AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋದಲ್ಲಿ ಭದ್ರತಾ ಲೋಪ, ಹಳಿಗೆ ಜಿಗಿದ ಮಗು!

ಆಕಸ್ಮಿಕವಾಗಿ ನಮ್ಮ ಮೆಟ್ರೋದ ಹಳಿಗೆ ನಾಲ್ಕು ವರ್ಷದ ಮಗು ಜಿಗಿದಿದ್ದು, ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದೆ. ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಇದರಿಂದ ಕೆಲಹೊತ್ತು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಆಗಿತ್ತು. ಮತ್ತೆ ಸಂಚಾರ ಯಥಾಸ್ಥಿತಿಗೆ ಬಂದಿದೆ.

ನಮ್ಮ ಮೆಟ್ರೋದಲ್ಲಿ ಭದ್ರತಾ ಲೋಪ, ಹಳಿಗೆ ಜಿಗಿದ ಮಗು!
ಮೆಟ್ರೋ
Kiran Surya
| Edited By: |

Updated on:Aug 02, 2024 | 11:35 AM

Share

ಬೆಂಗಳೂರು, ಆಗಸ್ಟ್​​ 02: ಆಕಸ್ಮಿಕವಾಗಿ ನಮ್ಮ ಮೆಟ್ರೋದ (Namma Metro) ಹಳಿಗೆ ನಾಲ್ಕು ವರ್ಷದ ಮಗು ಜಿಗಿದಿದ್ದು, ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದೆ. ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಮೆಟ್ರೋ ಹಳಿಗೆ ಮಗು ಜಿಗಿದಿದೆ. ಕೂಡಲೆ ಬಿಎಂಆರ್​ಸಿಎಲ್​ ಸಿಬ್ಬಂದಿ ಎರಡೂ ಮಾರ್ಗದ ರೈಲು ಸಂಚಾರ, ಹಳಿಯ ವಿದ್ಯುತ್​ ಸಂಚಾರ ಸ್ಥಗಿತಗೊಳಿಸಿ ಮಗುವನ್ನು ರಕ್ಷಿಸಿದ್ದಾರೆ. ಮಗು ಪ್ರಾಣಾಪಾಯದಿಂದ ಪಾರಾಗಿದೆ. ಇದರಿಂದ ಕೆಲಹೊತ್ತು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಆಗಿತ್ತು. ಮತ್ತೆ ಸಂಚಾರ ಯಥಾಸ್ಥಿತಿಗೆ ಬಂದಿದೆ.

ಯುವಕ ಆತ್ಮಹತ್ಯೆಗೆ ಯತ್ನ

ಜೂನ್​ ತಿಂಗಳಲ್ಲಿ ಯುವಕನೋರ್ವ ನೇರಳೆ ಮಾರ್ಗದ ಹೊಸಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದನು. ಕೂಡಲೆ ಮೆಟ್ರೋ ಸಿಬ್ಬಂದಿ ಯುವಕನನ್ನು ಸದ್ಯ ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ್ದರು.

ಇದನ್ನೂ ಓದಿ: ಮೆಟ್ರೋ ಹಂತ-3 ಯೋಜನೆಗೆ ಕೇಂದ್ರ ಹಣಕಾಸು ಸಚಿವಾಲಯ ಅನುಮತಿ, ಡಬಲ್ ಡೆಕ್ಕರ್ ಮೇಲ್ಸೇತುವೆಗಳಿಗೆ ಚಿಂತನೆ

ಇದಕ್ಕೂ ಮುನ್ನ ನೇರಳೆ ಮಾರ್ಗದ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಇದೇ ರೀತಿ ಯುವಕನೊಬ್ಬ ಮೆಟ್ರೋ ಟ್ರ್ಯಾಕ್‌ಗೆ ಜಿಗಿದು ಪ್ರಾಣ ಬಿಟ್ಟಿದ್ದನು. ರೈಲು ಬರೋದನ್ನೇ ಕಾಯುತ್ತಿದ್ದ ಧ್ರುವ ಟಕ್ಕರ್‌ ಎಂಬ ಯುವಕ ನೋಡ ನೋಡುತ್ತಿದ್ದಂತೆ ಹಳಿಗೆ ಹಾರಿದ್ದನು. ಕ್ಷಣ ಮಾತ್ರದಲ್ಲೇ ಆತನ ಮೇಲಿ ರೈಲು ಹರಿದು ಅಲ್ಲೇ ಪ್ರಾಣ ಬಿಟ್ಟಿದ್ದನು. ಆತನ ದೇಹ ಎರಡು ತುಂಡಾಗಿತ್ತು.

ಅಷ್ಟಕ್ಕೂ ಧ್ರುವ ಹಳಿಗೆ ಜಿಗಿಯುತ್ತಿದ್ದಂತೆ ಜತೆಗಿದ್ದ ಸ್ನೇಹಿತರು ಎಳೆಯೋ ಪ್ರಯತ್ನ ಮಾಡಿದ್ದರು. ಆದರೆ ರೈಲು ಬರ್ತಿದ್ದಂತೆ ಅವರೆಲ್ಲಾ ಹಿಂದೆ ಸರಿದಿದ್ದರು. ಮುಂಬೈ ಮೂಲದ ಧ್ರುವ ಟಕ್ಕರ್‌, ನ್ಯಾಷನಲ್‌ ಕಾಲೇಜ್‌ನಲ್ಲಿ ಮೊದಲ ವರ್ಷದ ಲಾ ವ್ಯಾಸಂಗ ಮಾಡುತ್ತಿದ್ದ. ಆದರೆ ಅಂದು ಏನಾಯ್ತೋ ಏನೋ. ಸ್ನೇಹಿತರ ಜತೆ ಫೋನ್‌ನಲ್ಲಿ ಮಾತನಾಡ್ತಾ ಬಂದವನು ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:35 am, Fri, 2 August 24

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್