AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸೋಶಿಯಲ್ ಮೀಡಿಯಾ ಸ್ಟಾರ್​ನಿಂದ ವಂಚನೆ; ಸಹೋದರಿಯ ಆತ್ಮಹತ್ಯೆಗೆ ನ್ಯಾಯ ಕೊಡಿಸುವಂತೆ ಗೃಹ ಸಚಿವರಿಗೆ ಪತ್ರ

ಸಾಮಾಜಿಕ ಜಾಲತಾಣದ ಸ್ಟಾರ್​ ಅಬ್ರಾರ್ ಶೇಕ್ ನನ್ನ ಸಹೋದರಿಯನ್ನು ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ ವಂಚಿಸಿದ್ದಾರೆ ಎಂದು ಸಿಮ್ರಾನ್ ಬಾನು ಆರೋಪಿಸಿದ್ದಾರೆ.

ಬೆಂಗಳೂರು: ಸೋಶಿಯಲ್ ಮೀಡಿಯಾ ಸ್ಟಾರ್​ನಿಂದ ವಂಚನೆ; ಸಹೋದರಿಯ ಆತ್ಮಹತ್ಯೆಗೆ ನ್ಯಾಯ ಕೊಡಿಸುವಂತೆ ಗೃಹ ಸಚಿವರಿಗೆ ಪತ್ರ
ಪ್ರಾತಿನಿಧಿಕ ಚಿತ್ರ
Shivaprasad B
| Updated By: ಕಿರಣ್ ಹನುಮಂತ್​ ಮಾದಾರ್|

Updated on: Sep 15, 2023 | 8:06 PM

Share

ಬೆಂಗಳೂರು, ಸೆ.15: ಸಾಮಾಜಿಕ ಜಾಲತಾಣದ ಪ್ರಭಾವಿ ಸ್ಟಾರ್​ ಅಬ್ರಾರ್ ಶೇಕ್ ಎಂಬಾತ ಯುವತಿಯೋರ್ವಳಿಗೆ ಮದುವೆ ಆಗುವುದಾಗಿ ನಂಬಿಸಿ ವಂಚಿಸಿದ ಘಟನೆ ಬೆಂಗಳೂರಿನ (Bengaluru) ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದರಿಂದ ನೊಂದ ಯುವತಿ ಆತ್ಮಹತ್ಯೆಗೆ ಶರಣಾಗಿದ್ದು, ಸೆಪ್ಟೆಂಬರ್ 11 ರಂದು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇದೀಗ ಆತ್ಮಹತ್ಯೆಗೆ ಆತನೇ ಕುಮ್ಮಕ್ಕು ನೀಡಿದ ಆರೋಪ ಕೇಳಿಬಂದಿದೆ. ಮುಸ್ಕಾನ್ ಖಾನೂಮ್(27) ಆತ್ಮಹತ್ಯೆಗೆ ಶರಣಾದ ಯುವತಿ. ಇನ್ನು ಈ ಘಟನೆಗೆ ಸಂಬಂಧಪಟ್ಟಂತೆ ಆರೋಪಿಯ ವಿರುದ್ಧ ದೂರು ದಾಖಲಿಸಿಕೊಳ್ಳಲು ಪೊಲೀಸರು ನಿರಾಕರಿಸಿದ ಹಿನ್ನೆಲೆ ಸಂತ್ರಸ್ತೆಯ ಸಹೋದರಿ ಸಿರಾನ್ ಬಾನು ಎಂಬುವವರು ಕರ್ನಾಟಕ ಗೃಹ ಸಚಿವರು, ರಾಷ್ಟ್ರೀಯ ಮಹಿಳಾ ಆಯೋಗ, ಕರ್ನಾಟಕದ ಮುಖ್ಯ ನ್ಯಾಯಮೂರ್ತಿ ಹಾಗೂ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ನನ್ನ ಸಹೋದರಿ ಮುಸ್ಕಾನ್ ಖಾನಮ್‌ಗೆ ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿದ್ದ. ಮತ್ತು ಆಕೆಯ ಜೊತೆ ವರ್ಷಗಳ ಕಾಲ ಸಂಬಂಧದಲ್ಲಿದ್ದು. ಇತ್ತೀಚೆಗೆ ಅವಳನ್ನು ನಿರ್ಲಕ್ಷಿಸಿದ್ದಾನೆ. ಇದರಿಂದ ಮನನೊಂದು ಮುಸ್ಕಾನ್ ಖಾನಮ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಇನ್ನು ಈ ಕುರಿತು ಪೊಲೀಸ್​ ಠಾಣೆಗೆ ದೂರು ನೀಡದಂತೆ ಅಬ್ರಾರ್ ಶೇಕ್ ಬೆದರಿಕೆ ಹಾಕಿದ್ದಾರೆ ಎಂದು ಸಿಮ್ರಾನ್ ಬಾನು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ ಇತ ನನ್ನ ಸಹೋದರಿಯ ಖಾಸಗಿ ವೀಡಿಯೊಗಳನ್ನು ಆನ್‌ಲೈನ್‌ನಲ್ಲಿ ಲೀಕ್​ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಇದನ್ನೂ ಓದಿ:ಗೆಳತಿಯಿಂದ ಅತ್ಯಾಚಾರ ಆರೋಪ, ಮನನೊಂದು ಫೇಸ್​ಬುಕ್​ ಲೈವ್​ನಲ್ಲಿಯೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ

“ಜೊತೆಗೆ ಅವರು ನನ್ನ ಸಹೋದರಿಯ ಆತ್ಮಹತ್ಯೆಗೆ ಶರಣಾದ ನಂತರ ಆತನ ಜೊತೆಗೆ ಮಾಡಿದ ಮೇಸೆಜ್​ ಹೊಂದಿದ್ದ ಫೋನ್​ನ್ನು ಕಳ್ಳತನ ಮಾಡಿದ್ದಾನೆ. ಆತ ಪ್ರಭಾವಿಯಾಗಿರುವ ಕಾರಣ ರಾಜಕಾರಣಿಗಳು ಮತ್ತು ರೌಡಿಗಳೊಂದಿಗೆ ನಿಕಟ ಸಂಬಂಧ ಹೊಂದಿರುವುದಾಗಿ ಹೇಳಿಕೊಂಡು ನನಗೆ ಮತ್ತು ನನ್ನ ಪತಿಗೆ ಬೆದರಿಕೆ ಹಾಕಿದ್ದಾರೆ ಎಂದು ಸಿಮ್ರಾನ್ ಬಾನು ದೂರಿನಲ್ಲಿ ಆರೋಪಿಸಿದ್ದಾರೆ. ಇನ್ನು ಇತ ಹಲವಾರು ಯುವತಿಯರಿಗೆ ಮದುವೆ ಆಗುವುದಾಗಿ ಸುಳ್ಳು ಭರವಸೆ ನೀಡಿ, ಅವರೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿದ್ದು, ನನ್ನ ತಂಗಿಯ ಸಾವಿಗೆ ನ್ಯಾಯ ದೊರಕಿಸಿ ಕೊಡಬೇಕೆಂದು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?