AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋದಲ್ಲಿ ಭದ್ರತಾ ಲೋಪ, ಹಳಿಗೆ ಜಿಗಿದ ಮಗು!

ಆಕಸ್ಮಿಕವಾಗಿ ನಮ್ಮ ಮೆಟ್ರೋದ ಹಳಿಗೆ ನಾಲ್ಕು ವರ್ಷದ ಮಗು ಜಿಗಿದಿದ್ದು, ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದೆ. ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಇದರಿಂದ ಕೆಲಹೊತ್ತು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಆಗಿತ್ತು. ಮತ್ತೆ ಸಂಚಾರ ಯಥಾಸ್ಥಿತಿಗೆ ಬಂದಿದೆ.

ನಮ್ಮ ಮೆಟ್ರೋದಲ್ಲಿ ಭದ್ರತಾ ಲೋಪ, ಹಳಿಗೆ ಜಿಗಿದ ಮಗು!
ಮೆಟ್ರೋ
Kiran Surya
| Edited By: |

Updated on:Aug 02, 2024 | 11:35 AM

Share

ಬೆಂಗಳೂರು, ಆಗಸ್ಟ್​​ 02: ಆಕಸ್ಮಿಕವಾಗಿ ನಮ್ಮ ಮೆಟ್ರೋದ (Namma Metro) ಹಳಿಗೆ ನಾಲ್ಕು ವರ್ಷದ ಮಗು ಜಿಗಿದಿದ್ದು, ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದೆ. ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಮೆಟ್ರೋ ಹಳಿಗೆ ಮಗು ಜಿಗಿದಿದೆ. ಕೂಡಲೆ ಬಿಎಂಆರ್​ಸಿಎಲ್​ ಸಿಬ್ಬಂದಿ ಎರಡೂ ಮಾರ್ಗದ ರೈಲು ಸಂಚಾರ, ಹಳಿಯ ವಿದ್ಯುತ್​ ಸಂಚಾರ ಸ್ಥಗಿತಗೊಳಿಸಿ ಮಗುವನ್ನು ರಕ್ಷಿಸಿದ್ದಾರೆ. ಮಗು ಪ್ರಾಣಾಪಾಯದಿಂದ ಪಾರಾಗಿದೆ. ಇದರಿಂದ ಕೆಲಹೊತ್ತು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಆಗಿತ್ತು. ಮತ್ತೆ ಸಂಚಾರ ಯಥಾಸ್ಥಿತಿಗೆ ಬಂದಿದೆ.

ಯುವಕ ಆತ್ಮಹತ್ಯೆಗೆ ಯತ್ನ

ಜೂನ್​ ತಿಂಗಳಲ್ಲಿ ಯುವಕನೋರ್ವ ನೇರಳೆ ಮಾರ್ಗದ ಹೊಸಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದನು. ಕೂಡಲೆ ಮೆಟ್ರೋ ಸಿಬ್ಬಂದಿ ಯುವಕನನ್ನು ಸದ್ಯ ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ್ದರು.

ಇದನ್ನೂ ಓದಿ: ಮೆಟ್ರೋ ಹಂತ-3 ಯೋಜನೆಗೆ ಕೇಂದ್ರ ಹಣಕಾಸು ಸಚಿವಾಲಯ ಅನುಮತಿ, ಡಬಲ್ ಡೆಕ್ಕರ್ ಮೇಲ್ಸೇತುವೆಗಳಿಗೆ ಚಿಂತನೆ

ಇದಕ್ಕೂ ಮುನ್ನ ನೇರಳೆ ಮಾರ್ಗದ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಇದೇ ರೀತಿ ಯುವಕನೊಬ್ಬ ಮೆಟ್ರೋ ಟ್ರ್ಯಾಕ್‌ಗೆ ಜಿಗಿದು ಪ್ರಾಣ ಬಿಟ್ಟಿದ್ದನು. ರೈಲು ಬರೋದನ್ನೇ ಕಾಯುತ್ತಿದ್ದ ಧ್ರುವ ಟಕ್ಕರ್‌ ಎಂಬ ಯುವಕ ನೋಡ ನೋಡುತ್ತಿದ್ದಂತೆ ಹಳಿಗೆ ಹಾರಿದ್ದನು. ಕ್ಷಣ ಮಾತ್ರದಲ್ಲೇ ಆತನ ಮೇಲಿ ರೈಲು ಹರಿದು ಅಲ್ಲೇ ಪ್ರಾಣ ಬಿಟ್ಟಿದ್ದನು. ಆತನ ದೇಹ ಎರಡು ತುಂಡಾಗಿತ್ತು.

ಅಷ್ಟಕ್ಕೂ ಧ್ರುವ ಹಳಿಗೆ ಜಿಗಿಯುತ್ತಿದ್ದಂತೆ ಜತೆಗಿದ್ದ ಸ್ನೇಹಿತರು ಎಳೆಯೋ ಪ್ರಯತ್ನ ಮಾಡಿದ್ದರು. ಆದರೆ ರೈಲು ಬರ್ತಿದ್ದಂತೆ ಅವರೆಲ್ಲಾ ಹಿಂದೆ ಸರಿದಿದ್ದರು. ಮುಂಬೈ ಮೂಲದ ಧ್ರುವ ಟಕ್ಕರ್‌, ನ್ಯಾಷನಲ್‌ ಕಾಲೇಜ್‌ನಲ್ಲಿ ಮೊದಲ ವರ್ಷದ ಲಾ ವ್ಯಾಸಂಗ ಮಾಡುತ್ತಿದ್ದ. ಆದರೆ ಅಂದು ಏನಾಯ್ತೋ ಏನೋ. ಸ್ನೇಹಿತರ ಜತೆ ಫೋನ್‌ನಲ್ಲಿ ಮಾತನಾಡ್ತಾ ಬಂದವನು ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:35 am, Fri, 2 August 24

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್