AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕಿಂಗ್​ ವಿಚಾರವಾಗಿ ಗಲಾಟೆ: ನಾಲ್ವರಿಗೆ ಚಾಕು ಇರಿತ

ಪಾರ್ಕಿಂಗ್​ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ಹೋಗಿ ವ್ಯಕ್ತಿಯೋರ್ವ ಅಪ್ರಾಪ್ತನೂ ಸೇರಿದಂತೆ ನಾಲ್ವರಿಗೆ ಚಾಕು ಇರಿದಿದ್ದಾನೆ. ಮಾರಗೊಂಡನಹಳ್ಳಿ ಆರ್.ಆರ್. ಲೇಔಟ್ ನಲ್ಲಿ ಘಟನೆ ನಡೆದಿದ್ದು, ಆರೋಪಿ ವೆಂಕಟೇಶ್​ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಸಂಬಂಧ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾರ್ಕಿಂಗ್​ ವಿಚಾರವಾಗಿ ಗಲಾಟೆ: ನಾಲ್ವರಿಗೆ ಚಾಕು ಇರಿತ
ಪಾರ್ಕಿಂಗ್​ ವಿಚಾರವಾಗಿ ಗಲಾಟೆ: ನಾಲ್ವರಿಗೆ ಚಾಕು ಇರಿತ
ರಾಚಪ್ಪಾಜಿ ನಾಯ್ಕ್
| Edited By: |

Updated on:Sep 27, 2025 | 9:38 AM

Share

ಬೆಂಗಳೂರು, ಸೆಪ್ಟೆಂಬರ್​ 27: ಪಾರ್ಕಿಂಗ್ ​ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ಹೋಗಿ ವ್ಯಕ್ತಿಯೋರ್ವ ನಾಲ್ವರಿಗೆ ಚಾಕು ಇರಿದಿರುವ ಘಟನೆ ಬೆಂಗಳೂರಿನ (Bengaluru) ಮಾರಗೊಂಡನಹಳ್ಳಿ ಆರ್.ಆರ್. ಲೇಔಟ್ ನಲ್ಲಿ ನಡೆದಿದೆ. ಘಟನೆಯಲ್ಲಿ ಹೇಮಂತ್, ಹನುಮಂತಮ್ಮ ಮತ್ತು ರಮೇಶ್ ಸೇರಿ ಓರ್ವ ಅಪ್ರಾಪ್ತ ಗಾಯಗೊಂಡಿದ್ದಾರೆ. ಆರೋಪಿ ವೆಂಕಟೇಶ್​ನನ್ನು ಕೆ.ಆರ್.ಪುರಂ ಪೊಲೀಸರು ಬಂಧಿಸಿದ್ದಾರೆ. ಸೆಪ್ಟೆಂಬರ್ 24ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ರಾತ್ರಿ 8.30 ಸುಮಾರಿಗೆ ತಮ್ಮ ದೊಡ್ಡಪ್ಪ ರಮೇಶ್​ ಜೊತೆ ಹೇಮಂತ್​ ಮನೆಯ ಮುಂಭಾಗ ಕುಳಿತಿದ್ದರು. ಈ ವೇಳೆ ವೇಗವಾಗಿ ಬಂದ ಸ್ಕಾರ್ಪಿಯೋ ಮನೆ ಬಳಿ ಇರುವ ಮೋರಿಯ ಮೇಲೆ ಪಾರ್ಕ್​ ಆಗಿದೆ. ಇದನ್ನ ಗಮನಿಸಿದ ಹೇಮಂತ್​, ಯಾಕೆ ಕಿಷ್ಟು ವೇಗವಾಗಿ ಬರುತ್ತೀರಾ ಎಂದು ಚಾಲಕ ವೆಂಕಟೇಶ್ ನನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಅವಾಚ್ಯ ಪದಗಳಿಂದ ವೆಂಕಟೇಶ್​ ನಿಂದಿಸಿದ್ದು, ಗಲಾಟೆ ಮಾಡಿದ್ದಾನೆ. ಯಾಕಪ್ಪ ಹೀಗೆ ಮಾಡ್ತಿದ್ದೀಯ ಎಂದು ಹೇಮಂತ್​ ದೊಡ್ಡಪ್ಪ ರಮೇಶ್​ ಪ್ರಶ್ನಿಸಿದ್ದೇ ತಡ ವೆಂಕಟೇಶ್​ ಕಾರಿನಿಂದ ಚಾಕು ತಂದು ಅಟ್ಯಾಕ್​ ಮಾಡಿದ್ದಾನೆ. ಎಡ ಕಾಲಿನ ತೊಡೆಗೆ ಚಾಕು ಇರಿದ ಪರಿಣಾಮ ರಮೇಶ್​ ಅಲ್ಲೇ ಕುಸಿದಿದ್ದು, ಗಲಾಟೆ ನೋಡಿ ಸ್ಥಳಕ್ಕೆ ಬಂದ ರಮೇಶ್ ಪತ್ನಿ ಹನುಮಂತಮ್ಮ, ಹೇಮಂತ್​ ಸೇರಿ ಅಪ್ರಾಪ್ತನಿಗೂ ಚಾಕುವಿನಿಂದ ಇರಿದು ಅಟ್ಟಹಾಸ ಮೆರೆದಿರುವ ಆರೋಪ ಕೇಳಿಬಂದಿದೆ. ಘಟನೆ ಸಂಬಂಧ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಅಪ್ಪನ ಜೇಬಿನಿಂದ ಹಣ ಕದ್ದಿದ್ದಕ್ಕೆ ಇಷ್ಟು ದೊಡ್ಡ ಶಿಕ್ಷೆಯೇ? ಅಪ್ರಾಪ್ತ ಮಗಳನ್ನು ಕೊಂದ ತಂದೆ

ಪೂಜೆಗೆ ಬಂದು ಚಿನ್ನ ಕದ್ದ ಅರ್ಚಕ

ಸತ್ಯನಾರಾಯಣ ಪೂಜೆಗೆ ಬಂದಿದ್ದ ಅರ್ಚಕನೇ ದೇವರಿಗೆ ಹಾಕಿದ್ದ 44 ಗ್ರಾಂ ಚಿನ್ನದ ಸರ ಎಗರಿಸಿರುವ ಘಟನೆ ಬೆಂಗಳೂರಿನ ಅಗ್ರಹಾರ ದಾಸರಹಳ್ಳಿಯಲ್ಲಿ ನಡೆದಿದೆ. ಘಟನೆ ಸಂಬಂಧ ಮುನೇಶ್ವರಸ್ವಾಮಿ ದೇವಸ್ಥಾನದ ಅರ್ಚಕ ರಮೇಶ್ ಶಾಸ್ತ್ರಿಯನ್ನ ಪೊಲೀಸರು ಬಂಧಿಸಿದ್ದಾರೆ. ತನಿಖೆ ವೇಳೆ ಅರ್ಚಕನ ಗೋವಾ ಕೆಸಿನೋ ಪ್ಲ್ಯಾನ್ ಬಯಲಿಗೆ ಬಂದಿದ್ದು, ಚಿನ್ನದ ಸರ ಗಿರವಿ ಇಟ್ಟು ರಮೇಶ್ ಹಣ ಪಡೆದಿದ್ದ. ಆ ಬಳಿಕ ಗೋವಾ ಕೆಸಿನೋದಲ್ಲಿ ಹಣ ಕಳೆದುಕೊಂಡಿದ್ದ ಎಂಬುದು ಗೊತ್ತಾಗಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:42 am, Sat, 27 September 25

ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ