್ ಅಕೌಂಟ್​ನಲ್ಲಿ 2 ಕೋಟಿ ಹಣ ವರ್ಗಾವಣೆ ಆಗಿರುವುದು ಪತ್ತೆಯಾಗಿತ್ತು. ಇದರ ಜಾಡು ಹಿಡಿದು ವೈಟ್ ಫೀಲ್ಡ್ ಸಿಇಎನ್ ಇನ್ಸ್​ಪೆಕ್ಟರ್ ಶಿವಪ್ರಕಾಶ್ ಹಾಗೂ ಅವರ ತಂಡ ಕೇರಳದ ಕೊಚ್ಚಿ ನಗರದ ಕಲ್ಲಂಚೇರಿಗೆ ಹೋಗಿದ್ದರು. ಆಲ್ಲಿ ಆರೋಪಿಗಳಾದ ನೌಶಾದ್ ಹಾಗೂ ಅಕೀಲ್​ ಎಂಬುವವರಿಂದ ಆನ್ ಲೈನ್ ಫ್ರಾಡ್​ ಆಗಿರುವ ಬಗ್ಗೆ ಸಾಕ್ಷಿ ಸಿಕ್ಕಿತ್ತು. ಈ ಹಿನ್ನಲೆ ಅರೆಸ್ಟ್ ಮಾಡಲು ಪೊಲೀಸರು ತೆರಳಿದ್ದರು.

ಇದನ್ನೂ ಓದಿ:ಬೆಂಗಳೂರು ಪೊಲೀಸರ ವಿರುದ್ಧ ಕೇರಳದಲ್ಲಿ ಎಫ್​ಐಆರ್; ಇನ್ಸ್​ಪೆಕ್ಟರ್ ಸೇರಿ ನಾಲ್ವರು ವಶಕ್ಕೆ; ಕಾರಣವೇನು ಗೊತ್ತಾ?

ಆರೋಪಿಯಿಂದಲೇ ಪೊಲೀಸರ ವಿರುದ್ದ ದೂರು

ಇನ್ನು ಈ ವೇಳೆ ಆರೋಪಿ ಅಕೀಲ್​ ಪೊಲೀಸರು ನಮ್ಮ ಬಳಿ ಹಣ ಪಡೆದ ಆರೋಪದ ಮೇಲೆ ಕೇರಳದ ಕಲ್ಲಂಚೇರಿ ಠಾಣೆಯಲ್ಲಿ ದೂರು ನೀಡಿದ್ದ. ಹೌದು, ಎಫ್​ಐಆರ್​ನಲ್ಲಿ ಇನ್ನೋವಾ ಕಾರಿನಲ್ಲಿದ್ದ 3.95 ಲಕ್ಷ ಹಣವನ್ನ ಪಡೆದಿರುವುದಾಗಿ ಉಲ್ಲೇಖ ಮಾಡಲಾಗಿದೆ. ಜೊತೆಗೆ ಆರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ಬಳಿಕ ಜಪ್ತಿ ಮಾಡಬೇಕಿತ್ತು. ಆದರೆ, ಪೊಲೀಸರು ಹಣ ನೀಡದಿದ್ರೆ, ಕ್ರಿಪ್ಟೋ ಕರೆನ್ಸಿ ಪ್ರಕರಣದಲ್ಲಿ ಆರೋಪಿ ಮಾಡುವುದಾಗಿ ನಿಖಿಲ್, ನೌಷಾದ್ ಹಾಗೂ ಅಖಿಲ್​ಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡಿರುವ ಆರೋಪ ಮಾಡಲಾಗಿತ್ತು. ಇದೀಗ ಎಸಿಪಿ ವರದಿ ಆಧರಿಸಿ ನಾಲ್ವರನ್ನು ಅಮಾನತುಗೊಳಿಸಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?