AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಯದೇವ ಆಸ್ಪತ್ರೆಯಲ್ಲಿ ಉಚಿತ ಆಂಜಿಯೋಪ್ಲ್ಯಾಸ್ಟಿ ಕಾರ್ಯಾಗಾರ; ಇಲ್ಲಿದೆ ವಿವರ

ಬಡರೋಗಿಗಳಿಗೆ ಸಹಾಯವಾಗುವ ದೃಷ್ಟಿಯಿಂದ ಜಯದೇವ ಆಸ್ಪತ್ರೆ(Jayadeva hospital)ಯಲ್ಲಿ ಉಚಿತ ಇಂಡೋ ಅಮೆರಿಕನ್ ಆಂಜಿಯೋಪ್ಲ್ಯಾಸ್ಟಿ(Angioplasty) ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು, ಬೆಂಗಳೂರು ಹಾಗೂ ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ಉಚಿತ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆ ನೀಡಲಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ.

ಜಯದೇವ ಆಸ್ಪತ್ರೆಯಲ್ಲಿ ಉಚಿತ ಆಂಜಿಯೋಪ್ಲ್ಯಾಸ್ಟಿ ಕಾರ್ಯಾಗಾರ; ಇಲ್ಲಿದೆ ವಿವರ
ಜಯದೇವ ಆಸ್ಪತ್ರೆಯಲ್ಲಿ ಉಚಿತ ಆಂಜಿಯೋಪ್ಲ್ಯಾಸ್ಟಿ ಕಾರ್ಯಾಗಾರ
Vinay Kashappanavar
| Edited By: |

Updated on:Sep 03, 2024 | 7:43 PM

Share

ಬೆಂಗಳೂರು, ಸೆ.03: ಮೈಸೂರು ಹಾಗೂ  ಬೆಂಗಳೂರಿನ ಜಯದೇವ ಆಸ್ಪತ್ರೆ(Jayadeva hospital)ಯಲ್ಲಿ ಉಚಿತ ಇಂಡೋ ಅಮೆರಿಕನ್ ಆಂಜಿಯೋಪ್ಲ್ಯಾಸ್ಟಿ(Angioplasty) ಕಾರ್ಯಾಗಾರವನ್ನು ಜಯದೇವ ಹಾಗೂ ಅಮೆರಿಕ ವೈದ್ಯರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ. ಇದೇ ಸೆಪ್ಟೆಂಬರ್​​ 15ರಿಂದ ಈ ಕಾರ್ಯಾಗಾರ ನಡೆಯಲಿದ್ದು,  ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಸೆ.24, 25ರಂದು ಬಡ ರೋಗಿಗಳಿಗೆ ಉಚಿತ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆ ನೀಡಲಿದ್ದಾರೆ.

ಮೈಸೂರು ಜಯದೇವದಲ್ಲೂ ಉಚಿತ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆ

ಇನ್ನು ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 26, 27, 28ರಂದು ಮೂರು ದಿನಗಳ ಕಾಲ 150 ಬಡರೋಗಿಗಳಿಗೆ ಉಚಿತ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆ ನೀಡಲಿದ್ದಾರೆ. ಇನ್ನು ಚಿಕಿತ್ಸೆಗೆ ಬರುವ ಬಡರೋಗಿಗಳು ಬಿಪಿಎಲ್ ಕಾರ್ಡ್​ನ್ನು ಕಡ್ಡಾಯವಾಗಿ ತೆಗೆದುಕೊಂಡು ಬರಲು ಜಯದೇವ ಆಸ್ಪತ್ರೆ ತಿಳಿಸಿದೆ.

ಇದನ್ನೂ ಓದಿ:ಜಯದೇವ ಆಸ್ಪತ್ರೆ 24 ಗಂಟೆ ಕಾರ್ಯನಿರ್ವಹಣೆ, ಇನ್ಮುಂದೆ ಗೋಲ್ಡನ್ ಟೈಮ್​ನಲ್ಲೂ ಚಿಕಿತ್ಸೆ ಸಿಗುತ್ತೆ

ಇನ್ನು ಕಳೆದ ಆಗಸ್ಟ್ 28 ರಂದು ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ದಿನದ 24 ಗಂಟೆಯೂ ಕೆಲಸ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದರು. ಜೊತೆಗೆ ಇದಕ್ಕೆ ಅಗತ್ಯವಿರುವ ಸಿಬ್ಬಂದಿ ಮತ್ತು ಹಣವನ್ನು ರಾಜ್ಯ ಸರಕಾರದಿಂದ ಕಲ್ಪಿಸಲಾಗುವುದು ಎಂದು  ಘೋಷಿಸಿದ್ದರು. ತುರ್ತು ಚಿಕಿತ್ಸೆಗೆ ಸಾವಿರಾರು ಜನರು ಬರ್ತಿದ್ದು, ಆದರೆ ಸಂಜೆ 4 ಗಂಟೆಯ ಬಳಿಕ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ರೋಗಿಗಳು ಪರದಾಡವಂತಾಗಿತ್ತು. ಈ ಹಿನ್ನಲೆ ರೋಗಿಗಳು ಆಸ್ಪತ್ರೆಯ ಸಮಯ ಹಚ್ಚಿಸಿ, ಸಂಜೆ ಬಳಿಕವೂ ಚಿಕಿತ್ಸೆ ನೀಡುವಂತೆ ಒತ್ತಾಯ ಮಾಡಿದ್ದರು. ಅದರಂತೆ ದಿನದ 24 ಗಂಟೆಯೂ ಚಿಕಿತ್ಸೆ ನೀಡುವಂತೆ ಸಿಎಂ ಸೂಚಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:04 pm, Tue, 3 September 24

Follow Us
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ